ತಲಾಖ್‌ ವಿರೋಧಿಸಿ ಪತಿ ವಿರುದ್ಧ ಪತ್ನಿ ದೂರು


Team Udayavani, Aug 25, 2019, 3:00 AM IST

Udayavani Kannada Newspaper

ಬೆಳಗಾವಿ: ದೇಶದಲ್ಲಿ ತ್ರಿವಳಿ ತಲಾಖ್‌ ನಿಷೇಧ ಕಾಯ್ದೆ ಜಾರಿಯಾಗುತ್ತಿದ್ದಂತೆ ಸವದತ್ತಿಯಲ್ಲಿ ತಲಾಖ್‌ ನೀಡಿದ ಪತಿಯ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ಬೀಬಿ ಆಯೀಶಾ, ತನ್ನ ಪತಿ ಇಸ್ಮಾಯಿಲ್‌ ಖಾನ್‌ ಕಾನೂನು ಬಾಹಿರವಾಗಿ ತನಗೆ ವಿವಾಹ ವಿಚ್ಛೇದನ ನೀಡಿದ್ದಾರೆ. ಪತಿ ಹಾಗೂ ಇತರರ ವಿರುದ್ಧ ತ್ರಿವಳಿ ತಲಾಖ್‌ ನಿಷೇಧ ಕಾಯ್ದೆಯ ಕಲಂ 4ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸವದತ್ತಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

2017ರಲ್ಲಿ ಇಸ್ಮಾಯಿಲ್‌ ಖಾನ್‌ ಜೊತೆ ವಿವಾಹವಾಗಿದೆ. ಗೋವಾದಲ್ಲಿ ನೆಲೆಸಿದ್ದಾಗ 10 ತಿಂಗಳ ಹಿಂದೆ ನಿನಗೆ ಕಾಯಿಲೆ ಇದೆ, ತವರಿಗೆ ಹೋಗಿ ತೋರಿಸಿಕೊಂಡು ಬಾ ಎಂದು ನನ್ನನ್ನು ಕಳುಹಿಸಿದ್ದ. ತವರು ಮನೆಯಲ್ಲಿ ಉಳಿದು ಕೊಂಡಿದ್ದ ನಾನು ಹಲವು ವೈದ್ಯರಿಗೆ ತೋರಿಸಿ, ತಪಾಸಣೆ ಮಾಡಿಸಿಕೊಂಡಿದ್ದೆ. ಆದರೆ, ಯಾವುದೇ ಕಾಯಿಲೆ ಇಲ್ಲ ಎಂಬುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.

ಬಳಿಕ, ನನಗೆ ಯಾವುದೇ ಕಾಯಿಲೆ ಇಲ್ಲ. ಹೀಗಾಗಿ, ಗೋವಾಕ್ಕೆ ಕರೆದುಕೊಂಡು ಹೋಗುವಂತೆ ನನ್ನ ತಂದೆ-ತಾಯಿ, ಹಿರಿಯರೆಲ್ಲರೂ ಪತಿ ಇಸ್ಮಾಯಿಲ್‌ಗೆ ಹೇಳಿದ್ದಾರೆ. ಆದರೆ, ಇದಕ್ಕೆ ಒಪ್ಪದ ಪತಿ, ನನಗೆ ಕಾಯಿಲೆ ಇದೆ. ಆದ್ದರಿಂದ ವಿಚ್ಛೇದನ ನೀಡುವುದಾಗಿ ಹೇಳಿ ನನ್ನನ್ನು ಗೋವಾಕ್ಕೆ ಕರೆಸಿಕೊಂಡಿಲ್ಲ. ಈ ಮಧ್ಯೆ, 2019ರ ಫೆ.22ರಂದು ಅಂಚೆ ಮೂಲಕ ಪತಿ ಇಸ್ಮಾಯಿಲ್‌, ತಲಾಖ್‌-ಎ-ಬಿನ್‌ ಕಳುಹಿಸಿದ್ದಾರೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ವೈವಾಹಿಕ ಜೀವನ ಸರಿಯಾಗಿ ನಡೆಯುತ್ತಿಲ್ಲ. ದಾಂಪತ್ಯದಲ್ಲಿ ಹೊಂದಾಣಿಕೆ ಇಲ್ಲವಾಗಿದೆ ಎಂದು ಹೇಳಿ ಇಸ್ಮಾಯಿಲ್‌ ತನ್ನ ಪತ್ನಿ ಬೀಬಿ ಆಯೀಶಾಗೆ ತಲಾಖ್‌ ನೀಡಿದ್ದಾರೆ. 17,786 ಮೊತ್ತದ ಡಿ.ಡಿ. ಕಳುಹಿಸಿ ತಲಾಖ್‌ ನೀಡಿದ್ದಾರೆ. ಕಾನೂನು ಬಾಹಿರವಾಗಿ ತಲಾಖ್‌ ನೀಡುವ ಮೂಲಕ ನನಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ, ನ್ಯಾಯ ಒದಗಿಸಿಕೊಡಿ ಎಂದು ಪತ್ನಿ ದೂರು ನೀಡಿದ್ದಾರೆ.

ಯಕ್ಕುಂಡಿಯ ಬೀಬಿ ಆಯೀಶಾಳನ್ನು ಇಸ್ಮಾ ಯಿಲ್‌ ಖಾನ್‌ನೊಂದಿಗೆ ವಿವಾಹ ಮಾಡಿಕೊಡ ಲಾಗಿತ್ತು. 10 ತಿಂಗಳ ಹಿಂದೆ ಕಾಯಿಲೆ ಇರುವುದಾಗಿ ಹೇಳಿ ಪತ್ನಿಗೆ ಅಂಚೆ ಮೂಲಕ ತಲಾಖ್‌ ನೀಡಿರುವ ಬಗ್ಗೆ ಸವದತ್ತಿ ಠಾಣೆಯಲ್ಲಿ ಶುಕ್ರವಾರ ರಾತ್ರಿ ದೂರು ದಾಖಲಾಗಿದೆ. ಪ್ರಕರಣ ಕುರಿತು ತನಿಖೆ ನಡೆದಿದ್ದು, ಪತಿಯನ್ನು ಕರೆ ತಂದು ವಿಚಾರಣೆ ನಡೆಸಲಾಗುವುದು.
-ಲಕ್ಷ್ಮಣ ನಿಂಬರಗಿ, ಎಸ್‌ಪಿ, ಬೆಳಗಾವಿ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.