ಶೋಷಿತರ ಆಶಾಕಿರಣ ಅರಸು ಜನ್ಮ ದಿನಾಚರಣೆ


Team Udayavani, Aug 21, 2019, 3:00 AM IST

shoshitara

ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಆಶಾಕಿರಣ, ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸಿದ ಮಹನೀಯ ಎಂದೇ ಕರೆಯಲ್ಪಡುವ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಜಯಂತಿಯನ್ನು ಜಿಲ್ಲಾದ್ಯಂತ ಆಚರಿಸಲಾಯಿತು. ಅರಸು ಜಾರಿಗೆ ತಂದಿದ್ದ ಸುಧಾರಣೆ ಕ್ರಮಗಳನ್ನು ಮೆಲುಕು ಹಾಕಿದ ಗಣ್ಯರು, ಅವರ ಆದರ್ಶ ಪಾಲಿಸಲು ಸಲಹೆ ನೀಡಿದರು.

ಚಿಕ್ಕಬಳ್ಳಾಪುರ: ಮಾಜಿ ಸಿಎಂ ದಿ.ಡಿ.ದೇವರಾಜ ಅರಸು ಅವರು, ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರಾಗಿದ್ದು, ಅವರ ಆದರ್ಶಗಳನ್ನು ವೃತ್ತಿ ಜೀವನದಲ್ಲಿ ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಿ.ದೇವರಾಜ ಅರಸು ಅವರ 104ನೇ ಜನ್ಮ ಜಯಂತಿಯಲ್ಲಿ ಅರಸು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಅರಸು ಜಯಂತಿ ಕಾರ್ಯಕ್ರಮಕ್ಕೆ ಸರ್ಕಾರದಿಂದ ಬರುವ ಹಣವನ್ನು ರಾಜ್ಯದ ನೆರೆ ಸಂತ್ರಸ್ತರಿಗೆ ನೀಡುವ ಉದ್ದೇಶದಿಂದ ಅರಸು ಅವರ ಜಯಂತಿಯನ್ನು ಬಹಳ ಸರಳವಾಗಿ ಆಚರಿಸಲಾಗಿದೆ ಎಂದರು.

ಅರಸು ಮುಖ್ಯಮಂತ್ರಿಯಾಗಿದ್ದ ವೇಳೆ ಅನೇಕ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದು ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಶೋಷಿತರಿಗೆ ಭೂಮಿ ಒದಗಿಸಲು ಉಳುವವನೇ ಭೂಮಿ ಒಡೆಯ ಎಂಬ ಕಾನೂನು ಜಾರಿಗೊಳಿಸಿದರು. ವೃತ್ತಿ ಜೀವನದಲ್ಲಿ ತಮ್ಮ ಸೇವೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯಾಗುವ ರೀತಿಯಲ್ಲಿ ಕೆಲಸ ಕಾರ್ಯ ಮಾಡಿದರು. ಈ ನಿಟ್ಟಿನಲ್ಲಿ ನೊಂದುಬಂದ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ತಿಳಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ವಿ.ಅಶೋಕ್‌ ಕುಮಾರ್‌, ದೇವರಾಜ ಅರಸು ಅವರು ರೈತಾಪಿ ಕುಟುಂಬದಿಂದ ಜನಿಸಿದವರು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಆಶಯದೊಂದಿಗೆ ಎಲ್ಲರಿಗೂ ಸಮಾನ ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನತೆ ಕಲ್ಪಿಸಿಕೊಟ್ಟವರು. ಅಂದಿನ ಪ್ರಧಾನ ಮಂತ್ರಿಯಾಗಿದ್ದ ಇಂದಿರಾಗಾಂಧಿ ಅವರು ಹೊರಡಿಸಿದ್ದ 20 ಅಂಶಗಳ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಪಾರದರ್ಶಕವಾಗಿ ಅನುಷ್ಠಾನಗೊಳಿಸಿದ ಆದರ್ಶ ಪುರುಷ ಎಂದು ಬಣ್ಣಿಸಿದರು.

ಅಲ್ಲದೇ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉಚಿತ ವಸತಿ ಸೌಲಭ್ಯ ಕಲ್ಪಿಸಿಕೊಡಲು ಅರಸು ಶ್ರಮಿಸಿದ್ದಾರೆ. ಜಿಪಂ ಸದಸ್ಯರಾದ ಕೆ.ಸಿ.ರಾಜಾಕಾಂತ್‌, ಜಿಪಂ ಮುಖ್ಯ ಯೋಜನಾ ಅಧಿಕಾರಿ ಮಾಧುರಾಮ್‌, ಬಿಸಿಎಂ ಇಲಾಖೆ ವ್ಯವಸ್ಥಾಪಕ ಶಿವಪ್ಪ, ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್‌, ವಾರ್ತಾಧಿಕಾರಿ ಎಂ.ಜುಂಜಣ್ಣ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೃಷಿ ಕ್ಷೇತ್ರಕ್ಕೆ ದೇವರಾಜು ಅರಸು ಅವರ ಸೇವೆಯನ್ನು ರೈತರು ಎಂದಿಗೂ ಮರೆಯಲಾರರು, ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ರಾಜ್ಯದ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದರು. ಜೀತದಾಳು ಹಾಗೂ ಮಲ ಹೊರುವ ಪದ್ಧತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಿ ಸಹಾಯಧನ ನೀಡಿದರು.
-ಡಾ.ವಿ.ಅಶೋಕ್‌ ಕುಮಾರ್‌, ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಇಲಾಖೆ

ಟಾಪ್ ನ್ಯೂಸ್

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.