INX ಪ್ರಕರಣ; ಕೇಂದ್ರ ಮಾಜಿ ಸಚಿವ ಚಿದಂಬರಂ ಬಂಧನ


Team Udayavani, Aug 21, 2019, 9:58 PM IST

chidu-4

ನವದೆಹಲಿ : ಐಎನ್ ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದ ವಿಚಾರಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಬಂಧನವಾಗಿದೆ.

ಬಂಧನ ಭೀತಿಯಿಂದ ಪಾರಾಗಲು ಸಾಕಷ್ಟು ನಾಟಕಗಳು ನಡೆದರೂ ಯಾವುದೇ ಪ್ರಯೋಜನವಾಗಲಿಲ್ಲ ಕೊನೆಗೂ ಸಿಬಿಐ ಅಧಿಕಾರಿಗಳ ಬಲೆಗೆ ಬೀಳಬೇಕಾಯಿತು.

ಬಂದಿನಕ್ಕೊಳಗಾಗಿರುವ ಪಿ.ಚಿದಂಬರಂ ಅವರನ್ನು ದೆಹಲಿಯ ರಾಮ್‌ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಸಿಬಿಐ ಕೇಂದ್ರ ಕಚೇರಿಗೆ ಕರೆದುಕೊಂಡು ಹೋಗಲಾಯಿತು.

ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆ ನಾಳೆ ಕೋರ್ಟಿಗೆ ಹಾಜರುಪಡಿಸಲಿರುವ ಅಧಿಕಾರಿಗಳು.

ಇತ್ತ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈ ನಲ್ಲಿದ್ದ ಕಾರ್ತಿ ದೆಹಲಿಗೆ ಪ್ರಯಾಣವನ್ನು ಬೆಳೆಸಿದ್ದಾರೆ.

ಬಂಧನಕ್ಕೆ ಮುನ್ನ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿ.ಚಿದಂಬರಂ ನನ್ನ ಮೇಲೆ ಸಿಬಿಐ ಈ ವರೆಗೂ ಚಾರ್ಜ್ ಶೀಟ್ ದಾಖಲು ಮಾಡಿಲ್ಲ, ಎಫ್ಐಆರ್ ನಲ್ಲೂ ನನ್ನ ಹೆಸರನ್ನು ಉಲ್ಲೇಖ ಮಾಡಿಲ್ಲ, ಕಳೆದ 27 ಗಂಟೆಗಳಲ್ಲಿ ಗೊಂದಲಗಳಿಗೆ ಕಾರಣವಾಗಿವೆ ಈ ಪ್ರಕರಣದಲ್ಲಿ ನಾನು ಆರೋಪಿಯಲ್ಲ ಎಂದು ತಿಳಿಸಿದರು.

ಇದನ್ನೆಲ್ಲ ಟ್ರಂಪ್‌ ಮಾಡುತ್ತಿಲ್ಲ; ಬಿಜೆಪಿಯವರೇ ಮಾಡುತ್ತಿದ್ದಾರೆ!
ಐಎನ್‌ಎಕ್ಸ್‌ ಮೀಡಿಯಾ ಹಗರಣದಲ್ಲಿ ಕೇಂದ್ರದ ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರನ್ನು ಸಿಬಿಐ ಬಂಧಿಸಿದ್ದಕ್ಕೆ ಅವರ ಪುತ್ರ, ಕಾರ್ತಿ ಚಿದಂಬರಂ ಕೆಂಡಾಮಂಡಲವಾಗಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಇಷ್ಟೆಲ್ಲ ಡ್ರಾಮಾ ಮಾಡಿ ಬಂಧಿಸುವಂಥದ್ದು ಏನೂ ಇರಲಿಲ್ಲ. ಇದನ್ನೆಲ್ಲ ರಾಜಕೀಯ ದ್ವೇಷದಿಂದಲೇ ಮಾಡಲಾಗುತ್ತಿದೆ. ಇದನ್ನು ಮಾಡುತ್ತಿರುವವರು ಬಿಜೆಪಿಯವರು ಹೊರತು ಅಮೆರಿಕದ ಡೊನಾಲ್ಡ್‌ ಟ್ರಂಪ್‌ ಏನೂ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಸಂಜೆಯ ಬಳಿಕ ಏನೇನಾಯಿತು :

– ನಾಪತ್ತೆಯಾಗಿದ್ದ ಪಿ.ಚಿದಂಬರಂ ದಿಢೀರ್ ಆಗಿ ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಪ್ರತ್ಯಕ್ಷ.

– ಸುದ್ದಿಗೋಷ್ಠಿ ಬಳಿಕ ತಮ್ಮ ನಿವಾಸಕ್ಕೆ ತೆರಳಿದ ಚಿದು.

– ತಮ್ಮ ನಿವಾಸದ ಎರಡನೇ ಮಹಡಿಯ ಕೊಠಡಿಗೆ ಬೀಗ ಹಾಕಿ ಕುಳಿತ ಚಿದಂಬರಂ.

– ಚಿದಂಬರಂ ಮನೆಯತ್ತ ತೆರಳುವ ವಿಷಯ ತಿಳಿದ ಸಿಬಿಐ, ಇಡಿ ಅಧಿಕಾರಿಗಳು ಮನೆಯತ್ತ ದೌಡಾಯಿಸಿದ್ದಾರೆ.

– ಸಿಬಿಐ ಅಧಿಕಾರಿಗಳು ನಿವಾಸದ ಬಳಿ ತೆರಳಿದ ಸಂದರ್ಭ ಗೇಟ್ ಬೀಗ ಹಾಕಿದ ಸಂದರ್ಭ ಸಿಬಿಐ ಅಧಿಕಾರಿಗಳು ನಿವಾದ ಕಾಂಪೌಂಡ್ ಗೋಡೆಯನ್ನು ಹಾರಿ ಒಳಗೆ ಹೋಗಬೇಕಾಯಿತು.

– ಪಿ.ಚಿದಂಬರಂ ನಿವಾಸದ ಬಳಿ ಭಾರಿ ಡ್ರಾಮಾ ನಡೆಯುತ್ತಿದ್ದು ಸಿಬಿಐ ಅಧಿಕಾರಿಗಳಿಂದ ಚಿದಂಬರಂ ವಿಚಾರಣೆ.

– ಮುನ್ನೆಚ್ಚರಿಕೆಯಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೋರಿದ ಸಿಬಿಐ ಅಧಿಕಾರಿಗಳು.

– ನಿವಾಸದ ಬಳಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಘರ್ಷಣೆ

– ಚಿದಂಬರಂ ನಿವಾಸಕ್ಕೆ ತೆರಳಿದ 3 ಸಿಬಿಐ ತಂಡಗಳು.

– ಎಲ್ಲಾ ನಾಟಕಗಳ ಬಳಿಕ ಚಿದಂಬರಂ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು.

– ವಿಷಯ ತಿಳಿದ ಕಾರ್ತಿ ಚಿದಂಬರಂ ಚೆನ್ನೈ ನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

– ಸಿಬಿಐ ಅಧಿಕಾರಿಗಳ ತೀವ್ರ ವಿಚಾರಣೆಯ ಬಳಿಕ ಬಂಧನ ಸಾಧ್ಯತೆ.

– ನಾಳೆ ಸಿಬಿಐ ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆ .

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.