ಮಕ್ಕಳ ಚಟುವಟಿಕೆ ಬೆಂಬಲಿಸಿ

ಶಿಕ್ಷಕರು, ಪೋಷಕರಿಗೆ ತಾಪಂ ಅಧ್ಯಕ್ಷೆ ಭಾರತಿ ಪ್ರಹ್ಲಾದ್‌ ಸಲಹೆ

Team Udayavani, Aug 26, 2019, 3:26 PM IST

26-Agust-28

ಕಡೂರು: ಬ್ಯಾಗಡೇಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್‌ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಪ್ರಹ್ಲಾದ್‌ ಮಾತನಾಡಿದರು.

ಕಡೂರು: ಮಕ್ಕಳ ರಚನಾತ್ಮಕ ಚಟುವಟಿಕೆ ಗಳನ್ನು ಶಿಕ್ಷಕರು ಮತ್ತು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದರೆ ಕ್ರೀಯಾಶೀಲ ಮನಸ್ಸುಗಳು ಮೂಡಿಬರಲಿವೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಪ್ರಹ್ಲಾದ್‌ ಹೇಳಿದರು.

ಕಡೂರು ತಾಲೂಕು ಬ್ಯಾಗಡೇಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ನಡೆದ ಹುಲ್ಲೇಹಳ್ಳಿ ಕ್ಲಸ್ಟರ್‌ ಮಟ್ಟದ ಕಿರಿಯ, ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಕ್ಕಳಲ್ಲಿ ಸಂಸ್ಕಾರ ತುಂಬಿ ಎಲ್ಲರ ಪ್ರೀತಿ,ಗೌರವಾದರಗಳಿಗೆ ಪಾತ್ರರಾಗುವಂತೆ ಮಾಡ ಬೇಕು. ಮಕ್ಕಳಲ್ಲಿರುವ ನೈಜ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದ ತಾಪಂ ಸದಸ್ಯ ಬ್ಯಾಗಡೇಹಳ್ಳಿ ಬಸವರಾಜು, ವಿದ್ಯಾರ್ಥಿಗಳು ಪ್ರಯತ್ನ ಪೂರ್ವಕವಾಗಿ ಪ್ರತಿಭೆ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಾಗುತ್ತಿದೆ. ಆದರೆ, ಈ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಬಳಸಿಕೊಂಡಲ್ಲಿ ಉನ್ನತ ಸಾಧನೆಗೆ ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧರಾಜು ನಾಯ್ಕ, ಮಕ್ಕಳ ಜ್ಞಾನ ವಿಕಾಸಕ್ಕೆ ಬೇಕಾದ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿ ಶಿಕ್ಷಣ ಇಲಾಖೆ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ಕ್ಲಸ್ಟರ್‌ ಮಟ್ಟದಿಂದ ರಾಜ್ಯಮಟ್ಟದ ವರಗೆ ಮಕ್ಕಳು ವೇದಿಕೆಗಳ ಮೂಲಕ ಗುರುತಿಸಿಕೊಳ್ಳುವ ಕಾರ್ಯಕ್ಕೆ ಪೋಷಕರು ಸಹಕಾರ ನೀಡಬೇಕೆಂದು ತಿಳಿಸಿದರು.

