ಸುರಪುರ ತಹಶೀಲ್ದಾರ್ ಕಚೇರಿಯಲ್ಲಿ ಕೃಷ್ಣ ಜಯಂತಿ
Team Udayavani, Aug 24, 2019, 11:51 AM IST
ಸುರಪುರ: ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಿಸಲಾಯಿತು.
ಸುರಪುರ: ಸೃಷ್ಟಿಯಲ್ಲಿ ನಡೆಯುವ ಪ್ರತಿಯೊಂದು ಕ್ರಿಯೆಗೂ ಶ್ರೀ ಕೃಷ್ಣನೆ ಕಾರಣ. ಆತನ ಕೃಪ ಕಟಾಕ್ಷೆ ಇಲ್ಲದೆ ಹುಲ್ಲುಕಡ್ಡಿ ಕೂಡ ಅಲುಗಾಡುವುದಿಲ್ಲ ಎಂದು ತಹಶೀಲ್ದಾರ್ ಸುರೇಶ ಅಂಕಲಗಿ ಹೇಳಿದರು.
ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತ ಏರ್ಪಡಿಸಿದ್ದ ಶ್ರೀ ಕೃಷ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಅಧರ್ಮ ಹೆಚ್ಚಾದಾಗ ಧರೆಗಿಳಿದು ಬಂದು ಧರ್ಮ ರಕ್ಷಿಸುತ್ತೇನೆ ಎಂಬ ಶ್ರೀ ಕೃಷ್ಣನ ಮಾತು ಇಂದು ಸತ್ಯವಾಗಿದೆ. ಕಳೆದ ಕೆಲ ದಿನಗಳ ಹಿಂದೆ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಯಾಗಿತ್ತು. ಜಲಾಶಯದಿಂದ ದಾಖಲೆ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಯಿತು. ಜೀವಹಾನಿಯಂತ ಯಾವುದೇ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ರಕ್ಷಿಸಿರುವುದು ಕೃಷ್ಣ ಪರಮಾತ್ಮ ಎಂದರು.
ಯಾದವ ಸಮಾಜದ ರಾಜ್ಯ ಉಪಾಧ್ಯಕ್ಷ ವಿಠuಲ ಯಾದವ ಮಾತನಾಡಿ, ಶ್ರೀ ಕೃಷ್ಣನ ಸಂದೇಶಗಳನ್ನು ಪ್ರತಿಯೊಬ್ಬರು ಅಳವಡಿಸಿ ಕೊಂಳ್ಳಬೇಕೆಂದರು.
ನರಸಿಂಹ ಕುಲಕರ್ಣಿ ಮಾತನಾಡಿ, ಭಗವದ್ಗೀತೆ ವಿಶ್ವದ ಇತರೆ ಧರ್ಮ ಗ್ರಂಥಗಳಿಗಿಂತ ಉತ್ಕೃಷ್ಟವಾಗಿದೆ. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಪ್ರತಿ ಧರ್ಮಕ್ಕೂ ಧರ್ಮ ಗ್ರಂಥಗಳಿವೆ. ಕರ್ಮ ಯೋಗ, ಭಕ್ತಿ ಯೋಗ, ಜ್ಞಾನ ಯೋಗ, ಸಾಂಖ್ಯೆ ಯೋಗ ಸೇರಿದಂತ 12 ಅಧ್ಯಾಯಗಳ ಮೂಲಕ ಮಾನವ ಕಲ್ಯಾಣ ಬಯಸಿ ಶ್ರೀ ಕೃಷ್ಣ ಭೋದಿಸಿರುವ ಸಂದೇಶ ಜಗತ್ತಿಗೆ ಆದರ್ಶವಾಗಿದೆ. ಎಲ್ಲಾ ಧರ್ಮಗಳ ಸಾರ ಹೊಂದಿರುವ ಭಗವದ್ಗೀತೆಯನ್ನು ಪವಿತ್ರ ಗ್ರಂಥ ಎಂದು ಸ್ವೀಕರಿಸಿರುವುದು ಭಾರತೀಯರಾದ ನಮ್ಮೆಲ್ಲರ ಸೌಭಾಗ್ಯ ಎಂದರು. ಗ್ರೇಡ್-2 ತಹಶೀಲ್ದಾರ್ ಸೊಫೀಯಾ ಸುಲ್ತಾನ್, ಖಜಾನೆ ಅಧಿಕಾರಿ ಮಂಗಲಕುಮಾರ ಗುಡುಗುಂಟಿ. ರಂಗಣ್ಣ, ಕೊಂಡಲ ನಾಯಕ, ಪ್ರಮುಖರಾದ ವೀರುಪಾಕ್ಷಿ ಕೋನಾಳ, ಶಿವುರಾಜ ನಾಯಕ ಇತರರಿದ್ದರು. ರವಿ ನಾಯಕ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