ಗಣಿಗಾರಿಕೆ ನಿಷೇಧಕ್ಕೆ ಶೀಘ್ರ ಆದೇಶ

•ಜಪ್ತಿ ಮಾಡಿದ ಮರಳು ವಿಲೇವಾರಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

Team Udayavani, Aug 25, 2019, 11:05 AM IST

25-Agust-10

ವಿಜಯಪುರ: ನಗರದ ಗಣಿ-ಭೂವಿಜ್ಞಾನ ಇಲಾಖೆ ಕಾರ್ಯದರ್ಶಿ ಪ್ರಸನ್ನಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮರಳು ನಿರ್ವಹಣಾ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್ಪೋರ್ಸ್‌ ಸಮಿತಿ ಸಭೆ ನಡೆಯಿತು.

ವಿಜಯಪುರ: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ನದಿ ಪಾತ್ರದಲ್ಲಿ ಯಾವುದೇ ರೀತಿ ಮರಳು ಗಣಿಗಾರಿಕೆ ಸಂಪೂರ್ಣ ನಿಷೇಧ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ. ಇದೇ ವೇಳೆ ಜಿಲ್ಲೆಯಲ್ಲಿ ಜಪ್ತಿ ಮಾಡಿದ ಅನಧಿಕೃತ ಮರಳು ವಿಲೇವಾರಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಪ್ರಸನ್ನಕುಮಾರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮರಳು ನಿರ್ವಹಣಾ ಹಾಗೂ ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್‌ ಸಮಿತಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

ಅನಧಿಕೃತವಾಗಿ ಮರಳು ಗಣಿಗಾರಿಕೆ ತಡೆಗಟ್ಟಲು ಸೂಕ್ತ ನಿಗಾ ವಹಿಸಬೇಕು. ವಿಶೇಷವಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡು ಹರಿಯುವ ನದಿ ಪಾತ್ರದಲ್ಲಿ ಯಾವುದೇ ರೀತಿಯಲ್ಲಿ ಅನಧಿಕೃತ ಮರಳು ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಬೇಕು. ಮತ್ತೂಂದೆಡೆ ಅನಧಿಕೃತ ಮರಳು ವಿಲೆವಾರಿಗೆ ಒಂದು ವಾರದಲ್ಲಿ ಟೆಂಡರ್‌ ನೋಟಿಫಿಕೇಶನ್‌ ಹೊರಡಿಸಿ, ಎರಡನೇ ವಾರದಲ್ಲಿ ಮರಳು ಹರಾಜು ಪ್ರಕ್ರಿಯೆ ಪೂರ್ಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೀಮಾ ನದಿ ಪಾತ್ರದಲ್ಲಿ ಈ ಹಿಂದೆ ಅವ್ಯಾಹತವಾಗಿ ಮರಳು ಗಣಿಗಾರಿಕೆ ಅನಧಿಕೃತವಾಗಿ ನಡೆದಿರುವುದು ಗಮನಕ್ಕೆ ಬಂದಿದೆ. ಅದರಂತೆ ಮಹಾರಾಷ್ಟ್ರ ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಚರ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಮರಳು ಗಣಿಗಾರಿಕೆ ಸಂಪೂರ್ಣ ತಡೆಯಲು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯ ಪ್ರವೇಶಿಸುವ ಅವಶ್ಯಕತೆ ಇದೆ. ಇದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಲಾಗುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಪಟ್ಟಂತೆ ಯಾವುದೇ ರೀತಿ ನಿಯಮಾವಳಿಗಳನ್ನು ಪಾಲಿಸಲಾಗಿಲ್ಲ. ಮರಳು ನೀತಿಯನ್ನು ಪರಿಪಾಲಿಸಿದ್ದಲ್ಲಿ ಯಾವುದೇ ರೀತಿ ಅಕ್ರಮಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ನಿಯಮ ಬಾಹಿರವಾಗಿ ಹಾಗೂ ಅಕ್ರಮವಾಗಿ ಮರಳು ಗಣಿಗಾರಿಕೆ, ಕಲ್ಲು ಗಣಿಗಾರಿಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ನಿಗಾ ಇಡುವ ಜೊತೆಗೆ ಕಾಲ-ಕಾಲಕ್ಕೆ ಪ್ರಕರಣಗಳನ್ನು ದಾಖಲಿಸಿ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದರು.

