ಕೊಣ್ಣೂರು ಸಂತ್ರಸ್ತರಿಗೆ ಭವಿಷ್ಯದ್ದೇ ಚಿಂತೆ


Team Udayavani, Aug 24, 2019, 4:16 PM IST

24-April-30

ಗದಗ: ಮಲಪ್ರಭಾ ನದಿ ಉಕ್ಕಿ ಹರಿದಿದ್ದರಿಂದ ಕೊಣ್ಣೂರು ಗ್ರಾಮದಲ್ಲಿ ಕುಸಿದ ಮನೆಗಳು.

ಗದಗ: ನೆರೆ ಬಂತು-ಹೋಯ್ತು.. ಜನರು ಕೊಟ್ಟ ಪರಿಹಾರವೂ ಖರ್ಚಾಗ್ತಿದೆ.. ಮುಂದೇನು ಅನ್ನೋದೇ ತಿಳಿವಲ್ದರೀ..

ಇದು ಮಲಪ್ರಭಾ ರೌದ್ರಾವತಾರ ತಾಳಿದ ಪರಿಣಾಮ ಭೀಕರ ಪ್ರವಾಹದಿಂದ ನಲುಗಿದ ನೂರಾರು ನೆರೆ ಸಂತ್ರಸ್ತರ ಮಾತಾಗಿದೆ.

ಮಲಪ್ರಭಾ ನದಿ ಪಾತ್ರದಲ್ಲಿರುವ ಕೊಣ್ಣೂರು, ವಾಸನ ಹಾಗೂ ಬೂದಿಹಾಳ ಸೇರಿದಂತೆ ಸುಮಾರು 8 ಗ್ರಾಮಗಳು ಅಕ್ಷರಶಃ ಪ್ರವಾಹಕ್ಕೆ ನಲುಗಿ ಹೋಗಿವೆ. ಈ ಪೈಕಿ ಕೊಣ್ಣೂರು ಗ್ರಾ.ಪಂ. ವ್ಯಾಪ್ತಿಯ ಕೊಣ್ಣೂರ ಹಾಗೂ ಬೂದಿಹಾಳ ಗ್ರಾಮಗಳು ಇಡೀ ಇತಿಹಾಸದಲ್ಲೇ ಕಂಡು ಕೇಳರಿಯದಂತ ಪ್ರವಾಹದ ಅಲೆಗಳಿಗೆ ಬಹುತೇಕ ಮನೆಗಳು ಕೊಚ್ಚಿ ಹೋಗಿದ್ದರೆ, ಕೃಷಿ ಭೂಮಿಯಲ್ಲಿ ಬೆಳೆಗಳು ನಾಮಾವಶೇಷ ಇಲ್ಲದಂತಾಗಿದೆ.

ಕೊಣ್ಣೂರು ಗ್ರಾಮದಲ್ಲಿ ಸುಮಾರು 9900 ಜನಸಂಖ್ಯೆಯಿದ್ದು, 3,500 ಮನೆಗಳಿವೆ. ಆ. 8ರಂದು ಮಲಪ್ರಭೆ ನದಿ ಪಾತ್ರದಲ್ಲಿ ಉಂಟಾದ ಸುನಾಮಿಯಂತ ಅಲೆಗಳಿಗೆ ಕೊಣ್ಣೂರು ಗ್ರಾಮದ 150ರಿಂದ 200 ಮನೆಗಳು ನೆಲಕಚ್ಚಿವೆ. ನೂರಾರು ಕುಟುಂಬಗಳನ್ನು ಬೀದಿಗೆ ಬಂದಿವೆ.

ಪ್ರವಾಹದಿಂದ ಪ್ರಾಣಾಪಾಯವನ್ನು ತಪ್ಪಿಸಿಕೊಂಡಿರುವ ನೆರೆ ಸಂತ್ರಸ್ತರು ಇಲ್ಲಿನ ಕೊಣ್ಣೂರು ಎಪಿಎಂಸಿ ಯಾರ್ಡ್‌ ಆವರಣದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಮನೆಯಿಂದ ತಂದಿರುವ ತಾಟಪಾಲ್, ಸಿಮೆಂಟ್ ಹಾಗೂ ಗೊಬ್ಬರದ ಚೀಲಗಳನ್ನು ಜೋಡಿಸಿ ಹೊಲಿದುಕೊಂಡು ಟೆಂಟ್‌ಗಳನ್ನು ನಿರ್ಮಿಸಿಕೊಂಡು ಆಶ್ರಯ ಕಂಡುಕೊಂಡಿದ್ದಾರೆ. ಎಪಿಎಂಸಿಯಲ್ಲಿರುವ ಪರಿಹಾರ ಕೇಂದ್ರದಲ್ಲಿ ತೊಟ್ಟೆತುಂಬಿಸಿಕೊಳ್ಳುತ್ತಿರುವ ಸಂತ್ರಸ್ತರಿಗೆ ದಿನವಿಡೀ ಮುಂದೇನು ಎಂಬುದೇ ದೊಡ್ಡ ಸವಾಲಾಗಿ ಕಾಡುತ್ತಿದೆ.

