ವಿದ್ಯುತ್‌ ವಿತರಣಾ ಕೇಂದ್ರ ನನೆಗುದಿಗೆ

•ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರೈತರು•ಗ್ರಾಮಾಭಿವೃದ್ಧಿ ಗಗನ ಕುಸುಮ

Team Udayavani, Aug 22, 2019, 11:29 AM IST

22-Agust-10

ಮರಿಯಮ್ಮನಹಳ್ಳಿ: ಚಿಲಕನಹಟ್ಟಿ ಗ್ರಾಮದಲ್ಲಿ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಗೆ ಮೀಸಲಿಟ್ಟ ಜಮೀನು

•ಎಂ. ಸೋಮೇಶ ಉಪ್ಪಾರ
ಮರಿಯಮ್ಮನಹಳ್ಳಿ: ಕಡಿಮೆ ವೋಲೆrೕಜ್‌ ವಿದ್ಯುತ್‌, ಪದೇ ಪದೇ ದಿನವಿಡೀ ವಿದ್ಯುತ್‌ ಕಡಿತ, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌ ಆಧಾರಿತ ಯಾವುದೇ ಕೆಲಸಗಳು ಸಂಪೂರ್ಣಗೊಳ್ಳುವುದೇ ಇಲ್ಲ|

ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಅಲ್ಲಲ್ಲಿ ಚಿಕ್ಕ ಪ್ರಮಾಣದ ವಿದ್ಯುತ್‌ ವಿತರಣಾ ಕೇಂದ್ರಗಳ ಅಗತ್ಯವಿದೆ. ಇಂಥ ಅಗತ್ಯದ ಬೇಡಿಕೆಯೊಂದು ಚಿಲಕಹಟ್ಟಿ ಭಾಗದಲ್ಲಿ ಸುಮಾರು ದಶಕಗಳಿಂದಲೂ ಹಾಗೇ ನನೆಗುದಿಗೆ ಬಿದ್ದಿದೆ.

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮದಲ್ಲಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಗಾಗಿ ಈ ಭಾಗದ ರೈತರು ಬಹಳ ವರ್ಷಗಳಿಂದ ಬೇಡಿಕೆ ಇಡುತ್ತಲೇ ಇದ್ದಾರೆ. ಆದರೆ ಈ ಬೇಡಿಕೆ ಈಡೇರಿಸುವ ಕಾರ್ಯಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂಬುದು ಈ ಭಾಗದ ರೈತರ ಆರೋಪ.

ಹಾರುವನಹಳ್ಳಿ ಗ್ರಾಮ ಸರ್ವೇ ನಂ. 128, 129ರಲ್ಲಿ 1.55,0.45 ಎಕರೆ ಒಟ್ಟು ವಿಸ್ತೀರ್ಣ 2 ಎಕರೆ ಜಮೀನನ್ನು ಖರೀದಿಸಲು ಕೆಪಿಟಿಸಿಎಲ್ ಮುಂದಾಗಿದೆ. ಚಿಲಕನಹಟ್ಟಿ ಭಾಗದ ರೈತರ ಹಲವು ದಶಕಗಳ ಹಿಂದಿನ ಬೇಡಿಕೆಯೊಂದು ಈಡೇರಿಕೆಗೆ ಈಗ ಒಂದಿಷ್ಟು ರೆಕ್ಕೆಪುಕ್ಕಗಳು ಬಂದಿವೆ.

