ನೂತನ‌ ಸಚಿವ ಬೊಮ್ಮಾಯಿ ಮೇಲಿವೆ ಹಲವು ನಿರೀಕ್ಷೆ


Team Udayavani, Aug 21, 2019, 1:03 PM IST

hv-tdy-1

ಹಾವೇರಿ: ರಾಜ್ಯ ಬಿಜೆಪಿ ಸರ್ಕಾರ ಮೊದಲ ಮಂತ್ರಿಮಂಡಲದಲ್ಲಿ ಜಿಲ್ಲೆಯ ಶಾಸಕರೋರ್ವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಬಹುದಿನಗಳ ಬೇಡಿಕೆಗಳು ಇವರ ಅವಧಿಯಲ್ಲಾದರೂ ಈಡೇರಬಹುದು ಎಂಬ ಆಸೆ ಚಿಗುರೊಡೆದಿದೆ.

ಬಸವರಾಜ ಬೊಮ್ಮಾಯಿಯವರು ಜಿಲ್ಲೆಯ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಕನಸುಗಳಿಗೆ ಮರುಜೀವ ಬಂದಿದೆ. ಜಿಲ್ಲೆಯಲ್ಲಿ ಬಹುಮುಖ್ಯವಾಗಿ ಬಹುವರ್ಷಗಳಿಂದ ಮೆಡಿಕಲ್ ಕಾಲೇಜು ಸ್ಥಾಪನೆ ಬೇಡಿಕೆ ಇನ್ನೂ ಬೇಡಿಕೆಯಾಗಿಯೇ ಉಳಿದಿದೆ. ಇದರ ಜತೆಗೆ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ, ಪ್ರತ್ಯೇಕ ಜಿಲ್ಲಾ ಸಹಕಾರಿ ಬ್ಯಾಂಕ್‌ ಸ್ಥಾಪನೆ ಸೇರಿದಂತೆ ಹತ್ತು ಹಲವು ಬೇಡಿಕೆಗಳು ನೂತನ ಸಚಿವ ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಾದರೂ ಈಡೇರಬಹುದು ಎಂದು ನಿರೀಕ್ಷಿಸಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜ್‌ 2013ರಲ್ಲಿ ಜಿಲ್ಲೆಗೆ ಮಂಜೂರಿ ಆಗಿಯೇ ಹೋಯಿತು ಎಂಬಷ್ಟರ ಮಟ್ಟಿಗೆ ಕಾಗದ ಪತ್ರಗಳ ವಹಿವಾಟು ನಡೆಯಿತು. ಆದರೆ, ಕೊನೆಯ ಘಳಿಗೆಯಲ್ಲಿ ಅದು ಕೈತಪ್ಪಿ ಬೇರೆ ಜಿಲ್ಲೆಗಳ ಪಾಲಾಯಿತು. 2017ರಲ್ಲಿ ಮತ್ತೆ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಘೋಷಣೆಯಾಯಿತು. ಆದರೆ, ಆರ್ಥಿಕ ಇಲಾಖೆ ಅನುಮೋದನೆ ಮಾತ್ರ ಸಿಕ್ಕಿಯೇ ಇಲ್ಲ. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿರುವುದರಿಂದ ಜಿಲ್ಲೆಯ ಬಹುಮುಖ್ಯ ಬೇಡಿಕೆಯಾದ ಮೆಡಿಕಲ್ ಕಾಲೇಜು ಸ್ಥಾಪನೆ ಕನಸು ನನಸಾದೀತು ಎಂಬ ಆಶಾಭಾವ ಜನತೆ ಹೊಂದಿದೆ.

2016ರ ಬಜೆಟ್‌ನಲ್ಲಿ ಘೋಷಣೆಯಾದ ಪ್ರತ್ಯೇಕ ಜಿಲ್ಲಾ ಸಹಕಾರಿ ಬ್ಯಾಂಕ್‌ ಅನುಷ್ಠಾನ ಬೊಮ್ಮಾಯಿಯವರಿಂದ ಸಾಕಾರಗೊಳ್ಳಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಚಾಲನೆ ನೀಡಬಹುದು. ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರಗಳು ಅಕೃತವಾಗಿ ಕಾರ್ಯಾರಂಭಿಸುವಲ್ಲಿ ಸಚಿವ ಬೊಮ್ಮಾಯಿ ನಿಗಾ ವಹಿಸಬಹುದು ಎಂದು ಆಶಿಸಲಾಗಿದೆ.

ನೀರು, ನೀರಾವರಿ: ಜಿಲ್ಲೆಯಲ್ಲಿ ತುಂಗಭದ್ರಾ, ಧರ್ಮಾ, ಕುಮದ್ವತಿ, ವರದಾ ಹೀಗೆ ನಾಲ್ಕು ನದಿಗಳು ಹರಿದಿವೆ. ಇವುಗಳನ್ನು ಬಳಸಿಕೊಂಡು ಹಾವೇರಿ ನೀರಾವರಿ ಜಿಲ್ಲೆಯಾಗಬೇಕೆಂಬ ಕನಸು ಇನ್ನೂ ಕನಸಾಗಿಯೇ ಇದೆ. ನಿರಂತರ ನೀರು ಯೋಜನೆ ಜಿಲ್ಲೆಯ ಎಲ್ಲ ನಗರ, ಪಟ್ಟಣಗಳಲ್ಲಿ ಅನುಷ್ಠಾನಗೊಳ್ಳಬೇಕು. ಜಿಲ್ಲಾ ಕೇಂದ್ರ ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಲ್ಲಿ ಸ್ವಚ್ಛತೆ, ರಸ್ತೆ ಸೇರಿದಂತೆ ಮೂಲಸೌಲಭ್ಯ ಕೊರತೆ ಸಮಸ್ಯೆ ಕಾಡುತ್ತಿದ್ದು ಇವುಗಳಿಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಬೊಮ್ಮಾಯಿ ಕ್ರಮ ಜರುಗಿಸಬಹುದು. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿ ನೀರಾವರಿಗೆ ಹಲವು ಯೋಜನೆಗಳನ್ನು ರೂಪಿಸಿದ ಬೊಮ್ಮಾಯಿಯವರು ಈ ಬಾರಿ ಸರ್ಕಾರದ ಮೇಲೆ ಒತ್ತಡ ಹೇರಿ ಜಿಲ್ಲೆಗೆ ಹೊಸ ನೀರಾವರಿ ಯೋಜನೆ ಜಾರಿಗೆ ತರುವ ಜತೆಗೆ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಜೀವ ತುಂಬುವ ಕಾರ್ಯ ಮಾಡಬಹುದು ಎಂದು ಜನತೆ ನಿರೀಕ್ಷಿಸಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಮೂಲಸೌಲಭ್ಯ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳು ಹೊಸ ಸಚಿವರ ಅವಧಿಯಲ್ಲಾದರೂ ಬೇಡಿಕೆ ಈಡೇರಬಹುದೇ ಎಂದು ಜನರು ಕಾತರದಿಂದ ಕಾಯುತ್ತಿದ್ದು ಸಚಿವರು ಯಾವ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.