ಹುಬ್ಬಳ್ಳಿ: ಚಾಕುವಿನಿಂದ ಇರಿದು ಹಲ್ಲೆ: ಇಬ್ಬರಿಗೆ ಗಾಯ
Team Udayavani, Aug 26, 2019, 1:20 AM IST
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಯುವಕರಿಬ್ಬರಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಆಕಾಶ ಯಲ್ಲಪ್ಪಾ ಕಸೂತಿ (23), ಸಿದ್ದು ಕಲ್ಯಾಣಿ (23) ಗಾಯಗೊಂಡಿದ್ದಾರೆ. ಇವರಲ್ಲಿ ಆಕಾಶ ಗಂಭೀರ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಾಲ್ವರು ದುಷ್ಕರ್ಮಿಗಳ ಗುಂಪು ಇವರಿಬ್ಬರ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಘಟನೆಗೆ ಹಳೆಯ ವೈಷಮ್ಯವೆ ಕಾರಣವೆಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆ ಪೊಲೀಸರು ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.