ಕಾಶ್ಮೀರದಲ್ಲಿ ಕಲ್ಲುತೂರಾಟಕ್ಕೆ ಟ್ರಕ್ ಚಾಲಕ ಸಾವು, ಆರೋಪಿ ಬಂಧನ; ಪೊಲೀಸ್
Team Udayavani, Aug 26, 2019, 12:12 PM IST
ಜಮ್ಮು-ಕಾಶ್ಮೀರ: ಪ್ರತಿಭಟನಾಕಾರರು ನಡೆಸಿದ ಕಲ್ಲುತೂರಾಟದಿಂದ ಟ್ರಕ್ ಚಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಝಾರ್ದಿಪೋರಾ ನಿವಾಸಿ ನೂರ್ ಮೊಹಮ್ಮದ್ ದಾರ್ (42)ಎಂಬಾತ ಟ್ರಕ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಇದು ಭದ್ರತಾ ಪಡೆಯ ವಾಹನ ಎಂದು ತಪ್ಪಾಗಿ ಗ್ರಹಿಸಿ ಪ್ರತಿಭಟನಾಕಾರರು ಏಕಾಏಕಿ ಕಲ್ಲುತೂರಾಟ ನಡೆಸಿದ ಘಟನೆ ನಡೆದಿತ್ತು ಎಂದು ಜಮ್ಮು-ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ನೂರ್ ಅವರ ತಲೆಗೆ ಬಲವಾದ ಏಟು ಬಿದ್ದಿತ್ತು. ಕೂಡಲೇ ಭಿಜಿಬೆಹ್ರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎಸ್ ಕೆಐಎಂಎಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಏತನ್ಮಧ್ಯೆ ನೂರ್ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗುರುತಿಸಿ ಬಂಧಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