ಹರಾಜಿಗೆ ವರ್ತಕರು ಗೈರು: ಮಳಿಗೆ ಮತ್ತೆ ನೆನಗುದಿಗೆ


Team Udayavani, Aug 22, 2019, 3:00 AM IST

harajige

ಚಿಕ್ಕಬಳ್ಳಾಪುರ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣವಾಗಿ ಹರಾಜುಗೊಳ್ಳದೇ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದು ಸ್ಥಳೀಯ ನಗರಸಭೆಗೆ ಬರುವ ಆದಾಯಕ್ಕೆ ಕತ್ತರಿ ಬಿದ್ದಂತಾಗಿದ್ದ ಜಿಲ್ಲಾ ಕೇಂದ್ರದ ಖಾಸಗಿ ಬಸ್‌ ನಿಲ್ದಾಣದಲ್ಲಿರುವ 47 ಕ್ಕೂ ಹೆಚ್ಚು ಅಂಗಡಿ, ಮಳಿಗೆಗಳ ಹರಾಜು ಪ್ರಕ್ರಿಯೆಗೆ ವರ್ತಕರ ಬಹಿಷ್ಕಾರದಿಂದ ಮತ್ತೆ ನೆನಗುದಿಗೆ ಬಿದ್ದಂತಾಗಿದೆ.

ಕಳೆದ ಆ.13 ರಂದು ನಿಯಮಾನುಸಾರ ಅಂಗಡಿ ಮಳಿಗೆಗಳನ್ನು ಹರಾಜು ನಡೆಸಿ ಲಾಟರಿ ಮೂಲಕ ವರ್ತಕರಿಗೆ ವಿತರಣೆ ಮಾಡುವಂತೆ ಹೈಕೋರ್ಟ್‌ ಆದೇಶ ನೀಡಿತ್ತು. ಕೋರ್ಟ್‌ ಆದೇಶದಂತೆ ಜಿಲ್ಲಾಧಿಕಾರಿಗಳೇ ಖುದ್ದು ನಗರಸಭಾ ಸಭಾಂಗಣದಲ್ಲಿ ವರ್ತಕರ ಸಭೆ ನಡೆಸಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು. ಆದರೆ ಆ.13 ರಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಗೆ ವರ್ತಕರು ಪಾಲ್ಗೊಳ್ಳದೇ ಬಹಿಷ್ಕಾರ ಹಾಕಿರುವುದು ಬೆಳಕಿಗೆ ಬಂದಿದೆ.

47 ಮಳಿಗೆ ನೆನಗುದಿಗೆ: ಖಾಸಗಿ ಬಸ್‌ ನಿಲ್ದಾಣದಲ್ಲಿ ಒಟ್ಟು 47 ಮಳಿಗೆಗಳಿವೆ. ಈ ಪೈಕಿ ಪೌರಾಡಳಿತ ಇಲಾಖೆ ಅಧಿಕಾರಿಗಳ ಈ ಹಿಂದಿನ ಸಭೆಯ ನಡಾವಳಿ ಮತ್ತು ಹೈಕೋರ್ಟ್‌ ಆದೇಶದಂತೆ ಆದ್ಯತೆ ಮೇರೆಗೆ ಈ ಹಿಂದೆ ತೆರೆವಾಗಲಿಕ್ಕೂ ಮೊದಲು ಹಳೆ ಬಸ್‌ ನಿಲ್ದಾಣದಲ್ಲಿದ್ದ 39 ವರ್ತಕರಿಗೆ ನೀಡಲು ಮಳಿಗೆಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಬೇಕಿತ್ತು.

4,700-11,900 ರೂ. ಬಾಡಿಗೆ ನಿಗದಿ: ಮಳಿಗೆಗಳ ಅಳತೆ ಆಧರಿಸಿ 4,700 ರಿಂದ 11,900 ರೂ. ಬಾಡಿಗೆ ನಿಗದಿಯಾಗಿದ್ದು, ಷರತ್ತುಗಳಿಗೆ ಒಳಪಟ್ಟು ವರ್ತಕರಿಗೆ 12 ವರ್ಷ ಕರಾರಿನ ಮೇಲೆ ಮಳಿಗೆಗಳನ್ನು ಬಾಡಿಗೆ ನಿರ್ಧರಿಸಲಾಗಿತ್ತು. ಲಾಟರಿಯಲ್ಲಿ ವರ್ತಕರಿಗೆ ಹಂಚಿಕೆ ಮಾಡಿ ಉಳಿಯುವ 8 ಮಳಿಗೆಗಳಿಗೆ ನಂತರದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಸಲು ಹೈಕೋರ್ಟ್‌ ಸ್ಥಳೀಯ ನಗರಸಭೆಗೆ ಆದೇಶಿಸಿತ್ತು.

ಆದರೆ ವರ್ತಕರು ಜಿಲ್ಲಾಡಳಿತ ನಿಗದಿಪಡಿಸಿರುವ ಠೇವಣಿ ಹಾಗೂ ಬಾಡಿಗೆ ಹಣ ದುಬಾರಿಯಾಗಿದೆ ಎಂದು ಆರೋಪಿಸಿ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯಿಂದ ದೂರ ಉಳಿಯುವ ಮೂಲಕ ಜಿಲ್ಲಾಡಳಿತಕ್ಕೆ ಸೆಡ್ಡು ಹೊಡೆದಿದ್ದಾರೆ. ಹೀಗಾಗಿ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಹೈಕೋರ್ಟ್‌ ಆದೇಶದಿಂದ ಮುಕ್ತಿ ಕಾಣುವ ನಿರೀಕ್ಷೆ ಹೊಂದಿದ್ದ ಖಾಸಗಿ ಬಸ್‌ ನಿಲ್ದಾಣದ ಮಳಿಗೆಗಳು ಮತ್ತೆ ನೆನಗುದಿಗೆ ಬಿದ್ದಂತಾಗಿದೆ.

