ರೆಡಿಯಾಯ್ತು ಬಿಎಸ್ ವೈ ಬ್ರಿಗೇಡ್: ರಾಜಭವನದಲ್ಲಿ ಗರಿಗೆದರಿದ ಚಟುಟಿಕೆಗಳು
Team Udayavani, Aug 20, 2019, 9:24 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ 26 ದಿನ ಕಳೆದ ಬಳಿಕ ಇಂದು ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಇಂದು 10.30ರಿಂದ 11.30ರವರೆಗೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗಧಿಯಾಗಿದ್ದು, ರಾಜಭವನದಲ್ಲಿ ಚಟುವಟಿಕೆಗಳು ಗರಿಗೆದರಿದೆ.
ಬಿಎಸ್ ವೈ ಸಂಪುಟಕ್ಕೆ ಮೊದಲ ಹಂತದಲ್ಲಿ 17 ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಇಂದು ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್. ಅಶೋಕ್, ಸಿ.ಟಿ.ರವಿ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ವಿ.ಸೋಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಸುರೇಶ್ ಕುಮಾರ್ , ಬಸವರಾಜು ಬೊಮ್ಮಾಯಿ, ಪ್ರಭು ಚವ್ಹಾಣ್, ಶಶಿಕಲಾ ಜೊಲ್ಲೆ, ಎಚ್. ನಾಗೇಶ್. ಸಿ .ಸಿ ಪಾಟೀಲ್, ಜೆ.ಸಿ ಮಾಧು ಸ್ವಾಮಿ ಅವರು ಇಂದು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿಯ ಎಲ್ಲಾ ಶಾಸಕರು ರಾಜಭವನದತ್ತ ಆಗಮಿಸುತ್ತಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಕೂಡಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಆದರೆ ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿದ್ದು. ರಾಜಭವನ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇರುವ ಕಾರಣ ರಾಜಭವನದ ಸಮೀಪದ ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!