ಬೆಂಗಳೂರು-ಮಂಗಳೂರು ರೈಲು ಇನ್ನೆರಡು ದಿನಗಳಲ್ಲಿ ಪುನರಾರಂಭ?
Team Udayavani, Aug 23, 2019, 9:08 AM IST
ಸುಬ್ರಹ್ಮಣ್ಯ: ಘಾಟಿ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದ ಹಲವು ಕಡೆಗಳಲ್ಲಿ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು ಹಳಿಗಳಿಗೆ ಉಂಟಾದ ಹಾನಿಯ ದುರಸ್ತಿ ಕಾರ್ಯ ಕೊನೆಯ ಹಂತಕ್ಕೆ ತಲುಪಿದ್ದು ಆ. 25ರಿಂದ ರೈಲು ಓಡಾಟ ಪುನರಾರಂಭವಾಗುವ ಸಾಧ್ಯತೆಯಿದೆ.
5 ಕಡೆ ದೊಡ್ಡ ಪ್ರಮಾಣದ ಹಾನಿಯಾಗಿತ್ತು. ನಾಲ್ಕು ಕಡೆ ದುರಸ್ತಿ ಮುಕ್ತಾಯವಾಗಿದೆ. ಆದರೆ ಎಡಕುಮೇರಿ ಸಮೀಪ 63/500 ಕಿ.ಮೀ. ವ್ಯಾಪ್ತಿಯಲ್ಲಿ ಗುಡ್ಡ ಜರಿದು ಹಳಿಯೇ ಕೊಚ್ಚಿ ಹೋದ ಕಡೆ ಮಾತ್ರ ಕೊನೆ ಹಂತದ ಕಾಮಗಾರಿ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಅದು ಮುಕ್ತಾಯವಾಗಲಿದ್ದು ಆ. 25ರಿಂದ ಮಾರ್ಗ ಸಂಚಾರಕ್ಕೆ ಮುಕ್ತವಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.
ರೈಲು ಸಂಚಾರ ರದ್ದು
ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ರೈಲು ಸಂಚಾರ ಆ. 24ರಂದು ರದ್ದಾಗಿದೆ. ಕಣ್ಣೂರು/ಕಾರವಾರ- ಕೆಎಸ್ಆರ್ ಬೆಂಗಳೂರಿಗೆ ತೆರಳುವ ಎಕ್ಸ್ಪ್ರೆಸ್ ರೈಲು ಆ. 23 ಮತ್ತು 24ರಂದು ಸಂಪೂರ್ಣ ರದ್ದಾಗಿದೆ. ಕೆಎಸ್ಆರ್ ಬೆಂಗಳೂರು-ಕಣ್ಣೂರು/ಕಾರವಾರ ತೆಳುವ ಎಕ್ಸ್ಪ್ರೆಸ್ ರೈಲು ಆ. 23 ಮತ್ತು 24ರಂದು ರದ್ದಾಗಿದೆ. ಯಶವಂತ ಪುರ-ಮಂಗಳೂರು ಜಂಕ್ಷನ್ ತೆರಳುವ ಎಕ್ಸ್ಪ್ರೆಸ್ ರೈಲು ಆ. 25ರಂದು ರದ್ದಾಗಿದೆ. ಯಶವಂತಪುರ- ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರ ಆ. 25ರಂದು ರದ್ದಾಗಿದೆ. ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರವು ಆ. 25ರಂದು ಭಾಗಶಃ ರದ್ದಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