ಅತಿವೃಷ್ಟಿಯ ಕತ್ತಲು ಓಡಿಸಿದ ಮೆಸ್ಕಾಂ!

•ಸಿಬ್ಬಂದಿಯಿಂದ ಅವಿರತ ಶ್ರಮ•12 ದಿನಗಳಲ್ಲಿ 714 ಹಳ್ಳಿಗಳಲ್ಲಿ ಮತ್ತೆ ಬೆಳಕು

Team Udayavani, Aug 20, 2019, 2:58 PM IST

sm-tdy-2

ಶಿವಮೊಗ್ಗ: ಹಾನಿಗೊಳಗಾದ ವಿದ್ಯುತ್‌ ಕಂಬಗಳನ್ನು ದುರಸ್ತಿಗೊಳಿಸುತ್ತಿರುವ ಮೆಸ್ಕಾಂ ಸಿಬ್ಬಂದಿ.

ಶಿವಮೊಗ್ಗ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಕಳೆದ 12 ದಿನಗಳಿಂದ ಕತ್ತಲಲ್ಲಿ ಮುಳುಗಿದ್ದ ನೂರಾರು ಹಳ್ಳಿಗಳು ಮತ್ತೆ ಬೆಳಕು ಕಾಣುತ್ತಿವೆ. ವಿದ್ಯುತ್‌ ಸಂಪರ್ಕ ಕಡಿತಗೊಂಡು ಹೈರಾಣಾಗಿದ್ದ ನೂರಾರು ಹಳ್ಳಿಗಳಿಗೆ ಮೆಸ್ಕಾಂನ ಅವಿರತ ಶ್ರಮದಿಂದ ಮತ್ತೆ ‘ಪವರ್‌’ ಸಿಕ್ಕಿದೆ.

ಆಗಸ್ಟ್‌ 3ರಿಂದ 12ರವರೆಗೆ ಸುರಿದ ಭಾರಿ ಮಳೆಯಿಂದ ಇಡೀ ಜಿಲ್ಲೆ ಅಸ್ತವ್ಯಸ್ತಗೊಂಡಿತ್ತು. ರಸ್ತೆ, ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಜನ ಮೊಬೈಲ್ನಲ್ಲಿ ಚಾರ್ಜ್‌, ಟಿವಿ ಇಲ್ಲದೇ ಹೊರಜಗತ್ತಿನ ಸಂಪರ್ಕ ಕಳೆದುಕೊಂಡಿದ್ದರು. ಎಡಬಿಡದೆ ಸುರಿಯುತ್ತಿದ್ದ ಮಳೆಯು ಹೊರಹೋಗಲು ಆಗದೆ, ಒಳಗೆ ಕೂರಲೂ ಆಗದಂತೆ ಮಾಡಿತ್ತು. ಮೆಸ್ಕಾಂ ಇಲಾಖೆ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿ, ಕಗ್ಗತ್ತಲಲ್ಲಿ ಮುಳುಗಿದ್ದ ಗ್ರಾಮಗಳಿಗೆ ಬೆಳಕು ನೀಡಿದ್ದಾರೆ.

ಕತ್ತಲಲ್ಲಿ 720 ಗ್ರಾಮ: ನಗರ ಹಾಗೂಗ್ರಾಮಾಂತರ ಪ್ರದೇಶ ಸೇರಿ ಜಿಲ್ಲೆಯ 720 ಗ್ರಾಮಗಳು ವಿದ್ಯುತ್‌ ಸಂಪರ್ಕ ಕಳೆದುಕೊಂಡಿದ್ದವು. ಮರಗಳು ಉರುಳಿ, ಗುಡ್ಡ ಕುಸಿದು ಕಂಬಗಳು ನೆಲಕ್ಕೆ ಉರುಳಿದ್ದವು. ವಿದ್ಯುತ್‌ ಕಂಬಗಳು ಮುರಿದು ಹೋಗಿದ್ದರಿಂದ ಹೊಸ ಕಂಬ ಹಾಕುವುದು ಅನಿವಾರ್ಯವಾಗಿತ್ತು. ಕಡಿದಾದ ರಸ್ತೆ, ಹರಿಯುವ ನೀರು , ಕೆಸರು, ಗುಡ್ಡ ಕುಸಿದ ಪ್ರದೇಶಗಳಿಗೆ ಕಂಬ ಸಾಗಿಸುವುದು ಕಷ್ಟದ ಕೆಲಸವಾಗಿತ್ತು. ಕಂಬ ಸಾಗಿಸುವ ಲಾರಿಗಳು ಹೂತುಹೋಗುವ ಸಂಭವ ಹೆಚ್ಚಿದ್ದರಿಂದ ಕಾರ್ಯಾಚರಣೆಗೆ ತೀವ್ರ ತೊಡಕಾಗಿತ್ತು. ಮಳೆ ಕಡಿಮೆಯಾಗುತ್ತಿದ್ದಂತೆ ಮೆಸ್ಕಾಂ ಸಿಬ್ಬಂದಿ ಕೆಲಸ ಆರಂಭಿಸಿದರು. ಆರಂಭದಲ್ಲಿ 400 ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಯಶಸ್ವಿಯಾದರು. ಹೊಸನಗರ, ತೀರ್ಥಹಳ್ಳಿ ತಾಲೂಕಿನ ಕೆಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದು ಅಸಾಧ್ಯವಾಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿತ್ತು. ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಎಲ್ಲ ಸವಾಲುಗಳನ್ನು ಮೀರಿ ಮೆಸ್ಕಾಂ ಆ.18ರೊಳಗೆ 714 ಗ್ರಾಮಗಳಿಗೆ ವಿದ್ಯುತ್‌ ಕೊಡಲು ಯಶಸ್ವಿಯಾಗಿದೆ. ಅತೀ ಹೆಚ್ಚು ಮಳೆ ಬೀಳುವ ಹೊಸನಗರ, ತೀರ್ಥಹಳ್ಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿತ್ತು. ಹೊಸನಗರದಲ್ಲಿ 130, ತೀರ್ಥಹಳ್ಳಿಯಲ್ಲಿ 85 ಗ್ರಾಮಗಳು ವಿದ್ಯುತ್‌ ಸಂಪರ್ಕದಿಂದ ವಂಚಿತವಾಗಿದ್ದವು. ಅದೇ ರೀತಿ ಶಿವಮೊಗ್ಗ 75, ಶಿಕಾರಿಪುರದ 63 ಗ್ರಾಮಗಳು ಸೇರಿ ಒಟ್ಟು 720 ಗ್ರಾಮಗಳು ಮಳೆರಾಯನ ಆರ್ಭಟಕ್ಕೆ ನಲುಗಿದ್ದವು.

 

•ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.