ಉಡುಪಿಯಲ್ಲಿ ಸಂಭ್ರಮದ ವಿಟ್ಲಪಿಂಡಿ


Team Udayavani, Aug 25, 2019, 3:05 AM IST

udupiyalli

ಉಡುಪಿ: ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಶ್ರೀಕೃಷ್ಣ ಮಠದಲ್ಲಿ ವೈಭವದಿಂದ ಸಂಪನ್ನಗೊಂಡಿತು. ಅಷ್ಟಮಿ ದಿನ ನಿರ್ಜಲ ಉಪವಾಸವಿರುವ ಕಾರಣ ಶನಿವಾರ ದ್ವಾದಶಿಯಂತೆ ಮುಂಜಾವು ಶ್ರೀಕೃಷ್ಣ-ಮುಖ್ಯ ಪ್ರಾಣರಿಗೆ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ಗೋಪಾಲಕೃಷ್ಣನ ಅಲಂಕಾರ ನಡೆಸಿದರು. ಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ ರಥಬೀದಿಯಲ್ಲಿ ವೈಭವದ ವಿಟ್ಲಪಿಂಡಿ ಮೆರವಣಿಗೆ ನಡೆಯಿತು.

ಮೂರು ವಿಗ್ರಹಗಳ ಉತ್ಸವ: ಚಿನ್ನದ ರಥದಲ್ಲಿ ಮಣ್ಣಿನಿಂದ ತಯಾರಿಸಿದ ಶ್ರೀಕೃಷ್ಣನ ಮೂರ್ತಿ, ನವರತ್ನ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳ ಉತ್ಸವ ನಡೆಯಿತು. ಉತ್ಸವದಲ್ಲಿ ಪರ್ಯಾಯ ಪಲಿಮಾರು, ಕೃಷ್ಣಾಪುರ, ಅದಮಾರು ಕಿರಿಯ, ಪಲಿಮಾರು ಕಿರಿಯ ಶ್ರೀಪಾದರು ಪಾಲ್ಗೊಂಡಿದ್ದರು.

ನೆಟ್ಟ ಗುರ್ಜಿಗಳಲ್ಲಿ ತೂಗು ಹಾಕಿದ ಒಂದೊಂದೇ ಮಡಕೆಗಳನ್ನು ಸಾಂಪ್ರದಾಯಿಕ ಗೊಲ್ಲರ ವೇಷ ಧರಿಸಿದವರು ಒಡೆಯುತ್ತ ಸಾಗಿದರು. ಅಲಂಕೃತ ಆನೆ ಸುಭದ್ರೆ ಮೆರವಣಿಗೆಗೆ ಶೋಭೆ ನೀಡಿತು. ಮುಂಬೈನಿಂದ ಬಂದ ಅಲಾರೆ ತಂಡದವರು ಮಾನವ ಪಿರಮಿಡ್‌ ಮೂಲಕ ಮೊಸರು ಕುಡಿಕೆಗಳನ್ನು ಒಡೆದರು. ಕೊನೆಯಲ್ಲಿ ಶ್ರೀಕೃಷ್ಣನ ಮಣ್ಣಿನ ಮೂರ್ತಿಯನ್ನು ಮಧ್ವಸರೋವರದಲ್ಲಿ ವಿಸರ್ಜಿಸಲಾಯಿತು. ಉತ್ಸವ ನಡೆಯುವಾಗ ಪ್ರಸಾದ ಎಸೆಯುವ ಕ್ರಮವನ್ನು ಕೇವಲ ಸಾಂಕೇತಿಕವಾಗಿ ಹಣ್ಣುಗಳಿಗೆ ಮಾತ್ರ ಸೀಮಿತವಾಗಿಡಲಾಯಿತು.

ಹುಟ್ಟಿದ ಹೊತ್ತಿಗೆ ಮಳೆ: ಶ್ರೀಕೃಷ್ಣನ ಜನಿಸಿದ್ದು ಅಷ್ಟಮಿಯ ಮಧ್ಯರಾತ್ರಿ ಚಂದ್ರೋದಯದ ಹೊತ್ತಿಗೆ. ಆಗ ಮಳೆ ಬರುತ್ತಿತ್ತು. ಶುಕ್ರವಾರ ಮಧ್ಯರಾತ್ರಿ ಶ್ರೀಕೃಷ್ಣ ಮಠದಲ್ಲಿ ಮಹಾಪೂಜೆ, ಅರ್ಘ್ಯಪ್ರದಾನ ನಡೆಯುವಾಗಲೂ ಮಳೆ ಬರುತ್ತಿತ್ತು. ಶನಿವಾರ ಮಧ್ಯಾಹ್ನ ಮಳೆ ಬಂದಿದ್ದರೂ ಅಪರಾಹ್ನ ವಿಟ್ಲಪಿಂಡಿ ಉತ್ಸವ ನಡೆಯುವಾಗ ಮಳೆ ವಿರಾಮ ಹಾಡಿತ್ತು.

ಅತಿವೃಷ್ಟಿ ಪೀಡಿತರಿಗೆ ನಿಧಿ ಸಂಗ್ರಹಿಸಿದ ವೇಷಧಾರಿ ಗಾಂಧಿ!: ಈ ಬಾರಿ ಗಾಂಧೀಜಿ ವೇಷ ತೊಟ್ಟ ಉತ್ತರ ಕರ್ನಾಟಕದ ಐಹೊಳೆ ಮೂಲದ ಹನುಮಂತ ಅವರು ಕನಕದಾಸರ ಗುಡಿ ಎದುರು ಬಹಳ ಹೊತ್ತು ನಿಂತು ಜನರನ್ನು ದಂಗುಬಡಿಸಿದರು. 85 ವರ್ಷಗಳ ಹಿಂದೆ 1934ರ ಫೆ.25ರಂದು ಗಾಂಧೀಜಿಯವರು ಉಡುಪಿ ಅಜ್ಜರಕಾಡಿನಿಂದ ಕಲ್ಸಂಕಕ್ಕೆ ಇದೇ ರಥಬೀದಿ ಮಾರ್ಗ ವಾಗಿ ಕುಂದಾಪುರಕ್ಕೆ ತೆರಳಿದ್ದರು. ಅವರು ದಲಿತೋ ದ್ಧಾರಕ್ಕಾಗಿ ನಿಧಿ ಸಂಗ್ರಹಿಸಲು ಬಂದಿದ್ದರೆ, ವೇಷಧಾರಿ ಗಾಂಧಿ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಸಂತ್ರ ಸ್ತರಾದವರಿಗೆ ನೆರವಾಗಲು ನಿಧಿ ಸಂಗ್ರಹಿಸಿದ್ದು ವಿಶೇಷ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.