ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಿ

ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ಸಲಹೆ

Team Udayavani, Aug 25, 2019, 5:02 PM IST

25-Agust-39

ಚಿಕ್ಕಮಗಳೂರು: ನಗರದಲ್ಲಿ ನಡೆದ ವಿಶ್ವ ಜಾನಪದ ದಿನಾಚರಣೆಯಲ್ಲಿ ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಗಯ್ಯ ಮಾತನಾಡಿದರು.

ಚಿಕ್ಕಮಗಳೂರು: ಇಂದಿನ ಯುವಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹದಿಂದ ಹೊರಬಂದು ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ಸಲಹೆ ನೀಡಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ನಗರದ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಏರ್ಪಡಿಸಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ನಮ್ಮ ಸಂಸ್ಕೃತಿಯ ತಾಯಿ ಬೇರು. ಅದನ್ನು ಯಾವುದೇ ಕಾರಣಕ್ಕೂ ನಾಶವಾಗಲು ಬಿಡಬಾರದು. ಜಾನಪದವನ್ನು ಕಳೆದುಕೊಂಡರೆ ನಾವು ನಮ್ಮತನವನ್ನೇ ಕಳೆದುಕೊಂಡು ಪ್ರಪಂಚದೆದುರು ಒಂಟಿಯಾಗಿ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಧಾನ ಉಪನ್ಯಾಸ ನೀಡಿದ ಸಾಹಿತಿ ಡಾ| ಬೆಳವಾಡಿ ಮಂಜುನಾಥ್‌, ಬ್ರಿಟನ್ನಿನ ಪ್ರಾಚೀನ ಅಣ್ವೇಷಕ ವಿಲಿಯಂ ಜಾನ್‌ ಥಾಮ್ಸ್‌ 1846ರ‌ ಆಗಸ್ಟ್‌ 22ರಂದು ಜಾನಪದವನ್ನು ಫೋಕ್‌ಲೋರ್‌ ಎಂದು ಹೆಸರಿಸಿದ ಹಿನ್ನೆಲೆಯಲ್ಲಿ ವಿಶ್ವ ಜಾನಪದ ದಿನ ಆಚರಣೆಗೆ ಬಂದಿತು ಎಂದು ತಿಳಿಸಿದರು.

ಅಣ್ವೇಷಕ ಥಾಮ್ಸ್‌ ಅವರು ಜಾನಪದ ಶಾಸ್ತ್ರ, ಅದರ ಸ್ವರೂಪ, ಸ್ಥಿತಿ, ವೈವಿಧ್ಯ ಮತ್ತು ಸಂಬಂಧವನ್ನು ಸೂಕ್ಷ್ಮವಾಗಿ ವಿವರಿಸಿ, ಪರಂಪರೆಯಿಂದ ಬಂದಿರುವ ಜಾನಪದ ಸಾಹಿತ್ಯವನ್ನು ಸಂಗ್ರಹಿಸುವಂತೆ ಮನವಿ ಮಾಡಿದ್ದರು. ಅದರ ಫಲವಾಗಿ ಜಗತ್ತಿನಲ್ಲಿ ಜಾನಪದದ ಅಧ್ಯಯನ ಗಂಭೀರವಾಗಿ ನಡೆಯಲಾರಂಭಿಸಿತು ಎಂದು ಹೇಳಿದರು.

ಆಶಾಕಿರಣ ಅಂಧ ಮಕ್ಕಳ ಶಾಲೆ ಅಧ್ಯಕ್ಷ ಡಾ| ಜೆ.ಪಿ.ಕೃಷ್ಣೇಗೌಡ ಮಾತನಾಡಿ, ಇಂದಿನ ಯುವಪೀಳಿಗೆ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡರೆ ಮಾತ್ರ ಅದು ಮುಂದಿನ ತಲೆಮಾರಿಗೆ ಉಳಿಯುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್‌, ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಕಲಾವಿದ ಬಿಳಗಲಿ ನಾಗರಾಜ್‌ ಅವರಿಂದ ಕೊಳಲು ವಾದನ, ಗಾಯಕರಾದ ಜಿ.ಬಿ.ಸುರೇಶ್‌, ಜ್ಯೋತಿ ವಿನೀತ್‌ಕುಮಾರ್‌ ಮತ್ತು ಚಂದ್ರಶೆಟ್ಟಿ ಅವರಿಂದ ಜಾನಪದ ಗೀತೆಗಳ ಗಾಯನ ನಡೆಯಿತು. ತಾಲೂಕು ಪಂಚಾಯತ್‌ ಸದಸ್ಯ ಮಹೇಶ್‌, ಸಮಾಜ ಕಲ್ಯಾಣ ಇಲಾಖೆ ಸಹನಿರ್ದೇಶಕ ಎಚ್.ಡಿ.ರೇವಣ್ಣ, ವಿದ್ಯಾರ್ಥಿ ನಿಲಯದ ವಾರ್ಡನ್‌ ಶ್ರೀಲತಾ, ಉಪನ್ಯಾಸಕ ಜಿ.ಬಿ.ವಿರೂಪಾಕ್ಷ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ಸಂಧ್ಯಾ ಸ್ವಾಗತಿಸಿ, ಚಂದ್ರಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.