ಪ್ರೇಯಸಿಗಾಗಿ ಪತ್ನಿ ಕೊಂದವನ ಸೆರೆ


Team Udayavani, Aug 24, 2019, 3:08 AM IST

preyasi

ಬೆಂಗಳೂರು: ಪ್ರೇಯಸಿಯನ್ನು ಮದುವೆಯಾಗಲು ಅಡ್ಡಿಯಾಗಿದ್ದಳು ಎಂದು ಪತ್ನಿಯನ್ನು ಕೊಲೆ ಮಾಡಿ ಶಿಡ್ಲಘಟ್ಟ ಹೊರವಲಯದಲ್ಲಿ ಮೃತದೇಹ ಎಸೆದು ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಕಡೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮೇ 31ರಂದು ಮುಂಜಾನೆ ಏರ್‌ಪೋರ್ಟ್‌ ಸಮೀಪ ನಡೆದಿದ್ದ ಪೂಜಾ ಸಿಂಗ್‌ ಕೊಲೆ ಪ್ರಕರಣದ ಬೆನ್ನತ್ತಿದ್ದ ಬಾಗಲೂರು ಪೊಲೀಸರ ತನಿಖೆಯಲ್ಲೇ ಮತ್ತೂಂದು ಕೇಸ್‌ ಬಯಲಿಗೆ ಬಂದಿದೆ. ಜು.19ರಂದು ಪತ್ನಿ ಹಲೀಮಾಳನ್ನು ಕೊಂದು ಮೃತದೇಹ ಶಿಡ್ಲಘಟ್ಟದಲ್ಲಿ ಎಸೆದಿದ್ದ ಸಾಗರ್‌ ಶೇಖ್‌ ಹಾಗೂ ಸೋನು ಹಜ್ರಾ ಸಿಕ್ಕಿಬಿದ್ದಿದ್ದಾರೆ.

ಮೇ 31ರಂದು ವಿಮಾನ ನಿಲ್ದಾಣದ ಬಳಿ ಕೊಲೆಯಾದ ಮಹಿಳೆ ಪೂಜಾ ಸಿಂಗ್‌ ಎಂಬುದು ಇನ್ನೂ ಖಚಿತಪಟ್ಟಿರಲಿಲ್ಲ. ಹೀಗಾಗಿ, ಕೊಲೆಯಾದ ಮಹಿಳೆಯ ಗುರುತು ಪತ್ತೆಗೆ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಹೋಟೆಲ್‌ ಮ್ಯಾನೇಜರ್‌ ಒಬ್ಬ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಮಾಹಿತಿ ದೊರೆಯಿತು.

ಆ ಬಗ್ಗೆ ತನಿಖೆ ನಡೆಸುತ್ತಿದ್ದಾಗ ಎಚ್‌ಎಎಲ್‌ನಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಸಾಗರ್‌ ಶೇಖ್‌ (29) ಹಾಗೂ ಆತನ ಪ್ರೇಯಸಿ ಸೋನು ಹಜ್ರಾಳನ್ನು (21) ಸಿಕ್ಕಿಬಿದ್ದರು. ವಿಚಾರಣೆಯಲ್ಲಿ ಆರೋಪಿಗಳಿಬ್ಬರೂ ನಾವು ಯಾವುದೇ ಕೊಲೆ ಮಾಡಿಲ್ಲ ಎಂದೇ ಹೇಳುತ್ತಿದ್ದರು. ಅವರೇ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಪೂರಕ ಸಾಕ್ಷ್ಯಗಳು ಲಭ್ಯವಾಗುತ್ತಿರಲಿಲ್ಲ.

ಪೊಲೀಸರನ್ನೇ ಯಾಮಾರಿಸಿದ: ವಿಚಾರಣೆ ತೀವ್ರಗೊಳಿಸಿದ ಪೊಲೀಸರು, “ನೀನು ನಿನ್ನ ಪತ್ನಿಯನ್ನು ಕೊಲೆ ಮಾಡಿದ್ದೀರ ಎಂಬ ಬಗ್ಗೆ ನಮಗೆ ಮಾಹಿತಿ ಇದೆ. ಆಕೆ ಕೂಡ ಮನೆಯಲ್ಲಿಲ್ಲ. ಎಲ್ಲಿ ಹೋದಳು?’ ಎಂದು ವಿಚಾರಿಸಿದ್ದರು. ಆಗ, “ಪತ್ನಿ ಹಲೀಮಾ ಪಶ್ಚಿಮ ಬಂಗಾಳದಲ್ಲಿದ್ದಾಳೆ’ ಎಂದು ಆರೋಪಿ ಸುಳ್ಳು ಹೇಳಿದ್ದ.

