ರಾಜಕಾರಣಿಗಳಿಂದ ಸಣ್ಣ-ಪುಟ್ಟ ಸಮಾಜಗಳ ನಿರ್ಲಕ್ಷ್ಯ

ಆಂಜನೇಯಸ್ವಾಮಿ ದೇವಸ್ಥಾನ ನವೀಕರಣ ಕಾರ್ಯಕ್ರಮ

Team Udayavani, Aug 25, 2019, 4:32 PM IST

25-Agust-37

ಹರಿಹರ: ಅಂಜನೇಯಸ್ವಾಮಿ ದೇವಸ್ಥಾನದ ನವೀಕರಣ ಹಾಗೂ ಗೋಪುರದ ಕಳಸಾರೋಹಣ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.

ಹರಿಹರ: ಸಣ್ಣ-ಪುಟ್ಟ ಸಮಾಜಗಳನ್ನು ರಾಜಕಾರಣಿಗಳು ಕರಿಬೇವಿನ ಸೊಪ್ಪಿನಂತೆ ಬಳಸಿಕೊಂಡು ನಂತರ ನಿರ್ಲಕ್ಷಿಸುತ್ತಾರೆ ಎಂದು ಕಲಬುರಗಿ ಕುಂಚೂರು ಸವಿತಾ ಪೀಠದ ಧರ್ಮಾಧಿಕಾರಿ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ನಗರದ ಜೆ.ಸಿ. ಬಡಾವಣೆಯಲ್ಲಿ ಶ್ರೀ ಅಂಜನೇಯಸ್ವಾಮಿ ದೇವಸ್ಥಾನದ ನವೀಕರಣ, ನವಗ್ರಹಗಳ ಪ್ರತಿಷ್ಠಾಪನೆ ಹಾಗೂ ಗೋಪುರದ ಕಳಸಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಣ್ಣ, ಪುಟ್ಟ ಸಮಾಜದವರನ್ನು ಸಣ್ಣ, ಪುಟ್ಟ ಆಸೆ, ಆಮಿಷ ತೋರಿ ಸೆಳೆದುಕೊಂಡು, ಉಪಯೋಗ ಪಡೆದು ಚುನಾವಣೆ ನಂತರ ಅವರನ್ನು ಮರೆಯುತ್ತಾರೆ ಎಂದರು.

ಸವಿತಾ ಸಮಾಜವೂ ಕೂಡ ಊಟಕ್ಕೆ ಕರಿಬೇವಿನ ಸೊಪ್ಪಿನ ರೀತಿಯಲ್ಲಿ ಬಳಕೆಯಾಗುತ್ತಿದ್ದು, ಸಮಾಜ ಬಾಂಧವರು ಎಚ್ಚೆತ್ತುಕೊಳ್ಳಬೇಕು. ಸಂಘಟನೆ, ಒಗ್ಗಟ್ಟು ಇಲ್ಲದ್ದೆ ಇದಕ್ಕೆ ಕಾರಣ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಸವಿತಾ ಸಮಾಜ ವ್ಯಾಪಕವಾಗಿದ್ದರೂ ಸಣ್ಣ ಸಮಾಜವಾಗಿ ಗುರುತಿಸಿಕೊಂಡಿದೆ. ಹಿಂದುಳಿದ ಈ ಸಮಾಜಕ್ಕೆ ಸೂಕ್ತ ರಾಜಕೀಯ, ಸಾಮಾಜಿಕ ಸ್ಥಾನ, ಮಾನಗಳು ಸಿಕಿಲ್ಲ. ಆದರೆ ಸಂಘಟನೆ ಇದ್ದಿದ್ದರೆ ಈ ನಷ್ಟ ಆಗುತ್ತಿರಲಿಲ್ಲ. ಸಂಘಟನೆ ಬರುವುದು ಶಿಕ್ಷಣ, ಜಾಗೃತಿಯಿಂದ. ಸವಿತಾ ಸಮಾಜ ಮುಖ್ಯವಾಹಿನಿಗೆ ಬರುವಂತಾಗಬೇಕೆಂದು ಆಶಿಸಿದರು.

