ಶಿರಾದ 26ನೇ ವಾರ್ಡ್‌ನಲ್ಲಿ ಸಮಸ್ಯೆಗಳ ಸರಮಾಲೆ

ಸ್ವಚ್ಛತೆ ಕೊರತೆ, ಹಂದಿಗಳ ಕಾಟ • ಖಾಲಿ ನಿವೇಶನಗಳಲ್ಲಿ ಕಸದ ರಾಶಿ • ಕಾಳಜಿ ತೋರದ ನಗರಸಭೆ

Team Udayavani, Aug 20, 2019, 5:44 PM IST

tk-tdy-2

ಶಿರಾ: ನಗರದ ಪೇಶುಮಾಂ ಮೊಹಲ್ಲಾ 26ನೇ ವಾರ್ಡ್‌ ನಲ್ಲಿ ಮೂಲಸೌಕರ್ಯಗಳೇ ಮರೀಚಿಕೆ ಯಾಗಿದೆ. ಚರಂಡಿ ಸ್ವಚ್ಛತೆ ಕೊರತೆ, ಖಾಲಿ ನಿವೇಶನಗಳಲ್ಲಿ ಜಾಲಿ ಗಿಡಗಳು ಬೆಳೆದಿರುವುದು ಸೇರಿ ಸಮಸ್ಯೆಗಳ ಸರಮಾಲೆ ಇಲ್ಲಿದೆ.

ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದಿರು ವುದರಿಂದ ಜನರಿಗೆ ಬಯಲು ಬಹಿರ್ದೆಸೆ ಸ್ಥಳ ವಾಗಿದೆ. ಮನೆಗಳಲ್ಲಿ ಶೌಚಗೃಹವಿದ್ದರೂ ಕೆಲವರು ಖಾಲಿ ನಿವೇಶನಕ್ಕೆ ಹೋಗುತ್ತಾರೆ. ಪ್ರತಿಷ್ಠಿತ ಆಸ್ಪತ್ರೆ ಮುಂಭಾಗ ಇಂತಹ ಪರಿಸ್ಥಿತಿ ಇರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.

ಸಾಂಕ್ರಾಮಿಕ ರೋಗ ಭೀತಿ: ಗಲ್ಲಿ ಗಲ್ಲಿಗಳಲ್ಲಿರುವ ಚರಂಡಿಗಳಲ್ಲಿ ಹಂದಿಗಳ ಹಿಂಡು ಬಿದ್ದು ಹೊರಳಾ ಡುತ್ತಿರುತ್ತವೆ. ಚರಂಡಿ ನೀರು ಸರಾಗವಾಗಿ ಹರಿಯದೆ ಸೊಳ್ಳೆ, ನೊಣಗಳ ಉತ್ಪತ್ತಿ ತಾಣವಾಗಿದ್ದು, ಸಾಂಕ್ರಾ ಮಿಕ ರೋಗ ಭೀತಿ ಎದುರಾಗಿದೆ. ಸೊಳ್ಳೆಗಳ ಕಾಟ ದಿಂದ ರಾತ್ರಿ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ಬೆಳಗ್ಗೆ ದುರ್ವಾಸನೆ ಹಾಗೂ ನೊಣಗಳ ಕಾಟದಿಂದ ದೈನಂದಿನ ಯಾವುದೇ ಕೆಲಸ ಮಾಡಲು ಸಾಧ್ಯ ವಾಗುತ್ತಿಲ್ಲ. ಹಲವು ಬಾರಿ ಜನರು ದೂರು ನೀಡಿ ದ್ದರೂ ನಗರಸಭೆ ತಲೆ ಕೆಡಿಸಿಕೊಂಡಿಲ್ಲ.

ಮೂಗು ಮುಚ್ಚಿಕೊಂಡೇ ಓಡಾಡುವ ದುಸ್ಥಿತಿ: ಇತ್ತೀಚೆಗೆ ಮಳೆಯಿಂದ ವಾರ್ಡ್‌ನ ಚರಂಡಿಗಳಲ್ಲಿ ಸರಾಗವಾಗಿ ನೀರು ಹರಿಯದೆ ರಸ್ತೆಯಲ್ಲಿ ನೀರು ಹರಿಯುತಿತ್ತು. ನಗರಸಭೆಯವರು ಜೆಸಿಬಿ ತಂದು ಚರಂಡಿಗಳ ಮೇಲಿನ ಸ್ಲ್ಯಾಬ್‌ ತೆಗೆದು 15-20 ದಿನ ಕಳೆದರೂ ಮತ್ತೆ ಜೋಡಿಸದಿರುವುದರಿಂದ ಮೂಗು ಮುಚ್ಚಿಕೊಂಡೇ ಓಡಾಡುವ ದುಸ್ಥಿತಿ ಇದೆ. ವಾರ್ಡ್‌ ಸದಸ್ಯರು ಚುನಾವಣೆ ವೇಳೆ ಭರವಸೆ ನೀಡಿ ಗೆದ್ದ ಬಳಿಕ ಇತ್ತ ತಲೆ ಹಾಕಿಲ್ಲ ಎಂಬುದು ಜನರ ಆರೋಪ ವಾಗಿದೆ. ನಗರಸಭೆ ಆಯುಕ್ತರು ಪದೇಪದೆ ಬದ ಲಾಗುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಪರಿಸರ ಎಂಜಿನಿಯರ್‌ ಕಾರ್ಯನಿರ್ವಹಿಸುವಲ್ಲಿ ವಿಫ‌ಲ ರಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕಾಗಿದೆ.

 

● ಎಸ್‌.ಕೆ. ಕುಮಾರ್‌

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.