ಹಾಳಾದ ರಸ್ತೆಗಳು ಸಂಚಾರಕ್ಕೆ ಮುಕ್ತ

ಲೋಕೋಪಯೋಗಿ ಇಲಾಖೆಯಿಂದ ದುರಸ್ತಿ •ಸಾಗರ ತಾಲೂಕಲ್ಲೇ ಹೆಚ್ಚು ರಸ್ತೆಗಳಿಗೆ ಹಾನಿ

Team Udayavani, Aug 23, 2019, 12:41 PM IST

23-April-20

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಸೇತುವೆಯನ್ನು ತಾತ್ಕಾಲಿಕ ದುರಸ್ತಿ ಮಾಡಿರುವುದು.

ಶಿವಮೊಗ್ಗ: ಆಶ್ಲೇಷ ಮಳೆ ಅಬ್ಬರಕ್ಕೆ ಜಿಲ್ಲೆಯ ರಸ್ತೆಗಳೆಲ್ಲ ಕ್ಲೇಷವಾಗಿವೆ. ವಾರದ ಕಾಲದ ಎಡೆಬಿಡದೆ ಸುರಿದ ಮಳೆಯಿಂದ ಬಹುತೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಲೋಕೋಪಯೋಗಿ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಿದೆ. ಎಲ್ಲ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ.

ದಾಖಲೆ ಮಳೆಗೆ ರಾಜ್ಯ, ರಾಷ್ಟ್ರೀಯ, ಜಿಲ್ಲಾ ಮಟ್ಟದ ರಸ್ತೆಗಳು ಗುಂಡಿ, ಗಟಾರುಗಳಿಂದ ಕೂಡಿದ್ದು ದುರಸ್ತಿಗೆ ಸರಕಾರದ ನೆರವನ್ನು ಬೇಡುತ್ತಿವೆ. ರಸ್ತೆ ಸಂಪೂರ್ಣ ಕೊಚ್ಚಿ ಹೋಗಿರುವ ಕಡೆ ತಾತ್ಕಾಲಿಕ ದುರಸ್ತಿ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 113 ಕೋಟಿ ಮೌಲ್ಯದ ರಸ್ತೆ, ಸೇತುವೆಗಳು ನೀರು ಪಾಲಾಗಿವೆ.

ರಾಜ್ಯ ಹೆದ್ದಾರಿ: ಭದ್ರಾವತಿ ತಾಲೂಕಿನಲ್ಲಿ 5.6 ಕಿಮೀ, ಹೊಸನಗರ 2.34 ಕಿಮೀ, ಸಾಗರ 2.8 ಕಿಮೀ, ಶಿಕಾರಿಪುರ 4.9 ಕಿಮೀ, ಶಿವಮೊಗ್ಗ 6, ಸೊರಬ 11. 8 ಕಿಮೀ, ತೀರ್ಥಹಳ್ಳಿ 19 ಕಿಮೀ ಸೇರಿ ಒಟ್ಟು ಜಿಲ್ಲೆಯಲ್ಲಿ 52.44 ಕಿಮೀ ರಾಜ್ಯ ಹೆದ್ದಾರಿ ಹಾಳಾಗಿದ್ದು 20.84 ಕೋಟಿ ನಷ್ಟ ಉಂಟಾಗಿದೆ. ಅದೇ ರೀತಿ ಜಿಲ್ಲಾ ಮುಖ್ಯ ರಸ್ತೆಗಳು ನೀರು ಪಾಲಾಗಿದ್ದು ಭದ್ರಾವತಿಯಲ್ಲಿ 6.8 ಕಿಮೀ, ಹೊಸನಗರ 8.6 ಕಿಮೀ, ಸಾಗರ 17.82 ಕಿಮೀ, ಶಿಕಾರಿಪುರ 11.49 ಕಿಮೀ, ಶಿವಮೊಗ್ಗ 1.21 ಕಿಮೀ, ಸೊರಬ 12.27 ಕಿಮೀ, ತೀರ್ಥಹಳ್ಳಿ 4.45 ಕಿಮೀ ಸೇರಿ ಒಟ್ಟು 62.64 ಕಿಮೀನಷ್ಟು ರಸ್ತೆ ಹಾಳಾಗಿದ್ದು 30.65 ಕೋಟಿ ರೂ. ನಷ್ಟ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಗಳೂ ಹಾಳು: ಬೆಂಗಳೂರು- ಹೊನ್ನಾವರ, ಬೈಂದೂರು- ರಾಣೆಬೆನ್ನೂರು, ತೀರ್ಥಹಳ್ಳಿ ಮೂಲಕ ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳು ಸಹ ಇವೆ. ಈ ಪೈಕಿ ಸಾಗರ ತಾಲೂಕಿನಲ್ಲೇ ಅತಿ ಹೆಚ್ಚು ನಷ್ಟ ಸಂಭವಿಸಿದೆ. ಸಾಗರ ತಾಲೂಕಿನ 51.80 ಕಿಮೀನಷ್ಟು ರಸ್ತೆ ನೀರಿನಲ್ಲಿ ಆಹುತಿಯಾಗಿದೆ. ಹೊಸನಗರ 16.22 ಕಿಮೀ, ಭದ್ರಾವತಿ 5.10 ಕಿಮೀ, ಶಿವಮೊಗ್ಗ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 7.72 ಕಿಮೀ ಸೇರಿ ಒಟ್ಟು 80.84 ಕಿಮೀ ರಾಷ್ಟ್ರೀಯ ಹೆದ್ದಾರಿ ಹಾನಿಯಾಗಿದೆ. 16.97 ಕೋಟಿ ನಷ್ಟ ಸಂಭವಿಸಿದೆ.

