ವಿಶ್ವ ಚಾಂಪಿಯನ್‌ಶಿಪ್‌ಗೆ ಸುಶೀಲ್ ಕುಮಾರ್‌ ಅರ್ಹತೆ


Team Udayavani, Aug 21, 2019, 5:19 AM IST

sushil

ಹೊಸದಿಲ್ಲಿ: ಜಿತೇಂದರ್‌ ಕುಮಾರ್‌ ಅವರೊಂದಿಗೆ ಮಂಗಳವಾರ ನಡೆದ ಆಯ್ಕೆ ಟ್ರಯಲ್ಸ್ನಲ್ಲಿ ತೀವ್ರ ಪೈಪೋಟಿಯಿಂದ ಹೋರಾಡಿದ ಸುಶೀಲ್ ಕುಮಾರ್‌ 4-2 ಅಂತರದಿಂದ ಜಯ ಸಾಧಿಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಅರ್ಹತೆ ಗಳಿಸಿದರು.

ಇಲ್ಲಿನ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಈ ಆಯ್ಕೆ ಟ್ರಯಲ್ಸ್ನ 74 ಕೆ.ಜಿ. ವಿಭಾಗದಲ್ಲಿ ಇಬ್ಬರು ಬಲಿಷ್ಠ ಕುಸ್ತಿಪಟುಗಳು ನಿರಂತರ ಆಕ್ರಮಣಗೈಯುತ್ತ ಹೋರಾಡಿದರು. ತೀವ್ರ ಗತಿಯಲ್ಲಿ ಹೋರಾಡಿದ ಸುಶೀಲ್ ಆರಂಭದಲ್ಲಿ 4-0 ಮುನ್ನಡೆ ಸಾಧಿಸಿದರು.

ದ್ವಿತೀಯ ಅವಧಿಯ ಆರಂಭದಲ್ಲಿ ಜಿತೇಂದರ್‌ ಅವರ ಕಣ್ಣಿಗೆ ಸ್ವಲ್ಪ ಗಾಯವಾಗಿತ್ತು. ತತ್‌ಕ್ಷಣ ಸುಶೀಲ್ ಕ್ಷಮೆ ಕೇಳಿದ್ದರು. ಆಬಳಿಕ ಜಿತೇಂದರ್‌ ಮೂರು ಬಾರಿ ಸುಶೀಲ್ ಅವರ ಬಲ ಕಾಲನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸಿದ್ದರೂ ಅಂಕ ಗಳಿಸಲು ಸಾಧ್ಯವಾಗಲಿಲ್ಲ.

ಪ್ರತಿಯೊಬ್ಬರು ಅವರು (ಸುಶೀಲ್) ಯಾವ ರೀತಿ ಹೋರಾಡಿದ್ದಾರೆ ಎಂಬುದನ್ನು ನೋಡಿದ್ದಾರೆ. ನಾನು ಕುಸ್ತಿ ಆಡುತ್ತಿದ್ದೆ ಮತ್ತು ಅವರು ಸರಿಯಾಗಿ ಹೋರಾಡಿಲ್ಲ ಮತ್ತು ಅನಗತ್ಯವಾಗಿ ಬ್ರೇಕ್‌ ತೆಗೆದುಕೊಳ್ಳುತ್ತಿದ್ದರು. ಕಣ್ಣು ನೋವಿನ ಬಳಿಕ ನನಗೆ ನೋಡಲು ಕಷ್ಟವಾಗುತ್ತಿತ್ತು ಎಂದು ಪಂದ್ಯದ ಬಳಿಕ ಜಿತೇಂದರ್‌ ಹೇಳಿದ್ದಾರೆ.

ಜಿತೇಂದರ್‌ ಮಾತಿಗೆ ಅವರ ಕೋಚ್ ಜೈವೀರ್‌ ಧ್ವನಿಗೂಡಿಸಿದರು. ಸುಶೀಲ್ ನ್ಯಾಯವಾಗಿ ಹೋರಾಡಲಿಲ್ಲ ಎಂದು ಜೈವೀರ್‌ ಆರೋಪಿಸಿದರು. ಅವರು ಯಾವುದೋ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಇದೇ ತಂತ್ರವನ್ನು 2012ರ ಒಲಿಂಪಿಕ್ಸ್‌ ನಲ್ಲೂ ಅಳವಡಿಸಿದ್ದಾರೆ. ಇದನ್ನು ಉದ್ದೇಶಪೂರ್ವಕ ವಾಗಿ ಮಾಡಿದ್ದಾರೆ.

ಸುಶೀಲ್ ವಿರುದ್ಧ ಯಾರೂ ಗೆಲ್ಲುವುದು ಅವರಿಗೆ ಇಷ್ಟವಿಲ್ಲ ಎಂದು ಜೈವೀರ್‌ ಆರೋಪಿಸಿದರು.

ನಾನು ಉದ್ದೇಶಪೂರ್ವಕವಾಗಿ ಈ ರೀತಿ ಹೋರಾಡಿಲ್ಲ. ಅವರು ನನಗೆ ಸಹೋದರ ಇದ್ದಂತೆ. ಇದೊಂದು ಒಳ್ಳೆಯ ಹೋರಾಟ ವಾಗಿತ್ತು ಎಂದು ಸುಶೀಲ್ ಹೇಳಿದ್ದಾರೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.