ಶಾಲಾ ದುರಸ್ತಿ; ಗ್ರಾಮಸ್ಥರ ಇಚ್ಛಾಶಕ್ತಿಯೇ ಆಸ್ತಿ

•ಶಿಕ್ಷಕರ ಕರೆಗೆ ಓಗೊಟ್ಟ ದ್ಯಾಮಾಪುರ•ವಂತಿಗೆಯಿಂದ ಸೋರುವ ಮಾಳಿಗೆ ರಿಪೇರಿ

Team Udayavani, Aug 20, 2019, 9:39 AM IST

huballi-tdy-3

ಕಲಘಟಗಿ: ದ್ಯಾಮಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಮೇಲ್ಛಾವಣಿಯನ್ನು ಗ್ರಾಮಸ್ಥರ ಸಹಾಯಧನದಿಂದ ರಿಪೇರಿ ಮಾಡುತ್ತಿರುವುದು.

ಕಲಘಟಗಿ: ನೆರೆ ಪರಿಹಾರಕ್ಕಾಗಿ ಪರಿತಪಿಸುತ್ತಿರುವ ಜನರೇ ಹೆಚ್ಚಿರುವ ಸಂದರ್ಭದಲ್ಲಿ ತಾಲೂಕಿನ ದ್ಯಾಮಾಪುರ ಗ್ರಾಮಸ್ಥರು ಶಿಕ್ಷಕ ವೃಂದದ ಕೋರಿಕೆಗೆ ಕಟ್ಟುಬಿದ್ದು ಸ್ವಂತ ವಂತಿಗೆಯಿಂದ ಸೋರುತ್ತಿರುವ ಸರ್ಕಾರಿ ಶಾಲಾ ಕೊಠಡಿ ರಿಪೇರಿಗೆ ಮುಂದಾಗಿ ಮಾದರಿಯಾಗಿದ್ದಾರೆ.

ಕೆಲ ದಿನಗಳ ಹಿಂದೆ ಸುರಿದ ನಿರಂತರ ಅಬ್ಬರದ ಮಳೆಗೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳಲ್ಲಿ ಒಂದು ಕೊಠಡಿ ಮೇಲ್ಛಾವಣಿಯ ತಗಡುಗಳು ಸಂಪೂರ್ಣ ಹಾಳಾಗಿ ಒಳಗಡೆ ನೀರಿನಿಂದಾವೃತವಾಗಿತ್ತು. ನೆರೆಯ ರಜೆ ಮುಗಿದು ಶಾಲೆ ಪುನಾರಂಭ ಗೊಂಡಾಗ ಮಕ್ಕಳನ್ನು ಅಲ್ಲಿ ಕೂಡ್ರಿಸಲಾಗದ ದುಸ್ಥಿತಿ ಇತ್ತು.

ಅದಾಗಲೇ ಬಂದ ಸ್ವಾತಂತ್ರ್ಯೋತ್ಸವಕ್ಕೆ ಪಾಲಕರನ್ನು ಹಾಗೂ ಗ್ರಾಮಸ್ಥರನ್ನೆಲ್ಲ ಆಮಂತ್ರಿಸಿದ ಮುಖ್ಯಾಧ್ಯಾಪಕಿ ಎಸ್‌.ಬಿ. ಗುಂಡೂರ ಹಾಗೂ ಹಿರಿಯ ಶಿಕ್ಷಕ ಎಸ್‌.ಬಿ. ಬಾರಕೇರ ಶಾಲಾ ಕಟ್ಟಡದ ದುಸ್ಥಿತಿಯ ಚಿತ್ರಣ ತೆರೆದಿಟ್ಟಿದ್ದಾರೆ. ಪರಿಹಾರಕ್ಕೆ ಮಾರ್ಗೋಪಾಯವನ್ನೂ ಹೇಳಿದ್ದಾರೆ. ಅದರ ಫಲಶೃತಿಯೇ ಇಂದು ಗ್ರಾಮಸ್ಥರೆಲ್ಲರೂ ಸರ್ಕಾರದ ನೆರವನ್ನು ನಿರೀಕ್ಷಿಸದೇ ತಮ್ಮ ಸ್ವಂತ ವಂತಿಗೆಯಿಂದ 50 ಸಾವಿರ ರೂ. ಸಂಗ್ರಹಿಸಿ ಕೊ ಠಡಿ ಮೇಲ್ಛಾವಣಿಗೆ ಹೊಸ ತಗಡು ಹಾಕಿ ದುರಸ್ತಿಗೊಳಿಸುತ್ತಿದ್ದಾರೆ.