ಜತೆಗೆ, ಪೊಲೀಸರ ಎದುರೇ ಸ್ನೇಹಿತೆ ಒಬ್ಬರಿಗೆ ವಿಡಿಯೋ ಕಾಲ್‌ ಮಾಡಿ, “ಇವಳೇ ನನ್ನ ಪತ್ನಿ’ ಎಂದು ಹೇಳಿದ್ದ. ವಿಡಿಯೋ ಕಾಲ್‌ನಲ್ಲಿದ್ದ ಮಹಿಳೆ ಕೂಡ ತಾನೇ ಆತನ ಪತ್ನಿ ಎಂದು ಹೇಳಿದ್ದಳು. ಆದರೆ, ಇಷ್ಟಕ್ಕೇ ಪೊಲೀಸರ ಅನುಮಾನ ಪರಿಹಾರವಾಗಿರಲಿಲ್ಲ.

ಹೀಗಾಗಿ ಆತನ ಪ್ರೇಯಸಿ ಸೋನುಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದಾಗ, ವಿಡಿಯೋ ಕಾಲ್‌ ಮಾಡಿದ್ದ ಮಹಿಳೆ ಆತನ ಪತ್ನಿಯಲ್ಲ ಎಂದು ಬಾಯ್ಬಿಟ್ಟಳು. ಇದೇ ಮಾಹಿತಿ ಆಧರಿಸಿ ಸಾಗರ್‌ನನ್ನು ವಿಚಾರಿಸಿದಾಗ ಜು.19ರಂದು ರಾತ್ರಿ ಪತ್ನಿ ಹಲೀಮಾಳನ್ನು ಕೊಲೆಗೈದು ಮೃತದೇಹವನ್ನು ಶಿಡ್ಲಘಟ್ಟ ಹೊರವಲಯದಲ್ಲಿ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ನಂದಿ ಬೆಟ್ಟದಲ್ಲಿ ಎಸೆಯಲು ಹೋಗಿದ್ದರು: ಸಾಗರ್‌, ಸದಾ ಸೋನು ಜತೆ ಇರುತ್ತಿದ್ದ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಹಲೀಮಾ, ಆತನೊಂದಿಗೆ ಜಗಳ ಮಾಡುತ್ತಿದ್ದಳು. ಹೀಗಾಗಿ, ಆಕೆಯನ್ನು ಕೊಲೆ ಮಾಡಿದರೆ ಸೋನುಳನ್ನು ಮದುವೆಯಾಗಲು ಸುಲಭವಾಗಲಿದೆ ಎಂದು ನಿರ್ಧರಿಸಿದ ಸಾಗರ್‌, ಜು.19ರಂದು ಎಚ್‌ಎಎಲ್‌ ನಿವಾಸದಲ್ಲಿ ಮಲಗಿದ್ದ ಹಲೀಮಾಳನ್ನು ಕತ್ತುಹಿಸುಕಿ ಕೊಲೆ ಮಾಡಿದ್ದ.

ಬಳಿಕ ಪ್ರೇಯಸಿ ಸೋನು ಜತೆ ಸೇರಿ ಮೃತದೇಹವನ್ನು ನಂದಿ ಬೆಟ್ಟದಲ್ಲಿ ಎಸೆದರೆ ಯಾರೂ ಹುಡುಕಾಡುವುದಿಲ್ಲ ಎಂದು ಲೆಕ್ಕಾಚಾರ ಹಾಕಿದ ಇಬ್ಬರೂ, ಕಾರಿನಲ್ಲಿ ಮೃತದೇಹ ಇರಿಸಿಕೊಂಡು ನಂದಿ ಬೆಟ್ಟಕ್ಕೆ ಹೋಗಿದ್ದರು. ಆದರೆ ಎಚ್‌.ಕ್ರಾಸ್‌ ಬಳಿ ದಾರಿ ತಪ್ಪಿ ಶಿಡ್ಲಘಟ್ಟ ಸಮೀಪದ ಗಂಭೀರನಹಳ್ಳಿ ಅರಣ್ಯಪ್ರದೇಶ ತಲುಪಿ, ಅಲ್ಲಿಯೇ ಹಲೀಮಾಳ ಶವ ಎಸೆದು ವಾಪಸ್‌ ಬಂದಿದ್ದರು.

ಕೆಲದಿನಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಆರೋಪಿಗಳ ಹೇಳಿಕೆ ದಾಖಲಿಸಿಕೊಂಡು ಶಿಡ್ಲಘಟ್ಟ ಪೊಲೀಸರಿಗೆ ಇಬ್ಬರೂ ಆರೋಪಿಗಳನ್ನು ಒಪ್ಪಿಸಲಾಯಿತು ಎಂದು ಅಧಿಕಾರಿ ವಿವರಿಸಿದರು. ಸಾಗರ್‌ ಶೇಖ್‌ ಹಾಗೂ ಸೋನುಳ ವಿಚಾರಣೆ ನಡೆಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಶಿಡ್ಲಘಟ್ಟ ಪೊಲೀಸರು ತಿಳಿಸಿದರು.

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.