“ಜಾಗ ಸಮಸ್ಯೆ ನಿವಾರಣೆಯಾದಲ್ಲಿ ಕೇಪು ಸಬ್‌ಸ್ಟೇಶನ್‌ ಸ್ಥಾಪನೆ’


Team Udayavani, Aug 22, 2019, 5:00 AM IST

g-16

ವಿಟ್ಲ: ಜಾಗದ ಸಮಸ್ಯೆ ನಿವಾರಣೆಯಾದ ಕೂಡಲೇ ಮೆಸ್ಕಾಂ ಕೇಪು ಸಬ್‌ಸ್ಟೇಶನ್‌ ಸ್ಥಾಪನೆಗೆ ಮುಂದಾಗಲಿದೆ. ಅಪಾಯಕಾರಿ ಮರ ಕಡಿಯುವ ಜವಾಬ್ದಾರಿ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ್ದು. ಮೆಸ್ಕಾಂ ಜವಾಬ್ದಾರಿಯಲ್ಲ. ಪೂರಕ ಸಹಕಾರ ಮೆಸ್ಕಾಂ ನೀಡಲಿದೆ. ಕಂಬ ಸ್ಥಳಾಂತರ ಸಮಸ್ಯೆ ಲೋಕೋಪಯೋಗಿ ಹಾಗೂ ಮೆಸ್ಕಾಂ ಗುತ್ತಿಗೆದಾರರ ನಡುವಿನ ವಿಚಾರವಾಗಿದೆ. ಮಾದರಿ ವಿದ್ಯುತ್‌ ಗ್ರಾಮ ಯೋಜನೆ ಬದಲಾಗಿ ಬೇರೆ ಹೊಸ ಯೋಜನೆಗೆ ಕ್ರಮ ಜರಗಿಸಲಾಗುವುದು ಎಂದು ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ಮಂಜಪ್ಪ ತಿಳಿಸಿದರು.

ಬುಧವಾರ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ವಿಟ್ಲ ಉಪವಿಭಾಗ ಮಟ್ಟದ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆ ನನೆಗುದಿಗೆ
ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಮಾದರಿ ವಿದ್ಯುತ್‌ ಗ್ರಾಮ ಯೋಜನೆ ನನೆಗುದಿಗೆ ಬಿದ್ದಿದೆ. ಕಬಕ-ಸುರತ್ಕಲ್‌ ರಸ್ತೆ ಕಾಮಗಾರಿ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬಗಳನ್ನು ಮೆಸ್ಕಾಂ ಹಾಗೂ ಲೋಕೋಪಯೋಗಿ ಇಲಾಖೆಯ ನಡುವಿನ ಹೊಂದಾಣಿಕೆ ಸಮಸ್ಯೆಯಿಂದ ತೆರವುಗೊಳಿಸಿಲ್ಲ. ಅನಾಹುತ ಮೊದಲೇ ಎಚ್ಚೆತ್ತುಕೊಂಡರೆ ಸಮಸ್ಯೆ ಬರುವುದಿಲ್ಲ ಎಂದು ಸಲಹೆ ನೀಡಿದರು.

ಗ್ರಾಹಕ‌ರಿಗೆ ತೊಂದರೆ
ಮಾಣಿಲ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಕುಮಾರ್‌ ಬಾಳೆಕಲ್ಲು ಮಾತನಾಡಿ, ಮಾಣಿಲ ಗ್ರಾಮವನ್ನು ಕನ್ಯಾನ ಶಾಖೆಗೆ ಸೇರಿಸಲಾಗಿದೆ. ಇದರಿಂದ ಗ್ರಾಹಕ‌ರಿಗೆ ತೊಂದರೆಯಾಗಿದೆ. ತೋಟದ ಮಧ್ಯೆ ತಂತಿಗಳು ಹಾದುಹೋಗುತ್ತಿವೆ. ಅವುಗಳನ್ನು ತೆರವುಗೊಳಿಸಿ ರಸ್ತೆ ಬದಿಯಲ್ಲಿ ಹಾಕಬೇಕು ಎಂದು ಆಗ್ರಹಿಸಿದರು.

ಹಳೆ ಎಚ್‌ಟಿ ತಂತಿ
ಪುಣಚ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್‌ ಶೆಟ್ಟಿ ಬೈಲುಗುತ್ತು ಮಾತನಾಡಿ, ಪುಣಚ ಗ್ರಾಮದಲ್ಲಿ ಹಳೆ ಎಚ್‌ಟಿ ತಂತಿ ಇದ್ದು, ಅಪಾಯ ಆಹ್ವಾನಿಸುತ್ತಿದೆ. ಈ ಬಗ್ಗೆ ಗ2 ವರ್ಷಗಳಿಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಶಾಲೆ ಅಂಗಳದಲ್ಲಿ ವಿದ್ಯುತ್‌ ಪರಿವರ್ತಕ
ಕರೋಪಾಡಿ ಗ್ರಾ.ಪಂ. ಅಧ್ಯಕ್ಷೆ ಬೇಬಿ ಆರ್‌. ಶೆಟ್ಟಿ ಅವರು ಕರೋಪಾಡಿ ಗ್ರಾಮದ ಪದ್ಯಾಣ ಶಾಲೆ ಅಂಗಳದಲ್ಲಿ 11 ಕೆವಿ ವಿದ್ಯುತ್‌ ಪರಿವರ್ತಕ, ತಂತಿ ಬದಲಾಯಿಸುವಂತೆ ಮನವಿ ಸಲ್ಲಿಸಿದರು.