ಸ್ಕ್ವಾಯರ್‌ ಕಟ್: ಸಿಎಂ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ರಸ್ತೆ ಗುಂಡಿಗಳನ್ನು ಸಮಭುಜ ಆಕಾರದಲ್ಲಿ ಕತ್ತರಿಸಿ ದುರಸ್ತಿ ಮಾಡಬೇಕೆಂದು ಶಾಸಕ ಕುಮಾರ್‌ ಬಂಗಾರಪ್ಪ ಒತ್ತಾಯಿಸಿದರು. ಇರುವ ಗುಂಡಿಗಳನ್ನು ಅದೇ ಆಕಾರದಲ್ಲಿ ಮುಚ್ಚಿದರೆ ಅವು ಇನ್ನಷ್ಟು ದೊಡ್ಡದಾಗುತ್ತವೆ. ವಾಹನಗಳಿಗೂ ತೊಡಕಾಗುತ್ತದೆ ಎಂಬುದನ್ನು ಗಮನ ಸೆಳೆದಿದ್ದರು.

ಮಣ್ಣು ಬೇಡ: ರಸ್ತೆ ಗುಂಡಿಗಳನ್ನು ತಾತ್ಕಾಲಿಕವಾಗಿ ಮಣ್ಣು ಮುಚ್ಚಿ ದುರಸ್ತಿ ಮಾಡಲಾಗಿದೆ. ಮಳೆ ಪೂರ್ಣ ಮುಗಿದ ಮೇಲೆ ಡಾಂಬರು ಹಾಕಿ ಮುಚ್ಚಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ತಿಳಿಸಿದ್ದಾರೆ. ಮಳೆ ಬಿಟ್ಟು ಬಿಟ್ಟು ಬರುತ್ತಿರುವುದರಿಂದ ವಾಹನ ಸವಾರರಿಗೆ ಬಿಸಿಲು ಬಂದಾಗ ಧೂಳು, ಮಳೆ ಬಂದಾಗ ಕೆಸರು ಎದುರಾಗುತ್ತಿದೆ. ಪೂರ್ಣ ಪ್ರಮಾಣದ ದುರಸ್ತಿಗೆ ನಾಗರಿಕರು ಆಗ್ರಹಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲೂ ಹಾಳು: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಂಕ್ರೀಟ್ ರಸ್ತೆ ಹೊರತುಪಡಿಸಿ ಡಾಂಬರು ರಸ್ತೆಗಳು ಮಳೆಗಾಲಕ್ಕೂ ಮೊದಲೇ ಗುಂಡಿ ಬಿದ್ದಿದ್ದವು. ಈಗ ಸಂಪೂರ್ಣ ಹಾಳಾಗಿದ್ದು, ರಸ್ತೆ ಸಂಚಾರ ನರಕವಾಗಿದೆ. ಪಾಲಿಕೆ ವ್ಯಾಪ್ತಿಯ ರಸ್ತೆಗಳ ದುರಸ್ತಿಗೆ ವಿಶೇಷ ಅನುದಾನ ಬೇಕಿದೆ.

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.