ಅಧಿಕಾರಿಗಳ ಸ್ಪಂದನೆ ಅಷ್ಟಕ್ಕಷ್ಟೆ: 1ರಿಂದ 5ನೇ ತರಗತಿಯ ಶಾಲೆಯಲ್ಲಿ ಇರುವುದು ಇಬ್ಬರೇ ಶಿಕ್ಷಕರು. 36 ವಿದ್ಯಾರ್ಥಿಗಳಿದ್ದು, ಮೂರು ತರಗತಿ ಕೋಣೆಗಳಿವೆ. ಅದರಲ್ಲಿ ಒಂದು ಕೋಣೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಬಲಿಗಾಗಿ ಕಾಯುತ್ತಿರುವಂತಿದೆ. ಅಲ್ಲಿ ವರ್ಗವನ್ನು ನಡೆಸದಂತೆ ಗ್ರಾಮಸ್ಥರು ವರ್ಷಗಳ ಹಿಂದೆಯೇ ತಾಕೀತು ಮಾಡಿದ್ದಾರೆ. ಹಲವು ವರ್ಷಗಳಿಂದ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಅದನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವ ಯಾವುದೇ ಫಲಪ್ರದ ಕಾರ್ಯ ಜರುಗಿಲ್ಲ.

ಕೆಲ ದಿನಗಳ ಹಿಂದ ಸುರಿದ ಭಾರೀ ಮಳೆಯಿಂದಾಗಿ ಇದ್ದ ಇನ್ನೊಂದು ವರ್ಗದ ಕೋಣೆಯೂ ಸೋರುತ್ತಿರುವುದರಿಂದ ಜಲಾವೃತ್ತ ಗೊಂಡಿತ್ತು. ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿಯೇ ಪ್ರಸ್ತಾಪ ಮಾಡಿದ ಇಬ್ಬರೂ ಶಿಕ್ಷಕರು ಪ್ರಥಮದಲ್ಲಿ ತಮ್ಮ 2000 ರೂ. ದೇಣಿಗೆ ನೀಡಿದರು. ನಂತರ ಎಸ್‌ಡಿಎಂಸಿಯವರು ಹಾಗೂ ಗ್ರಾಮಸ್ಥರೆಲ್ಲರೂ ದೇಣಿಗೆ ಸಂಗ್ರಹಿಸಿ ಶಾಲಾ ಕೊಠಡಿ ದುರಸ್ತಿಗೆ ಮುಂದಾಗಿದ್ದಾರೆ.

ಮಾದರಿ ಶಿಕ್ಷಕರು: ಶಾಲೆಯ ಮುಖ್ಯಾಧ್ಯಾಪಕಿ ಎಸ್‌.ಬಿ. ಗುಂಡೂರ ಆದರ್ಶ ಶಿಕ್ಷಕಿಯಾಗಿದ್ದಾರೆ. ಪಾಲಕರ ಮನವೊಲಿಸಿ ಎರಡು ಸೆಟ್ ಬಣ್ಣದ ಟ್ರ್ಯಾಕ್‌ಶೂಟ್‌ನಲ್ಲಿ ಸರ್ಕಾರಿ ಶಾಲಾ ಮಕ್ಕಳು ಕಂಗೊಳಿಸುವಂತೆ ಮಾಡಿದ್ದಾರೆ. ಶಾಲೆ ಆವರಣವನ್ನು ಕೈತೋಟದಿಂದ ಪರಿಸರ ಪ್ರೇಮ ಹುಟ್ಟುವಂತೆ ಮಾಡಿದ್ದಾರೆ. ತಮ್ಮ ಸ್ವಂತ ಹಣ ವಿನಿಯೋಗಿಸಿ ನೂರಾರು ಗಿಡಗಳನ್ನು ನೆಟ್ಟು ಬೆಳೆಸುತ್ತಿದ್ದಾರೆ. ಚಿಕ್ಕಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ಪ್ರೋತ್ಸಾಹ ನೀಡುತಿದ್ದಾರೆ.

ಶಾಲಾ ಮೇಲ್ಛಾವಣಿ ಸೋರುವಿಕೆಯಿಂದಾಗಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಸ್ಥಳಾವಕಾಶವಿಲ್ಲವಾಗಿತ್ತು. ತತ್‌ಕ್ಷಣ ಸರ್ಕಾರದಿಂದ ರಿಪೇರಿ ಅಸಾಧ್ಯದ ಮಾತು. ಆದ್ದರಿಂದ ಗ್ರಾಮದಲ್ಲಿ ಪಟ್ಟಿ ಹಾಕಿ ಸುಧಾರಣೆ ಮಾಡಬೇಕೆಂಬ ಶಿಕ್ಷಕಿ ಎಸ್‌.ಬಿ. ಗುಂಡೂರ ಅವರ ಅಭಿಲಾಷೆಗೆ, ನೆರವಾದ ಗ್ರಾಮಸ್ಥರಿಗೆ ಕೃತಜ್ಞರಾಗಿದ್ದೇವೆ. ಸರ್ಕಾರದ ಹಣ ಬಂದಾಗ ಮತ್ತೆ ಅಭಿವೃದ್ಧಿ ಕಾರ್ಯ ಮಾಡುತ್ತೇವೆ.•ವಸಂತ ಮಾಳಗಿ, ಎಸ್‌ಡಿಎಂಸಿ ಅಧ್ಯಕ್ಷ

 

•ಪ್ರಭಾಕರ ನಾಯಕ

ಟಾಪ್ ನ್ಯೂಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.