ಸ್ಫೋಟಕ ವಸ್ತು, ಅಪರಾಧಿಗಳ ಪತ್ತೆ ಹಚ್ಚುತ್ತಿದ್ದ ‘ನೈನಾ’ ಇನ್ನಿಲ್ಲ


Team Udayavani, Aug 25, 2019, 10:41 AM IST

Untitled-10

ಬೆಳಗಾವಿ: ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಶ್ವಾನಕ್ಕೆ ನಗರ ಪೊಲೀಸ್‌ ಆಯುಕ್ತರು ಗೌರವ ವಂದನೆ ಸಲ್ಲಿಸಿದರು.

ಬೆಳಗಾವಿ: ಸ್ಫೋಟಕ ವಸ್ತುಗಳ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚಲು ಸುಮಾರು ಎಂಟು ವರ್ಷಗಳಿಂದ ಬೆಳಗಾವಿ ನಗರ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನೈನಾ ಎಂಬ ಶ್ವಾನ ಹೃದಯಾಘಾತದಿಂದ ಶನಿವಾರ ಬೆಳಗಿನ ಜಾವ ಮೃತಪಟ್ಟಿದೆ.

ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ನೈನಾಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಹೋದ ವರ್ಷ ನೈನಾ ಸೇವೆಯಿಂದ ನಿವೃತ್ತಿಯಾಗಿದ್ದಳು. ಮಹಾನಗರ ಪೊಲೀಸ್‌ ಆಯುಕ್ತರ ಮನೆಯಲ್ಲಿಯೇ ನೈನಾ ವಾಸವಾಗಿದ್ದಳು. ನೈನಾಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಕಮೀಷನರ್‌ ಲೋಕೇಶಕುಮಾರ ಅವರು ದುಃಖೀತರಾಗಿದ್ದಾರೆ.

ಲ್ಯಾಬ್ರಡರ್‌ ರಿಟ್ರೀವರ್‌ ಎಂಬ ತಳಿಯ ನೈನಾ 2009ರ ಅಕ್ಟೋಬರ್‌ 21ರಂದು ಜನಿಸಿದ್ದು, ಬೆಂಗಳೂರಿನ ರಾಜ್ಯ ಪೊಲೀಸ್‌ ಶ್ವಾನ ದಳ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದಿದ್ದಳು. ಸ್ಫೋಟಕ ಪತ್ತೆ ಹಚ್ಚುವಲ್ಲಿ ನೈನಾ ಪ್ರಮುಖ ಪಾತ್ರ ವಹಿಸಿದ್ದಳು. ಬೆಳಗಾವಿ ಜಿಲ್ಲಾ ಪೊಲೀಸ್‌ ಘಟಕಕ್ಕೆ ನೇಮಕಗೊಂಡ ನೈನಾ ಜಿಲ್ಲೆಯ ಅಣೆಕಟ್ಟುಗಳು, ವಿಐಪಿ, ವಿವಿಐಪಿ ಭೇಟಿ ವೇಳೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದಳು. 2014ರಲ್ಲಿ ಪೊಲೀಸ್‌ ಕಮೀಷನರೇಟ್ ಸ್ಥಾಪನೆಯಾದಾಗ ನಗರಕ್ಕೆ ಆಕೆಯ ವರ್ಗಾವಣೆ ಆಯಿತು.

ನಗರ ವ್ಯಾಪ್ತಿಯ ವಿಮಾನ ನಿಲ್ದಾಣ, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್ಗಳು, ಮಂದಿರ, ಮಸೀದಿ, ಜನನಿಬಿಡ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚುವಲ್ಲಿ ನೈನಾ ಪ್ರಮುಖ ಪಾತ್ರ ವಹಿಸಿದ್ದಳು. 2016 ಮೇ 11ರಂದು ದೇಸೂರ ರೈಲ್ವೆ ನಿಲ್ದಾಣದಲ್ಲಿ ಅಜ್ಮೇರ್‌ ಎಕ್ಸಪ್ರಸ್‌ ರೈಲಿನಲ್ಲಿ ಸ್ಫೋಟಕ ವಸ್ತುಗಳಿರುವ ಬಗ್ಗೆ ಮಾಹಿತಿ ಬಂದಾಗ ಕೂಡಲೇ ಐದನೇ ಬೋಗಿಯಲ್ಲಿದ್ದ ಭಾರತೀಯ ಸೇನೆಗೆ ಸೇರಿದ್ದ ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚುವಲ್ಲಿ ನೈನಾ ಯಶಸ್ವಿಯಾಗಿದ್ದಳು.

2017ರಲ್ಲಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ವೇಳೆ ಅಹಿತಕರ ಘಟನೆ ನಡೆಯದಂತೆ ನೈನಾ ಕರ್ತವ್ಯ ನಿರ್ವಹಿಸಿದ್ದಳು. ಅತ್ಯಂತ ಶಾಂತ ಸ್ವಭಾವದ ನೈನಾಗೆ ಚಾಣಾಕ್ಷತೆ ಇತ್ತು. ಅನಾರೋಗ್ಯದಿಂದಾಗಿ ನೈನಾಳನ್ನು 2018 ಮಾರ್ಚ್‌ 1ರಂದು ನಿವೃತ್ತಿಗೊಳಿಸಲಾಗಿತ್ತು. ಶ್ವಾನ ದಳದ ಶ್ವಾನ ಪಾಲಕರಾದ ಐ.ಎಸ್‌. ಮಳಗಲಿ ಅವರ ವಿನಂತಿ ಮೇರೆಗೆ ಆಗಿನ ಕಮೀಷನರ್‌ ಡಾ| ಡಿ.ಸಿ. ರಾಜಪ್ಪ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ನೈನಾಳನ್ನು ಸಾಕಿದರು. ಸ್ವಂತ ಖರ್ಚಿನಲ್ಲಿಯೇ ನೈನಾಳ ಆರೈಕೆ ಮಾಡುತ್ತಿದ್ದರು. ಬಳಿಕ ಕಮಿಷನರ್‌ ಆಗಿ ನಗರಕ್ಕೆ ಬಂದ ಬಿ.ಎಸ್‌. ಲೋಕೇಶಕುಮಾರ ಅವರೂ ನೈನಾಳ ಆರೈಕೆ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ತಮ್ಮ ನಿವಾಸದ ಆವರಣದಲ್ಲಿಯೇ ನೈನಾಳ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.