ಸಿಬ್ಬಂದಿ ನಿಯೋಜನೆ ಸೆ. 5 ರಿಂದ ಕುಷ್ಠ ರೋಗ ಪತ್ತೆ ಅಭಿಯಾನ: ವಿನೋತ್‌ ಪ್ರಿಯಾ


Team Udayavani, Aug 20, 2019, 2:31 PM IST

cd-tdy-1

ಚಿತ್ರದುರ್ಗ: ಕುಷ್ಠರೋಗ ಪತ್ತೆ ಅಭಿಯಾನದ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಬಿಡುಗಡೆ ಮಾಡಿದರು.

ಚಿತ್ರದುರ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೆ. 5 ರಿಂದ 23 ರವರೆಗೆ ಜಿಲ್ಲೆಯಾದ್ಯಂತ ಕುಷ್ಠರೋಗ ಪತ್ತೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ ಹೇಳಿದರು.

ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಮಾಡುವ ವಿಶೇಷ ಅಭಿಯಾನದ ಕುರಿತು ಜಿಲ್ಲಾಧಿಕಾರಿ ಕಚೇರಿ

ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಿತ್ರದುರ್ಗ ನಗರ ಸೇರಿದಂತೆ 3,84,020 ಮನೆಗಳಿಗೆ ತೆರಳಿ ರೋಗ ಪತ್ತೆ ಮಾಡುವ ಮಹತ್ವದ ಕಾರ್ಯಕ್ರಮ ಇದಾಗಿದೆ ಎಂದರು.

ಕಾರ್ಯಕ್ರಮ ಯಶಸ್ವಿಯಾಗಲು 1407 ತಂಡಗಳ ಅಡಿಯಲ್ಲಿ ಮೇಲ್ವಿಚಾರಕರು ಸೇರಿದಂತೆ 3096 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ಹಿಂದೆ ಪತ್ತೆಯಾಗಿದ್ದವರು, ಗುಣಮುಖರಾದವರು, ಚಿಕಿತ್ಸೆ ಪಡೆಯುತ್ತಿರುವವರ ವಿಳಾಸ ಮತ್ತು ವಿವರ ಆರೋಗ್ಯ ಇಲಾಖೆಯಲ್ಲಿರಬೇಕು ಎಂದು ಸೂಚಿಸಿದರು.

ಅಭಿಯಾನಕ್ಕೆ ತೆರಳುವ ಸಿಬ್ಬಂದಿಗಳು ತಪ್ಪದೇ ಎಲ್ಲಾ ಹಾಸ್ಟೆಲ್ಗಳಿಗೂ ಭೇಟಿ ನೀಡಿ ತಪಾಸಣೆ ನಡೆಸಬೇಕು. ಕಳೆದ ವರ್ಷ ಕೈಗೊಂಡ ರೋಗ ಪತ್ತೆ ಅಭಿಯಾನದಲ್ಲಿ 9962 ಶಂಕಾಸ್ಪದ ಪ್ರಕರಣಗಳನ್ನು ಗುರುತಿಸಿ ಒಟ್ಟು 18 ಹೊಸ ರೋಗಿಗಳನ್ನು ಪತ್ತೆ ಮಾಡಲಾಗಿತ್ತು ಎಂದರು. ಈ ಅಭಿಯಾನ ಪರಿಣಾಮಕಾರಿಯಾಗಲು ಸ್ಥಳೀಯವಾಗಿ ಆಶಾ ಕಾರ್ಯಕರ್ತೆಯರನ್ನು ಬಳಕೆ ಮಾಡುವುದು ಬೇಡ. ಅವರನ್ನು ಬೇರೆ ಗ್ರಾಮಗಳಿಗೆ ನಿಯೋಜಿಸಬೇಕು. ಅಗತ್ಯವಿದ್ದಲ್ಲಿ ನರ್ಸಿಂಗ್‌, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಬಳಸಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ವೈದ್ಯರ ಸಂಘ ಹಾಗೂ ಚರ್ಮರೋಗ ತಜ್ಞರ ಸಂಘಗಳು ಸಕ್ರಿಯವಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಉಚಿತವಾಗಿ ತಪಾಸಣಾ ಶಿಬಿರ ಆಯೋಜಿಸಬೇಕು. ಸಂಶಯಾಸ್ಪದ ಪ್ರಕರಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಗೆ ಶಿಫಾರಸು ಮಾಡಬೇಕು ಎಂದು ತಿಳಿಸಿದರು.

ನಗರದಲ್ಲಿ ಮೂರು ಆರೋಗ್ಯ ಕೇಂದ್ರಗಳಿದ್ದರೂ ನಗರದ ಜನತೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಬರುತ್ತಿದ್ದಾರೆ. ಇದರಿಂದ ವೈದ್ಯರು ವಾರ್ಡ್‌ಗಳ ಭೇಟಿ, ತುರ್ತು ಪ್ರಕರಣಗಳಿಗೆ ಆದ್ಯತೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್‌ ಹೇಳಿದರು.

ಇದರಿಂದ ಅಸಮಾಧಾನಗೊಂಡ ಜಿಲ್ಲಾಧಿಕಾರಿಗಳು, ನಗರ ಆರೋಗ್ಯ ಕೇಂದ್ರಕ್ಕೆ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ನೇಮಿಸಲಾಗಿದೆ. ಸರಿಯಾಗಿ ಕೆಲಸ ಮಾಡುತ್ತಿದ್ದಾರಾ ಎಂದು ಪರಿಶೀಲಿಸುವಂತೆ ಡಿಎಚ್ಒ ಡಾ| ಪಾಲಾಕ್ಷ ಅವರಿಗೆ ಸೂಚನೆ ನೀಡಿದರು.

ಕುಷ್ಠರೋಗ ಅಭಿಯಾನದ ತಾಂತ್ರಿಕ ಅಧಿಕಾರಿ ಡಾ| ರಾಜೇಶ್‌ ಕಾಕಡೆ ಮಾತನಾಡಿ, ರೋಗ ಪತ್ತೆ ಮಾಡುವ ಅಭಿಯಾನಕ್ಕೆ ನೀಡಿದ ಆದ್ಯತೆಯನ್ನು ಹರಡುವಿಕೆ ತಡೆಗೂ ನೀಡಬೇಕಿದೆ ಎಂದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಕಂಬಾಳಿಮs್ ಮಾತನಾಡಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ| ಯೋಗೀಂದ್ರ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಜರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.