ಶಾಸಕ ಎಸ್‌.ರಾಮಪ್ಪ ಮಾತನಾಡಿ, ನನ್ನ ಗೆಲುವಿಗೆ ಸವಿತಾ ಸಮಾಜದವರ ಸಹಕಾರ ಗಣನೀಯ. ಈ ಸಮಾಜದ ಋಣ ನನ್ನ ಮೇಲಿದೆ. ನನ್ನ ಅವಧಿಯಲ್ಲಿ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಮಾಜಿ ಶಾಸಕ ಬಿ.ಪಿ.ಹರೀಶ್‌ ಮಾತನಾಡಿ, ಸಣ್ಣ ಸಮಾಜದವರಾದರೂ ಸವಿತಾ ಸಮಾಜದವರು ಈ ದೇವಸ್ಥಾನದ ಅಭಿವೃದ್ಧಿ ಕೈಗೊಂಡು, ದೊಡ್ಡ ಸಮಾರಂಭ ಮಾಡಿರುವುದು ಸಂತಸದ ವಿಷಯ. ಸಂಸದ ಜಿ.ಎಂ.ಸಿದ್ದೇಶ್ವರ್‌ರಿಂದ ಅನುದಾನ ಕೊಡಿಸಿ ಸಮಾಜದ ಅಭಿವೃದ್ಧಿಗೆ ಬೆಂಬಲಿಸಲಾಗುವುದು ಎಂದರು.

ಮಾಜಿ ಶಾಸಕ ಎಚ್.ಎಸ್‌.ಶಿವಶಂಕರ್‌ ಮಾತನಾಡಿ, ನಾನು ಶಾಸಕನಾಗಿದ್ದ ಅವಧಿಯಲ್ಲಿ ನೀಡಿದ 5 ಲಕ್ಷ ರೂ. ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿಯನ್ನು ಉತ್ತಮವಾಗಿ ನೆರವೇರಿಸಲಾಗಿದೆ ಎಂದರು.

ಸವಿತಾ ಸಮಾಜದ ಅಧ್ಯಕ್ಷ ವೈ.ಆರ್‌.ಗುಂಟೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಬಿ.ಎಂ.ವಾಗೀಶಸ್ವಾಮಿ, ನಗರಸಭೆ ಸದಸ್ಯರಾದ ನೀತಾ ಮೆಹರ್ವಾಡೆ, ಎಂ.ಎಸ್‌.ಬಾಬುಲಾಲ್, ಆರ್‌.ಸಿ.ಜಾವಿದ್‌, ಮಹಬೂಬ್‌ ಬಾಷಾ, ಉದ್ಯಮಿ ತುಕಾಮಣಿ ಸಾ ಭೂತೆ, ವಿ.ಜಿ. ನಾಗಣ್ಣ, ಎನ್‌. ಗೋವಿಂದಮ್ಮ, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಪಿ.ಹನುಮಂತಪ್ಪ, ತಾಲೂಕು ಗೌರವಾಧ್ಯಕ್ಷ ಜಿ.ಎಚ್.ರಾಜು, ಪ್ರಧಾನ ಕಾರ್ಯದರ್ಶಿ ವಿ.ಎನ್‌.ಗೋಪಾಲಸ್ವಾಮಿ, ಎಸ್‌.ಎನ್‌.ಲಕ್ಷ್ಮಣ, ಜಿ.ಪಿ. ಶ್ರೀಕಾಂತ್‌, ಯುವ ಘಟಕದ ಅಧ್ಯಕ್ಷ ರಾಜು, ದಾವಣಗೆರೆ ವೆಂಕಟಾ ಛಲಪತಿ, ರಾಣಿಬೆನ್ನೂರ ರಾಜು ದೇವರಪಲ್ಲಿ, ಮಂಜುಳಾ, ರುಕ್ಮಿಣಿ, ಶಾರದಮ್ಮ, ಹೇಮವತಿ, ವೀಣಾ, ರಮ್ಯ, ಗೀತಮ್ಮ, ಸೋಮೇಶ್ವರಿ, ಕವಿತಾ, ಗಿರಿಜಮ್ಮ ಇತರರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.