ಪಕ್ಷ ಸಂಘಟನೆಗೆ ಒತ್ತು
Team Udayavani, Aug 25, 2019, 3:03 AM IST
ಹೊಳೆನರಸೀಪುರ: “ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ನಾನು ಮಾನಸಿಕವಾಗಿ ಕುಗ್ಗಿಲ್ಲ. ಬದಲಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುತ್ತಿ ದ್ದೇನೆ’ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ. ಶ್ರಾವಣ ಮಾಸದ ಕೊನೆಯ ಶನಿವಾರ ನಿಮಿತ್ತ ಹೊಳೆನರಸೀ ಪುರದ ಹಳೇಕೋಟೆ ಬೆಟ್ಟದ ರಂಗನಾಥನ ದರ್ಶನ ಪಡೆದ ಬಳಿಕ, ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
“ನಾನು ಕಳೆದ ಮೂರು ವರ್ಷಗಳ ಹಿಂದೆಯೇ ಲೋಕಸಭೆಗೆ ಸ್ಪರ್ಧಿಸುವು ದಿಲ್ಲ ಎಂದು ಹೇಳಿದ್ದೆ. ಆದರೆ, 2019ರ ಲೋಕಸಭಾ ಚುನಾ ವಣೆಯಲ್ಲಿ ಪರಿಸ್ಥಿತಿಯ ಒತ್ತಡದಿಂದಾಗಿ ತುಮಕೂರು ಕ್ಷೇತ್ರ ದಲ್ಲಿ ಸ್ಪರ್ಧಿಸಬೇಕಾಗಿ ಬಂತು. ಚುನಾವಣೆ ನನಗೆ ಅಪಾರ ಅನುಭವ ತಂದುಕೊಟ್ಟಿತು’ ಎಂದರು.
“ನನ್ನನ್ನು, ನನ್ನ ಕುಟುಂ ಬವನ್ನು ರಾಜಕೀಯವಾಗಿ ಮುಗಿಸುವುದಾಗಿ ಹೇಳಿದ ಬಹ ಳಷ್ಟು ಮಂದಿ ಬಂದು ಹೋಗಿದ್ದಾರೆ. ಅದಕ್ಕೆ ಹೆದರಲ್ಲ. ಕಳೆದ 15 ದಿನಗಳಿಂದ ನಾನು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡುತ್ತಿದ್ದು, ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸ ಆರಂಭಿಸಿದ್ದೇನೆ. ಪಕ್ಷವನ್ನು ಸದೃಢವಾಗಿ ಕಟ್ಟುವುದು ನನ್ನ ಉದ್ದೇಶ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
MUST WATCH
ಹೊಸ ಸೇರ್ಪಡೆ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