ಅಕ್ರಮ ಚಟುವಟಿಕೆಗಳ ತಾಣ: ಜಿಲ್ಲಾ ಕೇಂದ್ರದಲ್ಲಿ ನಗರಸಭೆ ವತಿಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಖಾಸಗಿ ಬಸ್‌ ನಿಲ್ದಾಣದಲ್ಲಿ ಅಂಗಡಿ ಮಳಿಗೆಗಳನ್ನು ನಿರ್ಮಿಸಿ ವರ್ಷಗಳೇ ಉರುಳಿವೆ. ಇದರಿಂದ ಇಡೀ ಬಸ್‌ ನಿಲ್ದಾಣದಲ್ಲಿ ಅಂಗಡಿ ಮಳಿಗೆಗಳು ರಾತ್ರಿಯಾದರೆ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಮತ್ತೂಂದು ಕಡೆ ಮಾಸಿಕ ನಗರಸಭೆಗೆ ಹರಿದು ಬರಬೇಕಿದ್ದ ಲಕ್ಷಾಂತರ ರೂ. ಬಾಡಿಗೆ ಕೂಡ ನಗರಸಭೆಗೆ ಬಾರದಂತೆ ಆಗಿದೆ.

ಸ್ಥಳೀಯ ವರ್ತಕರ ವಾದ ಏನು?: ಈ ಹಿಂದೆ ಹಳೆಯ ಖಾಸ್‌ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಪ್ರಸ್ತುತ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಪ್ರತ್ಯೇಕಗೊಂಡಿವೆ. ಸದ್ಯ ಖಾಸಗಿ ಬಸ್‌ ನಿಲ್ದಾಣಕ್ಕೆ ಕೇವಲ ಬೆರಳೆಣಿಕೆಯಷ್ಟು ಖಾಸಗಿ ಬಸ್‌ಗಳು ಬರುತ್ತವೆ. ಹೆಚ್ಚಿನ ಪ್ರಯಾಣಿಕರು ಬರುವುದಿಲ್ಲ. ಹೀಗಾಗಿ ದುಬಾರಿ ಬಾಡಿಗೆ, ಠೇವಣಿ ಕಟ್ಟಿ ವ್ಯಾಪಾರ ಮಾಡಿ ಬದುಕಲು ಕಷ್ಟವಾಗುತ್ತದೆ. ಈ ಹಿಂದೆ ಹಳೆ ಬಸ್‌ ನಿಲ್ದಾಣದಲ್ಲಿ ಮಳಿಗೆಗಳಿಗೆ 500, 600 ರೂ. ಮಾತ್ರ ಬಾಡಿಗೆ ಕಟ್ಟುತ್ತಿದ್ದೇವು.

ಆದರೆ ಇದೀಗ ಲಕ್ಷಗಟ್ಟಲೇ ಠೇವಣಿ, ಸಾವಿರಾರು ರೂ. ಬಾಡಿಗೆ ಕಟ್ಟಬೇಕು ಎಂದರೆ ಕಷ್ಟವಾಗುತ್ತದೆ. ಸಂತೆ ಮಾರುಕಟ್ಟೆಯಲ್ಲಿರುವ ಸಂಕೀರ್ಣದಲ್ಲಿ 4,000 ಬಾಡಿಗೆ ನಿಗದಿ ಮಾಡಿದರೂ ವರ್ತಕರು ಹೋಗದೆ ಖಾಲಿ ಉಳಿದಿವೆ. ಆದ್ದರಿಂದ ಠೇವಣಿ, ಬಾಡಿಗೆ ಕಡಿಮೆ ಮಾಡಬೇಕು ಎಂದು ವರ್ತಕರು ಮನವಿ ಮಾಡಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಒಪ್ಪಿರಲಿಲ್ಲ. ಹೀಗಾಗಿ ಆ.13 ರಂದು ನಡೆಯಬೇಕಿದ್ದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ವರ್ತಕರ ಬಹಿಷ್ಕಾರದಿಂದ ಸ್ಥಗಿತಗೊಂಡಿದೆ.

ಹೈಕೋರ್ಟ್‌ ಆದೇಶದಂತೆ ಆ.13 ರಂದು ಮಳಿಗೆಗಳ ಹರಾಜು ನಡೆಯಬೇಕಿತ್ತು. ಆದರೆ ವರ್ತಕರು ದುಬಾರಿ ಬಾಡಿಗೆ, ಠೇವಣಿ ಎಂದು ಹೇಳಿ ಯಾರು ಕೂಡ ಭಾಗವಹಿಸಿಲ್ಲ. ಈ ಬಗ್ಗೆ ಮತ್ತೆ ಹೈಕೋರ್ಟ್‌ ಗಮನಕ್ಕೆ ತಂದು ಮುಂದೆ ಕೋರ್ಟ್‌ ನೀಡುವ ಸೂಚನೆಯಂತೆ ಮುಂದಿನ ಕ್ರಮ ವಹಿಸುತ್ತೇವೆ.
-ಉಮಾಕಾಂತ್‌, ನಗರಸಭೆ ಆಯುಕ್ತರು

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.