ತಮಿಳುನಾಡಿಗೆ ಲಷ್ಕರ್ ಉಗ್ರರು ನುಸುಳಿರುವ ಶಂಕೆ ; ಎಲ್ಲೆಡೆ ಕಟ್ಟೆಚ್ಚರ
Team Udayavani, Aug 23, 2019, 3:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚೆನ್ನೈ: ಆರು ಜನ ಲಷ್ಕರ್ ಉಗ್ರರು ಶ್ರೀಲಂಕಾ ಮೂಲಕ ಕೊಯಂಬತ್ತೂರಿಗೆ ನುಸುಳಿದ್ದಾರೆ ಎಂಬ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನ್ನು ಆಧರಿಸಿ ತಮಿಳುನಾಡು ಪೊಲೀಸರು ಈ ವಿಷಯನ್ನು ಬಹಿರಂಗಪಡಿಸಿದ್ದಾರೆ ಮತ್ತು ಕೊಯಂಬತ್ತೂರಿನಲ್ಲಿ ಹೈ ಅಲರ್ಟ್ ಸ್ಥಿತಿ ನಿರ್ಮಾಣವಾಗಿದೆ.
ಐದು ಜನ ಲಂಕಾ ತಮಿಳರು ಮತ್ತು ಮತ್ತು ಓರ್ವ ಪಾಕಿಸ್ಥಾನಿ ನಾಗರಿಕ ಒಳಗೊಂಡಿರುವ ತಂಡ ನಗರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಮಾಹಿತಿಯನ್ನು ಆಧರಿಸಿ ತಮಿಳುನಾಡು ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ಸ್ಥಿತಿ ವಹಿಸುವಂತೆ ಸೂಚನೆ ನೀಡಿದ್ದಾರೆ.
ಈ ಸೂಚನೆಯನ್ನು ಆಧರಿಸಿ ಚೆನ್ನೈನಲ್ಲೂ ಸಹ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದೆ. ಇನ್ನು ತಮಿಳುನಾಡಿಗೆ ನುಸುಳಿರುವ ಶಂಕಿತರಿಬ್ಬರ ಭಾವಚಿತ್ರಗಳನ್ನು ಕೊಯಮುತ್ತೂರು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಇನ್ನು ರಾಜ್ಯಾದ್ಯಂತ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಡಿಜಿಪಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
– ವಸತಿಗೃಹಗಳ ತಪಾಸಣೆ
– ಸ್ಪೋಟಕ ವಸ್ತುಗಳ ಸಾಗಾಟ ತಡೆಗೆ ವಾಹನಗಳ ತಪಾಸಣೆ
– ಪೊಲೀಸ್ ಗಸ್ತು ಮತ್ತು ತಪಾಸಣೆ
– ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳಿಗೆ ಲುಕ್ ಔಟ್ ನೋಟೀಸ್
– ರೈಲ್ವೇ ನಿಲ್ದಾಣಗಳು, ಬಸ್ ಸ್ಟ್ಯಾಂಡ್ ಗಳು ಮತ್ತು ವಿಮಾನ ನಿಲ್ದಾಣಗಳ ತಪಾಸಣೆ
– ಪ್ರಮುಖ ದೇವಸ್ಥಾನಗಳಲ್ಲಿ ಸುರಕ್ಷತಾ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