ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತಿ ಬಹಿರಂಗ


Team Udayavani, Aug 21, 2019, 3:07 AM IST

samputa

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಸಚಿವ ಸ್ಥಾನ ಸಿಗದೆ ಹಲವು ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದರೆ, ಅನಿರೀಕ್ಷಿತವಾಗಿ ಒಂದಿಬ್ಬರು ಸಂಪುಟ ಸೇರಿದ ಬಗ್ಗೆ ಕೆಲವರು ಅತೃಪ್ತಿ ಹೊರಹಾಕಿದ್ದಾರೆ.

ಅಸಮಾಧಾನಗೊಂಡಿರುವ ಶಾಸಕರೆಲ್ಲಾ ಒಂದೆಡೆ ಸೇರಿ ಚರ್ಚೆ ನಡೆಸಲಾರಂಭಿಸುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶಾಸಕರನ್ನು ಕರೆಸಿ ಸಮಾಧಾನಪಡಿಸುವ ಪ್ರಯತ್ನ ಮಾಡಿದರು. ಮಾಜಿ ಸಚಿವರಾದ ಬಾಲಚಂದ್ರ ಜಾರಕಿಹೊಳಿ, ಉಮೇಶ್‌ ಕತ್ತಿಯವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಗೊಂದಲಗಳಿಗೆ ತೆರೆ ಬೀಳುವುದೇ ಎಂಬುದನ್ನು ಕಾದು ನೋಡಬೇಕಿದೆ.

ಆರು ವರ್ಷಗಳ ಬಳಿಕ ಬಿಜೆಪಿ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು. ಮಾಜಿ ಸಚಿವರು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಗೆದ್ದವರ ಸಂಖ್ಯೆ 55 ದಾಟಿದೆ. ಹಾಗಾಗಿ ಹಿರಿತನ, ಅನುಭವ, ನಿಷ್ಠೆ ಆಧಾರದಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು.

ಸಚಿವಾಕಾಂಕ್ಷಿಗಳು ಗೈರು: ಮಾಜಿ ಸಚಿವರಾದ ಉಮೇಶ್‌ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಮುರುಗೇಶ್‌ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ಜಿ.ಎಚ್‌.ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್‌, ದತ್ತಾತ್ರೇಯ ಪಾಟೀಲ್‌ ರೇವೂರ, ಅಪ್ಪಚ್ಚು ರಂಜನ್‌ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ, ಈ ಪೈಕಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಗದ ಕಾರಣ ಬಹುತೇಕರು ಸಂಪುಟ ವಿಸ್ತರಣೆ ಸಮಾರಂಭದಿಂದ ದೂರು ಉಳಿದಿದ್ದರು.

ಸವದಿ ಲೆಕ್ಕಾಚಾರ: ಅಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ, ಕಾಂಗ್ರೆಸ್‌ನ ಮಹೇಶ್‌ ಕುಮಟಳ್ಳಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದೀಗ ಮಹೇಶ್‌ ಕುಮಟಳ್ಳಿ ಅರ್ನಹತೆಗೊಂಡ ಶಾಸಕರಾಗಿದ್ದಾರೆ. ಈ ಸಂಬಂಧ ಅರ್ನಹಗೊಂಡ ಶಾಸಕರು ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಪ್ರಕರಣ ಇತ್ಯರ್ಥವಾಗಿ ಮುಂದೆ ಚುನಾವಣೆ ಎದುರಾದರೆ ಅಲ್ಲಿಂದ ಸ್ಪರ್ಧಿಸಿ ಗೆಲ್ಲುವುದು ಲಕ್ಷ್ಮಣ ಸವದಿ ಲೆಕ್ಕಾಚಾರ ಎನ್ನಲಾಗಿದೆ. ಹಿರಿಯ ನಾಯಕರ ಹಂತದಲ್ಲಿ ಚರ್ಚಿಸಿಯೇ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಅಪ್ಪಚ್ಚು ರಂಜನ್‌, ಗೂಳಿಹಟ್ಟಿ ಶೇಖರ್‌, ತಿಪ್ಪಾರೆಡ್ಡಿ ತಮಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿದ್ದರೂ ಉಮೇಶ್‌ ಕತ್ತಿ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿ ತಮಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಹೇಳಿಕೊಂಡರು. ಆದರೆ, ಪ್ರತ್ಯೇಕವಾಗಿ ಸಭೆ ನಡೆಸಿದ್ದು, ಚರ್ಚೆಗೆ ಗ್ರಾಸವಾಗಿತ್ತು.

ಹಾಲಿ ಶಾಸಕರಿದ್ದಾಗ್ಯೂ ಮಾಜಿ ಶಾಸಕರಿಗೆ ಸಚಿವ ಸ್ಥಾನ ನೀಡಿರುವುದು ಹಲವರ ಬೇಸರಕ್ಕೆ ಕಾರಣವಾಗಿದೆ. ಹಾಗಾಗಿ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌ ಅವರು ಯಡಿಯೂರಪ್ಪ ನಿವಾಸಕ್ಕೆ ತೆರಳಿ ಶಾಸಕರ ಅತೃಪ್ತಿ ಶಮನಕ್ಕೆ ಕಸರತ್ತು ಆರಂಭಿಸಿದರು.