ವಿದ್ಯುತ್‌ ಸಮಸ್ಯೆಗಳಿಗೆ ಸಂಬಂಧಿಸಿ ವಿವಿಧ ಗ್ರಾಮಗಳ ಬಳಕೆದಾರರು ದೂರು, ಅಹವಾಲು ಸಲ್ಲಿಸಿದರು. ಜಿ.ಪಂ. ಸದಸ್ಯ ಎಂ.ಎಸ್‌.ಮಹಮ್ಮದ್‌, ವಿಟ್ಲ ಪ.ಪಂ. ಅಧ್ಯಕ್ಷೆ ದಮಯಂತಿ, ಬಂಟ್ವಾಳ ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಮಚಂದ್ರ, ವಿಟ್ಲ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿ ಯರ್‌ ಪ್ರವೀಣ್‌ ಜೋಷಿ ಉಪಸ್ಥಿತರಿದ್ದರು.

ಕಂದಾಯ ಇಲಾಖೆ – ಗೇರು ನಿಗಮದ ಜಾಗ
ಸಾಮಾಜಿಕ ಕಾರ್ಯಕರ್ತ ರಾಮಣ್ಣ ಶೆಟ್ಟಿ ಪಾಲಿಗೆ ಮಾತನಾಡಿ, ಕೇಪು ಸಬ್‌ಸ್ಟೇಶನ್‌ ನಿರ್ಮಾಣ ಆಗಲಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಕೆಪಿಟಿಸಿಎಲ್‌ ಅಧೀಕ್ಷಕ ರವಿಕಾಂತ್‌ ಕಾಮತ್‌, ಈ ಜಾಗ ಗೇರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ್ದು, ನಮ್ಮ ಬೇಡಿಕೆ ಸ್ಥಳ ಅರಣ್ಯ ಇಲಾಖೆಗೆ ಸೇರಿದೆ. ಬೇರೆ ಜಾಗ ತೋರಿಸಿಕೊಟ್ಟರೆ ಮಾಡಲು ಸಿದ್ಧ ಎಂದು ತಿಳಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಕೃಷಿಕ ಜಯಶ್ಯಾಂ ನೀರ್ಕಜೆ, ಇದು ಅರಣ್ಯ ಇಲಾಖೆಯ ಜಾಗವಲ್ಲ. ಕಂದಾಯ ಇಲಾಖೆ ಹಾಗೂ ಗೇರು ನಿಗಮದ ಜಾಗವಾಗಿದ್ದು, ಸ್ವಲ್ಪ ಜಾಗ ಮಾತ್ರ ಮೂವರು ವ್ಯಕ್ತಿಗಳ ಕುಮ್ಕಿಯಾಗಿದೆ. ಸಂಬಂಧಿತ ಭೂ ದಾಖಲೆಗಳೊಂದಿಗೆ ಈಗಾಗಲೇ ಜಿಲ್ಲಾಧಿಕಾರಿಯವರಿಗೆ

ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಇತ್ಯರ್ಥ ಮಾಡಿದರೆ ಸಮಸ್ಯೆ ಮುಗಿಯುತ್ತದೆ ಎಂದು ತಿಳಿಸಿದರು.

ಅಳಿಕೆ ಗ್ರಾ.ಪಂ. ಅಧ್ಯಕ್ಷ ಪದ್ಮನಾಭ ಪೂಜಾರಿ ಮಾತನಾಡಿ, ಮೆಸ್ಕಾಂ ಗೇರು ನಿಗಮಕ್ಕೆ ಹಣ ಪಾವತಿಸಿದರೆ ಜಾಗವನ್ನು ನೀಡಲು ಅವರು ತಯಾರಿದ್ದಾರೆ ಎಂದು ನಿಗಮ ತಿಳಿಸಿದೆ. ಈ ಬಗ್ಗೆ ಮೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದರು. ರಾಜೀವ ಭಂಡಾರಿ ಕೇಪು ಮಾತನಾಡಿ, ಕೇಪು ಗ್ರಾಮದಲ್ಲಿ ಸಬ್‌ ಸ್ಟೇಶನ್‌ ಅಗತ್ಯವಾಗಿದೆ. ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿದೆ. ಅದು ಆಗದಿರಲು ಇರುವ ಕಾರಣದ ಬಗ್ಗೆ ಸರಕಾರದ ಜತೆ ಮಾತುಕತೆ ನಡೆಸಿ ಇತ್ಯರ್ಥ ಮಾಡಲಾಗುವುದು ಎಂದರು.

ಅಧೀಕ್ಷಕ ಮಂಜಪ್ಪ ಮಾತನಾಡಿ, ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಿ, ಜಾಗದ ಗೊಂದಲ ನಿವಾರಿಸಬೇಕು
ಎಂದು ಸೂಚಿಸಿದರು.

ನಿರಂತರ ಸ್ಪಂದನೆ
ಮೆಸ್ಕಾಂ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಲಿದೆ. ಒಂದು ಜನಸಂಪರ್ಕ ಸಭೆಯಲ್ಲಿ ಬಂದ ದೂರುಗಳು ಮುಂದಿನ ಸಭೆಗೆ ಈಡೇರಿಕೆಯಾಗಬೇಕು.
– ಮಂಜಪ್ಪ, ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.