ಜಿಲ್ಲೆಯಲ್ಲಿ 72 ಕಲ್ಲು ಗಣಿಗಾರಿಕೆ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಅಧಿಕೃತವಾಗಿ ಎಲ್ಲ ಗಣಿಗಾರಿಕೆಗಳು ನಿಯಮಾವಳಿಯಂತೆ ನಡೆಯುತ್ತಿರುವ ಕುರಿತು ಪರಿಶೀಲನೆಗೆ ತಂಡ ರಚಿಸಬೇಕಿದೆ. ಕಂದಾಯ, ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ, ಭೂ ವಿಜ್ಞಾನ ಮತ್ತು ಗಣಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಿಕೊಂಡು ನಿರಂತರ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರು ಕಂಡು ಬಂದಲ್ಲಿ ನೋಟಿಸ್‌ ಜಾರಿಗೊಳಿಸುವ ಜೊತೆಗೆ ಪ್ರಕರಣ ಸಹ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಪಟ್ಟಂತೆ ಅವಶ್ಯಕವಿರುವ ಮರಳನ್ನು ಸ್ಟಾಕ್‌ ಯಾರ್ಡ್‌ಗಳಲ್ಲಿ ಸಂಗ್ರಹಿಸಿ ಅವಶ್ಯಕತೆಗನುಗುಣವಾಗಿ ಕಲ್ಪಿಸಬೇಕು. ಅದರಂತೆ ಎಂ ಸ್ಯಾಂಡ್‌ ಬಳಸುವ ಕುರಿತು ಕಲ್ಲು ಗಣಿಗಾರಿಕೆ ಘಟಕಗಳು ಹಾಗೂ ಗುತ್ತಿಗೆದಾರರೊಂದಿಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕ ಸಭೆ ನಡೆಸಿ, ಅರ್ಹತೆಗೆ ಅನುಗುಣವಾಗಿ ಕಲ್ಲುಗಣಿಗಾರಿಕೆಗೆ ಅವಕಾಶ ಒದಗಿಸಬೇಕು ಎಂದರು.

ಜಿಲ್ಲೆಯ ಇಂಡಿಯಲ್ಲಿ ಮರಳು ಸ್ಟಾಕ್‌ ಯಾರ್ಡ್‌ ಸ್ಥಾಪಿಸಬೇಕು. ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಶಾಶ್ವತವಾಗಿ ತಂಡವೊಂದನ್ನು ರಚಿಸಬೇಕು. ಅವಶ್ಯಕ ಭೂಗರ್ಭ ಶಾಸ್ತ್ರಜ್ಞರು, ಇಬ್ಬರೂ ಹೋಂಗಾರ್ಡ್‌, ಪೊಲೀಸ್‌ ಸಿಬ್ಬಂದಿಗಳ ನೆರವು ಹಾಗೂ ಅವಶ್ಯಕ ವಾಹನಗಳನ್ನು ಸಹ ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತವಾಗಿ ಮರಳು ಸಾಗಾಣಿಕೆಯಾಗದಂತೆ ನಿಗಾ ವಹಿಸುವಂತೆ ತಿಳಿಸಿದ ಅವರು, ಸರ್ಕಾರಿ ಯೋಜನೆಗಳಿಗೆ, ಲೈಸನ್ಸ್‌ ಹೊಂದಿದವರಿಗೆ ಮರಳು ಪೂರೈಸಬೇಕು ಎಂದು ಹೇಳಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿರ್ದೇಶಕರು, ವಿವಿಧ ಇಲಾಖೆಗಳೊಂದಿಗೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಜಿಪಂ ಸಿಇಒ ವಿಕಾಸ್‌ ಸುರಳಕರ, ಎಸ್ಪಿ ಪ್ರಕಾಶ ನಿಕ್ಕಂ, ಇಂಡಿ ಉಪ ವಿಭಾಗಾಧಿಕಾರಿ ಆನಂದ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಭಾರ ಹಿರಿಯ ಭೂವಿಜ್ಞಾನಿ ಮೋಹನ ಇದ್ದರು.

ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ಮೇಲೆ ತೀವ್ರ ನಿಗಾ ಇಡಬೇಕು. ಪೊಲೀಸ್‌ ಇಲಾಖೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಕಲ್ಲು ಗಣಿಗಾರಿಕೆ ಸೇರಿದಂತೆ ಪರಿಸರ ಹಾನಿಗೊಳಿಸುವಂತಹ ಚಟುವಟಿಕೆಯನ್ನು ನಿಯಂತ್ರಿಸುವ ಜೊತೆಗೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಟಾಸ್ಕ್ಫೋರ್ಸ್‌ ಸಮಿತಿಗೆ ವರದಿ ಸಲ್ಲಿಸಲು ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.