ಯಡಿಯೂರಪ್ಪ ಸೂಚನೆ ಮೇರೆಗೆ ಸಂಸದ ಜಿ.ಎಂ.ಸಿದ್ದೇಶ್‌ ಅವರು ಬಾಲಚಂದ್ರ ಜಾರಕಿಹೊಳಿ ಹಾಗೂ ರೇಣುಕಾಚಾರ್ಯ ಅವರನ್ನು ಭೇಟಿಯಾಗಿ ಸಮಾಧಾನಪಡಿಸುವ ಪ್ರಯತ್ನ ನಡೆಸಿದರು. ನಂತರ ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಉಮೇಶ್‌ ಕತ್ತಿ ಇತರರು ಒಂದೆಡೆ ಸೇರಿ ಚರ್ಚಿಸಿದ್ದು, ಹಿರಿಯ ನಾಯಕರಲ್ಲಿ ಇನ್ನಷ್ಟು ತಲ್ಲಣ ಸೃಷ್ಟಿಸಿತು.

ಯಡಿಯೂರಪ್ಪ ಸೂಚನೆಯಂತೆ ಅವರ ನಿವಾಸಕ್ಕೆ ತೆರಳಿ ಬಾಲಚಂದ್ರ ಜಾರಕಿಹೊಳಿ ಚರ್ಚಿಸಿದರು. ಆಗ ಯಡಿಯೂರಪ್ಪ ಅವರು ಉಮೇಶ್‌ ಕತ್ತಿ ಅವರನ್ನು ಸಮಾಧಾನಪಡಿಸುವ ಜವಾಬ್ದಾರಿಯನ್ನು ಬಾಲಚಂದ್ರ ಅವರಿಗೆ ವಹಿಸಿದರು ಎನ್ನಲಾಗಿದೆ. ಭೇಟಿ ಬಳಿಕ ಪ್ರತಿಕ್ರಿಯಿಸಿದ ಬಾಲಚಂದ್ರ ಜಾರಕಿಹೊಳಿ, “ನನಗೆ ವೈಯಕ್ತಿಕವಾಗಿ ಅಸಮಾಧಾನವಿಲ್ಲ. ನಾನು ವೈಯಕ್ತಿಕವಾಗಿ ಸಚಿವಾಕಾಂಕ್ಷಿಯೂ ಆಗಿರಲಿಲ್ಲ.

ಆದರೆ, ಹಿರಿಯರಾದ ಉಮೇಶ್‌ ಕತ್ತಿಯವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಬೇಸರ ತಂದಿದೆ. ಉಮೇಶ್‌ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಅವರಿಗಾದ ಅನ್ಯಾಯ ಸರಿಪಡಿಸುವುದಾಗಿ ವರಿಷ್ಠರು ಭರವಸೆ ನೀಡಿದ್ದಾರೆ. ಒಂದೆರಡು ತಿಂಗಳಲ್ಲಿ ನಮ್ಮ ಕುಟುಂಬದಲ್ಲೊಬ್ಬರು ಸಚಿವರಾಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾತ್ರಿ ಉಮೇಶ್‌ ಕತ್ತಿ ಕೂಡ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಚಿವ ಬಸವರಾಜ ಬೊಮ್ಮಾಯಿ, ಬಾಲಚಂದ್ರ ಜಾರಕಿಹೊಳಿ ಅವರು ಉಪಸ್ಥಿತರಿದ್ದರು ಎಂದು ಹೇಳಲಾಗಿದೆ. ಆ ಮೂಲಕ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಉಂಟಾಗಿದ್ದ ಅಸಮಾಧಾನ ಒಂದು ಹಂತಕ್ಕೆ ಬಂದಂತಾಗಿದೆಯಾದರೂ, ಮುಂದೆ ಇದು ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕೆಲವರ ಸೇರ್ಪಡೆಗೆ ಅಸಮಾಧಾನ: ಹಲವರಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರಕ್ಕೆ ಕಾರಣವಾಗಿದ್ದರೆ, ಇನ್ನೂ ಕೆಲವರಿಗೆ ಅಚ್ಚರಿ ಎಂಬಂತೆ ಕೆಲವರು ಸಚಿವರಾಗಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಮುಖ್ಯವಾಗಿ ಮಾಜಿ ಶಾಸಕ ಲಕ್ಷ್ಮಣ ಸವದಿ ಅವರು ಸಂಪುಟ ಸೇರಿರುವುದು ಬೆಳಗಾವಿ ಭಾಗದ ಶಾಸಕರು ಸೇರಿದಂತೆ ಹಲವರಿಗೆ ಬೇಸರ ಉಂಟು ಮಾಡಿತ್ತು. ಬೆಳಗಾವಿ ಜಿಲ್ಲೆಯಲ್ಲಿ ಉಮೇಶ್‌ ಕತ್ತಿ ಹಾಗೂ ಜಾರಕಿಹೊಳಿ ಕುಟುಂಬವನ್ನು ನಿಯಂತ್ರಿಸುವ ಉದ್ದೇಶದಿಂದಲೇ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಲಕ್ಷ್ಮಣ ಸವದಿಗೆ ಅವಕಾಶ ನೀಡಲಾಗಿದೆ ಎಂಬುದು ಕೆಲ ನಾಯಕರ ಆಕ್ಷೇಪ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.