ಇತ್ತೀಚೆಗೆ ಬಳ್ಳಾರಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಹೊಸಪೇಟೆಯ ಶಿರಸ್ತೇದಾರರು, ಉಪನೋಂದಣಾಧಿಕಾರಿಗಳು ಹೊಸಪೇಟೆ, ಕೆಪಿಟಿಸಿಎಲ್ನ ಕಾರ್ಯನಿರ್ವಾಹಕ ಅಭಿಯಂತರರು, ಜಿಪಂನ ಉಪಕಾರ್ಯದರ್ಶಿಗಳು ಪಾಲ್ಗೊಂಡಿದ್ದರು. ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಭೂಮಿ ಖರೀದಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿ ಭೂಮಿ ಬೆಲೆ ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಎಕರೆಯೊಂದಕ್ಕೆ 8.80 ಲಕ್ಷ ರೂ. ನಿಗದಿ ಮಾಡಲಾಗಿದ್ದು ನಿಯಮಾನುಸಾರ ಭೂಮಾಲೀಕತ್ವ ಪಡೆದ ಕೆಪಿಟಿಸಿಎಲ್ ಬಳ್ಳಾರಿ ಇವರು ಚಿಲಕನಹಟ್ಟಿ ಗ್ರಾಪಂಗೆ ಪಾವತಿಸಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ರೈತರಿಗೆ ಹೆಚ್ಚು ಅನುಕೂಲ: ಚಿಲಕನಹಟ್ಟಿ ಗ್ರಾಮದಲ್ಲಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆ ಮಾಡುವುದರಿಂದ ರೈತರಿಗೆ ಅಗತ್ಯವಾದ ವಿದ್ಯುತ್‌ ನ ಸಮಸ್ಯೆ ಬಗೆಹರಿಯಲಿದೆ. ಕಡಿಮೆ ವೋಲೆrೕಜ್‌ನಿಂದ ಗ್ರಾಮೀಣ ಭಾಗದ ಜನರು ಹೈರಾಣಾಗುವುದ ತಪ್ಪುತ್ತದೆ. ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕಾ ಚಟುವಟಿಕೆಗೂ ಸಮರ್ಪಕ ವಿದ್ಯುತ್‌ ದೊರೆಯಲಿದೆ. ರೈತರು ಹೊಲದಲ್ಲಿನ ಪಂಪ್‌ಸೆಟ್‌ಗಳ ಮೂಲಕ ಸುಗಮವಾಗಿ ನೀರು ಹರಿಸಲು ಸಾಧ್ಯವಾಗುತ್ತದೆ. ಚಿಲಕನಹಟ್ಟಿ ಗ್ರಾಪಂ ವ್ಯಾಪ್ತಿಯ ಹಾರುವನಹಳ್ಳಿ, ತಾಳೆಬಸಾಪುರ ತಾಂಡಾ, ತಿಮ್ಮಲಾಪುರ, ಪೋತಲಕಟ್ಟೆ, ಜಿ. ನಾಗಲಾಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೂ ಸಮರ್ಪಕ ವಿದ್ಯುತ್‌ ಸರಬರಾಜು ಮಾಡಲು ಸಾಧ್ಯವಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದಷ್ಟು ಬೇಗ 66/11 ಕೆ.ವಿ. ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಯಾಗಲಿ ಎಂದು ಈ ಭಾಗದ ರೈತರು ಕಾತರದಿಂದ ಕಾದು ನೋಡುತ್ತಿದ್ದಾರೆ. ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಲಿ ಎಂದು ಜನ ಆಶಿಸುತ್ತಿದ್ದಾರೆ.

ಚಿಲಕನಹಟ್ಟಿ ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರಕ್ಕೆ ಭೂಮಿ ಖರೀದಿಗೆ ಸಂಬಂಧಿಸಿದಂತೆ ಬೆಲೆ ನಿಗದಿಪಡಿಸಲಾಗಿದ್ದು ನಂತರದ ದಿನಗಳಲ್ಲಿ ಯೋಜನೆ ಕಾಮಗಾರಿಯ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು ಎರಡು ವರ್ಷಗಳ ಒಳಗೆ ಯೋಜನೆ ಪೂರ್ಣಗೊಳ್ಳಲಿದೆ.
ಕಾರ್ಯನಿರ್ವಾಹಕ ಅಭಿಯಂತರರು
 ಕೆಪಿಟಿಸಿಎಲ್

ನಮ್ಮ ಭಾಗಕ್ಕೆ ಅಗತ್ಯವಿದ್ದ ವಿದ್ಯುತ್‌ ವಿತರಣಾ ಉಪಕೇಂದ್ರ ಸ್ಥಾಪನೆ ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಊರಿನ ನಮ್ಮೂರು ನಮ್ಮ ತೋಟ ಯೋಜನೆಗಾಗಿ ತೆಗೆದಿರಿಸಿದ್ದ ಸುಮಾರು 6 ಎಕರೆ ಜಮೀನಿನಲ್ಲಿ 2 ಎಕರೆ ಜಮೀನು ಇದಕ್ಕಾಗಿ ಕೊಡಲು ನಿರ್ಧರಿಸಲಾಗಿದೆ. ಈ ವಿದ್ಯುತ್‌ ವಿತರಣ ಕೇಂದ್ರ ಆರಂಭವಾದರೆ ನಮ್ಮ ಭಾಗದ ವಿದ್ಯುತ್‌ ವಿತರಣೆಯಲ್ಲಿನ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ.
ಬಿ.ಎಸ್‌. ರಾಜಪ್ಪ,
ತಾಪಂ ಸದಸ್ಯರು ಹೊಸಪೇಟೆ, ಮಾಜಿ ಅಧ್ಯಕ್ಷರು ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.