ಮೂವರಿಗೂ ಸಿಗಲಿಲ್ಲ ಮಂತ್ರಿಗಿರಿ!

•ರಾಜಕೀಯವಾಗಿ ತಾರತಮ್ಯ ಅನುಭವಿಸುತ್ತಲೇ ಬಂದಿದೆ,ಸಂಪುಟದಲ್ಲಿ ಹೈಕಕ್ಕೆ ಒಂದೇ ಸಚಿವ ಸ್ಥಾನ

Team Udayavani, Aug 21, 2019, 1:11 PM IST

Udayavani Kannada Newspaper

ಕೊಪ್ಪಳ: ಕೊಪ್ಪಳ ಜಿಲ್ಲೆ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಾರತಮ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಈಗ ಸಚಿವ ಸ್ಥಾನ ನೀಡುವಲ್ಲಿಯೂ ತಾರತಮ್ಯವಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದಲ್ಲೂ ಕೊಪ್ಪಳ ಜಿಲ್ಲೆಗೆ ಮಂತ್ರಿ ಭಾಗ್ಯ ಸಿಗಲಿಲ್ಲ. ಈಗ ಬಿಜೆಪಿ ಸರ್ಕಾರದಲ್ಲೂ ಮಂತ್ರಿ ಸ್ಥಾನ ಸಿಗಲಿಲ್ಲ. ಹೈಕ ಭಾಗಕ್ಕೊಂದೇ ಮಂತ್ರಿ ಸ್ಥಾನ ನೀಡಿರುವುದು ನಿಜಕ್ಕೂ ಅಚ್ಚರಿಗೆ ಕಾರಣವಾಗಿದೆ.

ಹೈದರಾಬಾದ್‌ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಕೊಪ್ಪಳ ಜಿಲ್ಲೆ ರಾಜಕೀಯವಾಗಿ ಅನ್ಯಾಯ ಅನುಭವಿಸುತ್ತಲೇ ಬಂದಿದೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಕೊಪ್ಪಳ ಹಾಗೂ ಕುಷ್ಟಗಿಯಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಇವರಲ್ಲಿ ಹಿರಿಯ ನಾಯಕ ಹಾಲಪ್ಪ ಆಚಾರ್‌ ಅವರಿಗೆ ಮಂತ್ರಿ ಭಾಗ್ಯ ಒಲಿದು ಬರಲಿದೆ ಎಂಬ ನಿರೀಕ್ಷೆ ಇತ್ತು. ಜತೆಗೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸಹಿತ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಇದರೊಟ್ಟಿಗೆ ಸಿಎಂ ಮಾನಸ ಪುತ್ರ ಎಂದೆನಿಸಿರುವ ಕನಕಗಿರಿ ಶಾಸಕ ಬಸವರಾಜ ದಡೆಸೂಗೂರು ಸಹಿತ ಮಂತ್ರಿಗಿರಿ ಪಡೆಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದರು. ಆದರೆ ಮೂವರು ಶಾಸಕರಲ್ಲಿ ಯಾರಿಗೂ ಮಂತ್ರಿ ಸ್ಥಾನ ನೀಡಲಿಲ್ಲ.

ಮೈತ್ರಿ ಸರ್ಕಾರದಲ್ಲೂ ಸಿಕ್ಕಿರಲಿಲ್ಲ: ಈ ಹಿಂದೆ ರಾಜ್ಯದಲ್ಲಿ 14 ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ದಲ್ಲೂ ಕೊಪ್ಪಳ ಜಿಲ್ಲೆಗೆ ಮಂತ್ರಿ ಭಾಗ್ಯ ಒಲಿದು ಬಂದಿರಲಿಲ್ಲ. ಹಿರಿಯ, ಅನುಭವಿಗಳಾಗಿದ್ದ ಕುಷ್ಟಗಿ ಶಾಸಕ ಅಮರೇಗೌಡ ಭಯ್ನಾಪೂರ ಅವರಿಗೂ ಮಂತ್ರಿಪಟ್ಟ ಕೊಟ್ಟಿರಲಿಲ್ಲ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳಗೆ ಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಮಾತು ಕೇಳಿ ಬಂದಿದ್ದವು. ಆವರಿಗೂ ಮಂತ್ರಿ ಸ್ಥಾನ ಕೊಡದೇ ಆರ್‌. ಶಂಕರ್‌ ಅವರಿಗೆ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದರು. ಆದರೆ ಅವರು ಮಂತ್ರಿಗಿರಿ ಕಳೆದುಕೊಂಡರು. ಬಳಿಕ ಈ ತುಕಾರಾಂ ಅವರು ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿದ್ದರು. ಆಗ ಇಲ್ಲಿನ ಶಾಸಕರು ಜಿಲ್ಲೆಯವರಿಗೆ ಮಂತ್ರಿ ಸ್ಥಾನ ಕೊಟ್ಟರೆ ಅಭಿವೃದ್ಧಿಯಾಗಲಿದೆ ಎಂದು ಒತ್ತಾಯಿಸಿದ್ದರು. ಆದರೆ ಅವರ ಕೂಗು ಸರ್ಕಾರಕ್ಕೆ ಕೊನೆಗೂ ಕೇಳಲೇ ಇಲ್ಲ.

ನಾನೇನು ಮಂತ್ರಿ ಸ್ಥಾನದ ನಿರೀಕ್ಷೆಯನ್ನಿಟ್ಟಿರಲಿಲ್ಲ. ನಮ್ಮಲ್ಲಿ ಹಿರಿಯರು ತುಂಬಾ ಜನ ಇದ್ದಾರೆ. ಹೈಕಮಾಂಡ್‌ ಅವರಿಗೆ ಸಚಿವ ಸ್ಥಾನ ನೀಡಿದೆ. ಸಚಿವ ಸ್ಥಾನಕ್ಕಿಂತಲೂ ಜಿಲ್ಲೆಯ ಅಭಿವೃದ್ಧಿ ಮುಖ್ಯವಾಗಿದೆ. ನಾವು ಹಾಕಿಕೊಂಡ ಯೋಜನೆಗಳ ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಕೃಷ್ಣಾ ಯೋಜನೆಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದೇನೆ.•ಹಾಲಪ್ಪ ಆಚಾರ್‌, ಯಲಬುರ್ಗಾ ಶಾಸಕ.

ಮಂತ್ರಿ ಸ್ಥಾನದ ನಿರೀಕ್ಷೆಯಿತ್ತು. ನಾವು ಹೈಕಮಾಂಡ್‌ ಮಟ್ಟದಲ್ಲಿ ಸಚಿವ ಸ್ಥಾನ ಕೇಳಿದ್ದೆವು. ಆದರೆ ಸಿಕ್ಕಿಲ್ಲ. ಸಚಿವ ಸ್ಥಾನ ಸಿಗದೇ ಇದ್ದಾಗ ಸಣ್ಣ ಪುಟ್ಟ ಅಸಮಾಧಾನ ಸಹಜ. ಇನ್ನೊಂದು ವಾರದಲ್ಲಿ ಏಳೆಂಟು ಸ್ಥಾನಗಳ ಹಂಚಿಕೆ ಮಾಡುವ ಸಾಧ್ಯತೆಯಿದೆ. ನಮ್ಮ ಪ್ರಯತ್ನ ನಡೆದಿದೆ. ಮುಂದೆ ಕಾದು ನೋಡೋಣ.•ಪರಣ್ಣ ಮುನವಳ್ಳಿ, ಗಂಗಾವತಿ ಶಾಸಕ.

 

•ದತ್ತು ಕಮ್ಮಾರ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.