ಪ್ಲಾಸ್ಟಿಕ್ಗೆ ಕ್ವಿಟ್ ಇಂಡಿಯಾ ಆರೋಗ್ಯಕ್ಕೆ ಫಿಟ್ ಇಂಡಿಯಾ
v
Team Udayavani, Aug 26, 2019, 5:03 AM IST
ನವದೆಹಲಿ: ‘ದೇಶದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಎಂಬುದು ಬೃಹತ್ ಆಂದೋಲನವಾಗಬೇಕು. ಜತೆಗೆ, ದೇಶ ಬಾಂಧವರೆಲ್ಲರೂ ಉತ್ತಮ ಆರೋಗ್ಯಕ್ಕಾಗಿ ಫಿಟ್ ಇಂಡಿಯಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು’ ಎಂದು ಈ ಬಾರಿಯ ತಮ್ಮ ‘ಮನ್ ಕೀ ಬಾತ್’ನಲ್ಲಿ ದೇಶದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಹೇಳಿದ್ದ ಮಾತನ್ನೇ ‘ಮನ್ ಕೀ ಬಾತ್’ನಲ್ಲಿಯೂ ಪುನರುಚ್ಚರಿಸಿದರು.
”ಇದೇ ಅ.2ರಂದು ನಾವು ಮಹಾತ್ಮಾ ಗಾಂಧಿಯವರ 150ನೇ ಹುಟ್ಟುಹಬ್ಬ ಆಚರಿಸಲಿದ್ದೇವೆ. ಆ ಹೊತ್ತಿಗೆ ಬಹಿರ್ದೆಸೆ ಮುಕ್ತ ಭಾರತವನ್ನು ಉಡುಗೊರೆಯಾಗಿ ಬಾಪುವಿಗೆ ನೀಡಲು ನಿರ್ಧರಿಸಲಾಗಿದೆ. ಜತೆಗೆ, ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಶ್ರೀಕಾರ ಹಾಡುವ ಮೂಲಕವೂ ನಾವು ಬಾಪುವಿಗೆ ಮತ್ತೂಂದು ಉಡುಗೊರೆ ನೀಡಬಹುದು” ಎಂದರು.
ಪ್ಲಾಸ್ಟಿಕ್ ನಿರ್ಮೂಲನೆಗೆ ಕಾರ್ಪೊರೇಟ್ ಸಂಸ್ಥೆಗಳ ಸಹಕಾರ ಕೋರಿದ ಅವರು, ”ದೇಶದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಅನ್ನು ಸೂಕ್ತ ರೀತಿ ವಿಲೇವಾರಿ ಮಾಡುವಂಥ, ಪ್ಲಾಸ್ಟಿಕ್ ಮರುಬಳಕೆ ಮಾಡುವಂಥ ಅಥವಾ ಪ್ಲಾಸ್ಟಿಕ್ನಿಂದ ಇಂಧನ ತಯಾರಿಸುವಂಥ ತಂತ್ರಜ್ಞಾನ ಆವಿಷ್ಕರಿಸಬೇಕು. ಇದೇ ದೀಪಾವಳಿಯೊಳಗೆ ಸುರಕ್ಷತಾ ವಿಧಾನಗಳ ಮೂಲಕ ಪ್ಲಾಸ್ಟಿಕ್ ವಿಲೇವಾರಿ ಮಾಡುವಂಥ ವ್ಯವಸ್ಥೆಗಳು ಜಾರಿಗೊಳ್ಳಬೇಕು” ಎಂದು ಆಶಿಸಿದರು.
29ರಿಂದ ‘ಫಿಟ್ ಇಂಡಿಯಾ’: ಇಡೀ ದೇಶವನ್ನು ರೋಗ ಮುಕ್ತವಾಗಿರುವ, ಎಲ್ಲೆಲ್ಲೂ ಆರೋಗ್ಯ ನಳನಳಿಸುವಂತೆ ಮಾಡುವ ಉದ್ದೇಶದಿಂದ ದೇಶದ ಎಲ್ಲಾ ನಾಗರಿಕರಿಗಾಗಿ ಇದೇ 29ರಿಂದ ‘ಫಿಟ್ ಇಂಡಿಯಾ’ ಎಂಬ ಹೊಸ ಅಭಿಯಾನ ಆರಂಭಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಇದೇ ವೇಳೆ, ನಮ್ಮ ದೇಶವನ್ನು ಪ್ರಾಕೃತಿಕ ಸೌಂದರ್ಯ ಹಾಗೂ ವನ್ಯಜೀವಿನಗಳ ಸ್ವರ್ಗವನ್ನಾಗಿಸಲು ಎಲ್ಲರೂ ಪಣ ತೊಡಬೇಕೆಂದು ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