ಗ್ರಾಮ ಮುಳುಗಡೆಯಾಗಿ ಪ್ರವಾಹದ ನೀರಿನೊಂದಿಗೆ ಮನೆಯಲ್ಲಿದ್ದ ಕಾಳು- ಕಡಿ ಬರಿದಾಗಿದೆ. ನೆರೆ ಹೋಗುವಾಗ ನೂರಾರು ಮನೆಗಳನ್ನು ನೆಲಕ್ಕುರುಳಿಸಿರುವುದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ.

ಸ್ಥಳಾಂತರಕ್ಕೆ ಒಮ್ಮತದ ಕೊರತೆ: ಕೊಣ್ಣೂರು ಗ್ರಾಮ ಮಲಪ್ರಭಾ ಪ್ರವಾಹಕ್ಕೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2007, 2009ರಲ್ಲಿ ಗ್ರಾಮಸ್ಥರಿಗೆ ಪ್ರವಾಹದ ಕಹಿ ಅನುಭವವಿದೆ. ಆಗ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಆದರೂ, ಗ್ರಾಮ ಸ್ಥಳಾಂತರಿಸಬೇಕು. ನವ ಗ್ರಾಮವನ್ನಾಗಿಸಲು ಸರಕಾರ ಈ ಹಿಂದೆ ನಡೆಸಿದ ಪ್ರಯತ್ನಗಳು ಫಲಿಸಿಲ್ಲ. ಹೀಗಾಗಿ ನದಿ ನೀರಿನ ಪ್ರಮಾಣ ಇಳಿಯುತ್ತಿದ್ದಂತೆ ಮತ್ತೆ ತಮ್ಮ ಗೂಡು ಸೇರಿಕೊಳ್ಳುತ್ತಿದ್ದರು. ಆದರೆ, ನವಿಲುತೀರ್ಥ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್‌ ನೀರು ಹರಿಸಿದ್ದರಿಂದ ಅಕ್ಷರಶಃ ಕೊಣ್ಣೂರು ಗ್ರಾಮ ಜಲ ದಿಗ್ಬಂಧನಕ್ಕೆ ಸಿಲುಕಿತ್ತು. ಆ. 8ರಂದು ಬೆಳಗ್ಗೆ ಮನೆಯ ಬಾಗಿಲಿಗೇ ನುಗ್ಗಿದ್ದ ನೀರು, ಸಂಜೆ ವೇಳೆಗೆ ಒಂದು ಆಳೆತ್ತರಕ್ಕೆ ಬಂದು ತಲುಪಿತ್ತು. ಮೂರು ದಿನಗಳು ಕಾಲ ಗ್ರಾಮ ನೀರಿನಲ್ಲೇ ಮುಳುಗಿದ್ದರಿಂದ ನೂರಾರು ಮನೆಗಳು ನೆಲಕ್ಕುರುಳಿವೆ. ಹಲವು ಮನೆಗಳು ಮುಟ್ಟಿದರೆ ಬೀಳುವ ಸ್ಥಿತಿಯಲ್ಲಿವೆ. ಇವತ್ತಲ್ಲಾ ನಾಳೆ ಮತ್ತೆ ಪ್ರವಾಹ ಬಾರದೇ ಇರದು. ಹೀಗಾಗಿ ತಮೆಗೆ ಸುರಕ್ಷಿತ ಪ್ರದೇಶದಲ್ಲಿ ಶಾಶ್ವತ ಸೂರು ಕಲ್ಪಿಸಬೇಕು ಎಂಬುದು ನೆರೆ ಸಂತ್ರಸ್ತರ ಒತ್ತಾಯ.

ಆದರೆ, ಗ್ರಾಮದ ಮಧ್ಯೆ ಭಾಗದಲ್ಲಿರುವ ಹಾಗೂ ಗಟ್ಟಿಮುಟ್ಟಾದ ಮನೆಗಳು ಪ್ರವಾಹಕ್ಕೆ ಅಲುಗಾಡಿಲ್ಲ. ಹೀಗಾಗಿ ಪುನರ್ವಸತಿ ಮಾತಿಗೆ ಸ್ಥಿತಿವಂತರ ಬೆಂಬಲ ದೊರಕುತ್ತಿಲ್ಲ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ಮನೆಗಳನ್ನು ಕಟ್ಟಿಸಿಕೊಂಡಿದ್ದಾರೆ. ಸ್ಥಳಾಂತರಕ್ಕೆ ತಲೆದೂಗಿದರೆ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕ ಅವರದ್ದು. ಸ್ಥಳಾಂತರದ ಬಗ್ಗೆ ಸಾರ್ವಜನಿಕರ ಮಧ್ಯೆಯೇ ಚರ್ಚೆಗಳು ನಡೆಯುತ್ತಿವೆಯೇ ಹೊರತು ಯಾರೊಬ್ಬರೂ ಅರ್ಜಿ ಸಲ್ಲಿಸಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.