ಜಿಲ್ಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ.ಜೆ.ಜಗದೀಶ್‌ ಮಾತನಾಡಿ, ಶಿಕ್ಷಕರಿಗೆ ಮಕ್ಕಳೇ ಮಾಲೀಕರು. ಖಾಸಗಿ ಶಾಲೆಗಳ ಗದಾ ಪ್ರಹಾರಕ್ಕೆ ಸಿಲುಕಿ ಸರ್ಕಾರಿ ಶಾಲೆಗಳು ನಲುಗುತ್ತಿವೆ. ಆದ್ದರಿಂದ, ಸರ್ಕಾರಿ ಶಾಲೆಗಳು ಸಬಲೀಕರಣವಾಗಬೇಕು. ಕ್ರಿಯಾತ್ಮಕ ಶಕ್ತಿ ಸರ್ಕಾರಿ ಶಾಲೆ ಮಕ್ಕಗಳಿಗಿದೆ. ಗ್ರಾಮೀಣ ಮಕ್ಕಳಲ್ಲಿನ ಶಿಕ್ಷಣೇತರ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರಕಬೇಕು. ಈ ಹಿನ್ನೆಲೆಯಲ್ಲಿ ಸಣ್ಣ ಗ್ರಾಮ ಬ್ಯಾಗಡೇಹಳ್ಳಿಯ ಕಿರಿಯ ಪ್ರಾಥಮಿಕ ಶಾಲೆ ಆತಿಥ್ಯ ವಹಿಸಿ ಉತ್ತಮ ವೇದಿಕೆ ಒದಗಿಸಿಕೊಟ್ಟಿದೆ. ಪ್ರತಿಭೆ ಅನಾವರಣಗೊಳ್ಳಲು ಇಂತಹ ಅವಕಾಶಗಳನ್ನು ಗ್ರಾಮೀಣ ಮಕ್ಕಳು ಉಪಯುಕ್ತಗೊಳಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿ ವಹಿಸಿದ್ದ ಹುಲ್ಲೇಹಳ್ಳಿ ಗ್ರಾಪಂ ಅಧ್ಯಕ್ಷೆ ಮಮತಾ ವಿಜಯಕುಮಾರ್‌, ಮಕ್ಕಳ ಮನೋವಿಕಾಸಕ್ಕೆ ನೆರವಾಗಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಗ್ರಾಮೀಣ ಮಕ್ಕಳಿಗೆ ಉತ್ತಮ ಕಾರ್ಯಕ್ರಮ ರೂಪಿಸಿರುವ ಇಲಾಖೆ ಕಾರ್ಯ ಶ್ಲಾಘನೀಯ. ಇಲಾಖೆಯ ಎಲ್ಲಾ ಕಾರ್ಯಕ್ರಮ ಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಿತ್ರಾ ಲೋಕೇಶ್‌, ಹುಲ್ಲೇಹಳ್ಳಿ ಪಿಡಿಒ ಮಂಜುನಾಥ್‌, ಶಿಕ್ಷಣ ಸಂಯೋಜನಾಧಿಕಾರಿ ಯೋಗಾನಂದ ಮೂರ್ತಿ, ಎಸ್‌.ಟಿ. ರಾಜಪ್ಪ ಮಾತನಾಡಿದರು.

ತಾ.ಪಂ. ಸದಸ್ಯ ಚಂದ್ರಪ್ಪ, ಶಿಕ್ಷಕರ ಸಂಘದ ಅಧ್ಯಕ್ಷೆ ಎನ್‌.ಡಿ. ಸೀತಾಲಕ್ಷಿ ್ಮೕ, ಬಸಪ್ಪ, ಮಲ್ಲಿಕಾರ್ಜುನ್‌, ಗ್ರಾ.ಪಂ. ಸದಸ್ಯ ಸೋಮಶೇಖರ್‌, ಚಂದ್ರಣ್ಣ, ಪಾಲಾ ನಾಯ್ಕ, ಉಪಾಧ್ಯಕ್ಷೆ ಸುಶೀಲಾಬಾಯಿ, ಸಿಆರ್‌ಪಿ ರಾಜಶೇಖರ್‌, ಮುಖ್ಯಶಿಕ್ಷಕ ಸಿ.ಟಿ. ರಾಜಶೇಖರಪ್ಪ, ವಸಂತ್‌ ಕುಮಾರ್‌, ಗೀತಾಬಾಯಿ, ಕೆ.ಬಿ.ರಾಜಶೇಖರ್‌ ಮತ್ತು ಶಿಕ್ಷಕರ ಸಂಘದ ಸದಸ್ಯರು, ಗ್ರಾಮಸ್ಥರು ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.