ಇನ್ನು ತೆರಿಗೆ ಬೆದರಿಕೆ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್
ತೆರಿಗೆ ನೋಟಿಸ್ಗೆ ಹೊಸ ವ್ಯವಸ್ಥೆ; ಬೆದರಿಕೆಗೆ ತಡೆ
Team Udayavani, Aug 23, 2019, 6:30 PM IST
ಹೊಸದಿಲ್ಲಿ: ಕೇಂದ್ರ ಸರಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ನೀಡಲು ಸರಕಾರ ಮುಂದಾಗಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲಿ ತೆರಿಗೆ ನೋಟಿಸ್ಗಳನ್ನು ಕಳಿಸಲು ಕೇಂದ್ರೀಕೃತ, ಕಂಪ್ಯೂಟರೀಕೃತ ವ್ಯವಸ್ಥೆ ಜಾರಿಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೊಸ ವ್ಯವಸ್ಥೆಯಡಿಯಲ್ಲಿ ಆದಾಯ ತೆರಿಗೆ ಇಲಾಖೆಯ ಯಾವುದೇ ಅಧಿಕಾರಿ ಬೆದರಿಸಲು ಸಾಧ್ಯವಿಲ್ಲ. ಇದಕ್ಕಾಗಿ ನೋಟಿಸ್, ಸಮನ್ಸ್, ಪತ್ರಗಳನ್ನು ಕೇಂದ್ರೀಕೃತ ವ್ಯವಸ್ಥೆಯಿಂದ ಜಾರಿಮಾಡಲಾಗುವುದು. ಪ್ರತಿ ಪ್ರಕರಣಗಳಿಗೂ ವಿಶಿಷ್ಟ ಗುರುತಿನ ಸಂಖ್ಯೆಗಳು ಇರಲಿವೆ. ಜನರನ್ನು ಅಧಿಕಾರಿಗಳು ಶೋಷಣೆಗೊಳಪಡಿಸದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ತೆರಿಗೆ ಇಲಾಖೆಯಲ್ಲಿ ಈ ಹೊಸ ವ್ಯವಸ್ಥೆ ಅ.1ರಿಂದ ಜಾರಿಗೆ ಬರಲಿದೆ. ವಿಶಿಷ್ಟ ಗುರುತಿನ ಸಂಖ್ಯೆಯಿಲ್ಲದ ನೋಟಿಸ್ಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಹೇಳಿದರು. ಅಲ್ಲದೇ ಎಲ್ಲ ನೋಟಿಸ್ಗಳನ್ನು ಅಪ್ಲೋಡ್ ಮಾಡಲಾಗುವುದು. ನೋಟಿಸ್ಗಳಿಗೆ ಉತ್ತರಿಸಿದ 3 ತಿಂಗಳೊಳಗೆ ನೋಟಿಸ್ಗಳನ್ನು ವಾಪಸ್ ಪಡೆಯಲಾಗುವುದು ಎಂದು ಹೇಳಿದರು.