ಮಾದಕ ವ್ಯಸನದಿಂದ ದೂರ ಇರಿ
ಒಮ್ಮೆ ಮಾದಕ ವಸ್ತುಗಳ ಚಟಕ್ಕೆ ಮುಂದಾದರೆ ಹೊರ ಬರುವುದು ಕಷ್ಟ
Team Udayavani, Aug 22, 2019, 10:55 AM IST
ದಾವಣಗೆರೆ: ಕ್ಷಣಿಕ ಸುಖದ ಮಾದಕ ವಸ್ತುಗಳಿಗೆ ಮಾರು ಹೋಗದೆ ಶಾಶ್ವತ ಸಂತೋಷದ ಕಡೆಗೆ ಮನಸ್ಸನ್ನು ಕೇಂದ್ರೀಕೃತಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಎಚ್. ಬಸವರಾಜೇಂದ್ರ ಸಲಹೆ ನೀಡಿದ್ದಾರೆ.
ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಮಾದಕ ವ್ಯಸನ, ಅನಧಿಕೃತ ಕಳ್ಳಸಾಗಣೆ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಾದಕ ವ್ಯಸನದಿಂದ ಯುವ ಜನಾಂಗ ದೂರ ಇರಬೇಕು ಎಂದರು. ಮಾದಕ ವಸ್ತುಗಳ ಸೇವನೆಯಿಂದ ಮುಕ್ತರಾಗಲು ಸಾತ್ವಿಕ ಆಹಾರ ಸೇವನೆ, ಯೋಗ, ಪ್ರಾಣಾಯಾಮ, ಧ್ಯಾನದಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿ ನಿತ್ಯ ಯೋಗ ಇತರೆ ದೈಹಿಕ ಚಟುವಟಿಕೆಯಿಂದ ದೈಹಿಕ ಮತ್ತು ಮಾನಸಿಕ ಕ್ಷಮತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ| ಸಿ.ವೈ. ಸುದರ್ಶನ್ ಮಾತನಾಡಿ, ಮಾದಕ ವಸ್ತು ಒಳಗೊಂಡಂತೆ ವ್ಯಸನ ಸಂಕೀರ್ಣ ಸಮಸ್ಯೆ. ಒತ್ತಡ ಕಡಿಮೆ, ಗೆಳೆಯರ ಒತ್ತಾಯ ಇತರೆ ಕಾರಣಕ್ಕೆ ಒಮ್ಮೆ ಮಾದಕ ವಸ್ತುಗಳ ಚಟಕ್ಕೆ ಮುಂದಾದರೆ ಅದರಿಂದ ಹೊರ ಬರುವುದು ಕಷ್ಟ. ಹಾಗಾಗಿ ಪ್ರಾರಂಭಿಕ ಹಂತದಿಂದಲೇ ದೂರವೇ ಉಳಿಯುವುದು ಒಳ್ಳೆಯ ವಿಧಾನ ಎಂದು ತಿಳಿಸಿದರು. ದಾವಿವಿ ಕುಲಸಚಿವ(ಆಡಳಿತ) ಪ್ರೊ| ಪಿ. ಕಣ್ಣನ್ ಮಾತನಾಡಿ, ಇಂದಿನ ಸಾಮಾಜಿಕ, ಕೌಟಂಬಿಕ ವ್ಯವಸ್ಥೆ ಮಾದಕ ವಸ್ತು ಸೇವನೆಗೆ ಪ್ರೇರಣೆಯಂತಿದೆ. ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳಲ್ಲಿ ಮಾದಕ ವಸ್ತುಗಳ ಜಾಹೀರಾತನ್ನು ಸಂಪೂರ್ಣವಾಗಿ ನಿಷೇಧಿಸುವಂತಾಗಬೇಕು ಎಂದು ನುಡಿದರು.
ವಿಶ್ವವಿದ್ಯಾಲಯ ಪರೀಕ್ಷಾಂಗ ಕುಲಸಚಿವ ಪ್ರೊ| ಬಸವರಾಜ ಬಣಕಾರ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ| ಪಿ.ಡಿ. ಮುರುಳೀಧರ್, ಮನೋವೈದ್ಯ ಡಾ|ಗಂಗಂ ಸಿದ್ದಾರೆಡ್ಡಿ, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಯು.ಎಂ. ಲೋಕೇಶ್, ಸಹಾಯಕ ಪ್ರಾಧ್ಯಾಪಕ ಬಿ.ಎಸ್. ಪ್ರದೀಪ್ ಇತರರು ಇದ್ದರು.
ಕಸದ ಬುಟ್ಟಿಗೆ ಗುಟ್ಕಾ ಪ್ಯಾಕೆಟ್ ಇತರೆ ವಸ್ತು ಹಾಕುವ ಮೂಲಕ ದಿನಾಚರಣೆಗೆ ಚಾಲನೆ ನೀಡಿದ್ದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