ಹಿರೇಕೆರೆಗೆ ನೀರು ತುಂಬಿಸೋದು ಯಾವಾಗ?


Team Udayavani, Aug 26, 2019, 11:24 AM IST

gadaga-tdy-1

ನರೇಗಲ್ಲ: ಮಳೆಗಾಲದಲ್ಲಿಯೂ ನೀರಿಲ್ಲದೆ ಬಣಗುಡುತ್ತಿರುವ ಪಟ್ಟಣದ ಹಿರೇಕೆರೆ.

ನರೇಗಲ್ಲ: ಪಟ್ಟಣದ ರೈತರು, ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಹಿರೇಕೆರೆಯ ಹೂಳು ತೆಗೆದಿರುವುದು ಈಗ ಇತಿಹಾಸ. ಕಳೆದ ಐದಾರು ವರ್ಷಗಳಿಂದ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿರುವುದರಿಂದ ಇಲ್ಲಿನ ಜನ, ಜಾನುವಾರುಗಳಿಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಈ ವರ್ಷದ ಮುಂಗಾರು ಸಂಪೂರ್ಣ ಇಲ್ಲದೇ ಇರುವುದರಿಂದ ಕೆರೆ ತುಂಬುವುದು ಇರಲಿ ಇಲ್ಲಿ ಹನಿ ನೀರು ಸಹ ಸಂಗ್ರಹವಾಗಿಲ್ಲ. ಜನರ ಜೀವನಾಡಿಯಂತಿರುವ ಕೆರೆಗೆ ನೀರು ತುಂಬಿಸುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿರುವುದರಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರದ ಹಣವಿಲ್ಲದೆ ಅಭಿವೃದ್ಧಿ: ಕಳೆದ ವರ್ಷ ಕೆರೆಯ ಅಭಿವೃದ್ಧಿಗೆ ಪಣತೊಟ್ಟು ಇಲ್ಲಿನ ಹಾಲಕೆರೆಯ ಡಾ| ಅಭಿನವ ಅನ್ನದಾನ ಸ್ವಾಮೀಜಿಗಳು, ಹಿರೇಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳು ಹಾಗೂ ಹಿತ ಚಿಂತಕರು, ಪರಿಸರ ಪ್ರೇಮಿಗಳ ನೇತೃತ್ವದಲ್ಲಿ ನೆಲ ಜಲ ಸಂರಕ್ಷಣೆ ಸಮಿತಿ ರಚಿಸಿಕೊಂಡು ಕೆರೆಯ ಹೂಳು ತೆಗೆಸಿದ್ದಾರೆ. ಸುತ್ತಮುತ್ತಲಿನ ರೈತರ ಸಹಕಾರದೊಂದಿಗೆ ಸರ್ಕಾರದ ಸಹಾಯಧನ ಅಪೇಕ್ಷಿಸದೇ, ಕೆರೆಯ ಹೊಳೆತ್ತುವ ಕಾರ್ಯದ ಜತೆಗೆ ಫಲವತ್ತಾದ ಹೂಳಿನ ಮಣ್ಣನ್ನು ರೈತರು ತಮ್ಮ ಹೊಲಗಳಿಗೆ ಹಾಕಿಕೊಂಡಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿರುವ ಹಿರೇಕೆರೆಯು ಕೊಡಿಕೊಪ್ಪಕ್ಕೆ ಹೊಂದಿಕೊಂಡಿದೆ. ಸುಮಾರು 39 ಎಕರೆ ವಿಸ್ತೀರ್ಣ ಹೊಂದಿದೆ. ಇದನ್ನು ಹಂತ ಹಂತವಾಗಿ ನಾಲ್ಕು ಕೆರೆಗಳನ್ನಾಗಿ ಭಾಗ ಮಾಡಲಾಗಿದೆ. ಇದಕ್ಕೆ ನದಿ ಮೂಲದಿಂದ ನೀರು ತುಂಬಿಸುವ ವ್ಯವಸ್ಥೆ ಈಗ ಸದ್ಯಕ್ಕೆ ಮಾಡಬೇಕಾಗಿದೆ.

ಕಳೆದ ಐದು ವರ್ಷಗಳಿಂದ ಸತತ ಬರಗಾಲ ಇರುವುದರಿಂದ ಅಂತರ್ಜಲ ಬತ್ತಿ ಹೋಗಿದೆ. ನರೇಗಲ್ಲ ಸೇರಿದಂತೆ ಮಜರೆ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ತೊಂದರೆ ಪ್ರಾರಂಭವಾಗಿದೆ. ಹಿಂಗಾರು ಮತ್ತು ಮುಂಗಾರು ಮಳೆ ಸರಿಯಾಗಿ ಬಾರದೇ ಇರುವುದರಿಂದ ಜನರು ಪಟ್ಟಣಗಳಿಗೆ ಗುಳೇ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹಮ್ಮಿಗಿ ಏತ ನೀರಾವರಿಯಿಂದ ಅಥವಾ ಮಲಪ್ರಭಾ ಕಾಲುವೆಯಿಂದ ನರೇಗಲ್ಲ-ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಸುವ ಕೆಲಸ ಬೇಗನೆ ಪ್ರಾರಂಭಿಸಬೇಕು. ಕೆರೆ ತುಂಬಿಸುವ ಕೆಲಸವಾಗೇಕೆಂಬುದು ಜನಾಗ್ರಹವಾಗಿದೆ.

 

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.