ಸಮಾಜ ವಿಜ್ಞಾನದಲ್ಲಿ ಸಂಶೋಧನೆಯಾಗಲಿ


Team Udayavani, Aug 23, 2019, 4:16 PM IST

23-April-33

ವಮೊಗ್ಗ: ಪ್ರೊ| ಎಸ್‌.ಎ. ಜಾವೇದ್‌ ರಚಿಸಿರುವ ಪುಸ್ತಕವನ್ನು ಪ್ರೊ| ಬಿ ಪಿ ವೀರಭದ್ರಪ್ಪ ಬಿಡುಗಡೆ ಮಾಡಿದರು.

ಶಿವಮೊಗ್ಗ: ಸಮಾಜದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಸಂಶೋಧನೆಗಳನ್ನು ಕೈಗೊಳ್ಳುವ ಮೂಲಕ ಸಮಾಜ ವಿಜ್ಞಾನಿಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಿದೆ. ಇಲ್ಲವಾದರೆ ಈಗಾಗಲೇ ಬೇಡಿಕೆ ಕಳೆದುಕೊಳ್ಳುತ್ತಿರುವ ಕಲಾ ವಿಷಯಗಳು ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸಲಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಜೆ. ಎಸ್‌. ಸದಾನಂದ ಎಚ್ಚರಿಸಿದರು.

ಕುವೆಂಪು ವಿವಿಯ ಪ್ರೊ| ಹಿರೇಮs್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರೊ| ಎಸ್‌. ಎ. ಜಾವಿದ್‌ ಅವರು ರಚಿಸಿರುವ ‘ಫಂಡಮೆಂಟಲ್ಸ್ ಆಫ್‌ ಸೈಂಟಿಫಿಕ್‌ ಸೋಷಿಯಲ್ ರಿಸರ್ಚ್‌’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೂಲಭೂತ ವಿಜ್ಞಾನಗಳ ಅಧ್ಯಯನ ವಿಧಾನಗಳನ್ನು ಸಮಾಜ ವಿಜ್ಞಾನಿಗಳು ಅಳವಡಿಸಿಕೊಂಡರೆ ಸಾಲದು. ಭಾರತದಂತಹ ದೇಶಗಳು ಇಂದಿಗೂ ಎದುರಿಸುತ್ತಿರುವ ಬಡತನ, ನಿರುದ್ಯೋಗ, ಆರ್ಥಿಕ ಹಿನ್ನಡೆಯಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನಗಳನ್ನು ಕೈಗೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆಯನ್ನೂ ನೀಡಬೇಕಿದೆ ಎಂದರು.

ಇಂದು ಅತ್ಯಧಿಕ ಯುವಜನತೆಯನ್ನು ಹೊಂದಿರುವ ಭಾರತ ಕೆಲವೇ ವರ್ಷಗಳಲ್ಲಿ ಅತಿ ಹೆಚ್ಚು ವೃದ್ಧರನ್ನು ಹೊಂದುವ ಸಮಸ್ಯೆಗಳನ್ನು ಎದುರಿಸಲಿದೆ. ಅಂತಹ ಸಂಧರ್ಭದಲ್ಲಿ ಉತ್ಪಾದಕತೆಯ ಮಟ್ಟವನ್ನು ಕಾಯ್ದುಕೊಳ್ಳುವುದರ ಜೊತೆಗೆ ದೇಶದ ಆರ್ಥಿಕತೆಯನ್ನು ಸುಸ್ಥಿತಿಯಲ್ಲಿಡುವುದರ ಬಗ್ಗೆ ಸಮಾಜ ವಿಜ್ಞಾನಗಳ ಸಂಶೋಧನೆಗಳು ಉತ್ತರ ಹುಡುಕಬೇಕಿದೆ. ಇಂತಹ ಮುನ್ನೋಟದ ಲಕ್ಷಣ ತೋರದಿದ್ದರೆ, ಮುಂಬರುವ ದಿನಗಳಲ್ಲಿ ಸಮಾಜ ವಿಜ್ಞಾನ ಅಧ್ಯಯನಗಳಿಗೆ ಅನುದಾನ ಯಾಕೆ ನೀಡಬೇಕೆಂದು ಸಾರ್ವಜನಿಕರು ಪ್ರಶ್ನಿಸಿದರೆ ಆಶ್ಚರ್ಯಪಡಬೇಕಿಲ್ಲ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ| ಬಿ. ಪಿ. ವೀರಭದ್ರಪ್ಪ, ಸಂಶೋಧನಾ ಚಟುವಟಿಕೆಗಳಲ್ಲಿ ವಿವಿಯ ವಿದ್ಯಾರ್ಥಿ ಮತ್ತು ಅಧ್ಯಾಪಕರು ಮುಂದಿದ್ದು, ಬೇಡಿಕೆಗನುಗುಣವಾಗಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ವಿಶೇಷವಾಗಿ ಸಮಾಜ ವಿಜ್ಞಾನಿಗಳ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರದ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.

ವಿವಿಯ ಕುಲಸಚಿವ ಪ್ರೊ| ಭೋಜ್ಯಾನಾಯ್ಕ, ಪ್ರೊ| ಜಾವಿದ್‌, ಪ್ರೊ| ಚಂದ್ರಶೇಖರ್‌, ಪ್ರೊ| ವೆಂಕಟೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.