ಗೋಶಾಲೆ ಕಾರ್ಮಿಕರಿಗೆ ಕೂಲಿ ಹಣ ಮರೀಚಿಕೆ

•ಐದು ತಿಂಗಳಿನಿಂದ ಕೂಲಿ ನೀಡದ್ದಕ್ಕೆ ಕಾರ್ಮಿಕರೇ ಬರ್ತಿಲ್ಲ

Team Udayavani, Aug 27, 2019, 3:59 PM IST

cd-tdy-1

ಕೊಂಡ್ಲಹಳ್ಳಿ: ಈರಣ್ಣಮರದ ಗೋಶಾಲೆಯಲ್ಲಿ ರೈತರೇ ತಮ್ಮ ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗುತ್ತಿರುವುದು.

ಕೊಂಡ್ಲಹಳ್ಳಿ: ಕೊಂಡ್ಲಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಈರಣ್ಣ ಮರದ ಕ್ಷೇತ್ರ ಹಾಗೂ ಬಿ.ಜಿ. ಕೆರೆ ಗ್ರಾಪಂ ವ್ಯಾಪ್ತಿಯ ಮುತ್ತಿಗಾರಹಳ್ಳಿ ಗ್ರಾಮದ ಕೆರೆಯಂಗಳದಲ್ಲಿ ಗೋಶಾಲೆ ಆರಂಭಿಸಲಾಗಿದೆ. ಆದರೆ ಈ ಗೋಶಾಲೆಗಳ ನಿರ್ವಹಣೆಗೆ ನೇಮಿಸಲಾಗಿದ್ದ ಕೂಲಿ ಕಾರ್ಮಿಕರಿಗೆ ಕಳೆದ ಐದು ತಿಂಗಳುಗಳಿಂದ ಕೂಲಿ ಹಣವನ್ನೇ ಪಾವತಿ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಗೋಶಾಲೆಗಳಲ್ಲಿ ದನ ಕರುಗಳಿಗೆ ಮೇವು ವಿತರಿಸಲು, ಜಾನುವಾರುಗಳ ಸಗಣಿ ತೆಗೆಯುವುದು ಇತರೆ ಕೆಲಸಕ್ಕಾಗಿ ಈರಣ್ಣಮರದ ಗೋಶಾಲೆಯಲ್ಲಿ 14 ಹಾಗೂ ಮುತ್ತಿಗಾರಹಳ್ಳಿ ಗೋಶಾಲೆಯಲ್ಲಿ 17 ಕೂಲಿ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು. ಈ ಕೆಲಸಗಾರರಿಗೆ ಐದು ತಿಂಗಳುಗಳಿಂದ ಕೂಲಿಯನ್ನೇ ಪಾವತಿ ಮಾಡಿಲ್ಲ. ಹಾಗಾಗಿ ಕಳೆದ ಜುಲೈ ತಿಂಗಳ ಮಧ್ಯಭಾಗದಿಂದ ಈ ಕೆಲಸಗಾರರು ಕೆಲಸಕ್ಕೆ ಬರುತ್ತಿಲ್ಲ. ಕೂಲಿ ಹಣಕ್ಕಾಗಿ ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ಗೆ ಅಲೆದಾಡಿದರೂ ಪ್ರಯೋಜನವಾಗುತ್ತಿಲ್ಲ.

ಮುತ್ತಿಗಾರಹಳ್ಳಿ ಹಾಗು ಈರಣ್ಣಮರ ಗೋಶಾಲೆಗಳಲ್ಲಿ ಕೆಲಸಗಾರರು ಬಾರದೇ ಇರುವುದರಿಂದ ಜಾನುವಾರುಗಳ ಕಾಲ ಬುಡದಲ್ಲೇ ಸಗಣಿ, ಕಸ, ಮೇವು ಬಿದ್ದು ಸ್ವಚ್ಛತೆ ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಸಗಣಿ ಬಿದ್ದು

ವ್ಯರ್ಥವಾಗುತ್ತಿದೆ. ಕೆಲಸಗಾರರಿಂದ ಸಗಣಿಯನ್ನು ತೆಗೆಸಿ ಹಾಕಿದ್ದರೆ ಹೆಚ್ಚಿನ ಸಗಣಿ ಸಂಗ್ರಹವಾಗುತ್ತದೆ. ಸಗಣಿ ಹರಾಜಾಗಿದ್ದರೆ ಸರ್ಕಾರಕ್ಕೆ ಆದಾಯವೂ ಬರುತ್ತಿತ್ತು. ಕೂಲಿ ಕಾರ್ಮಿಕರು ಇಲ್ಲದೇ ಇರುವುದರಿಂದ ರೈತರೇ ತಮ್ಮ ಜಾನುವಾರುಗಳಿಗೆ ಮೇವು ಹಾಕಬೇಕಾಗಿದೆ.

ಯಾವುದೇ ಕೂಲಿ ಕೆಲಸಕ್ಕೆ ಹೋದರೂ ವಾರಕ್ಕೊಮ್ಮೆಯಾದರೂ ಕೂಲಿ ಬಾಬ್ತು ಸಿಗುತ್ತದೆ. ಗೋಶಾಲೆಯಲ್ಲಿ ಐದು ತಿಂಗಳಾದರೂ ಕೂಲಿ ಹಣ ಪಾವತಿಸದಿದ್ದರೆ ಕಾರ್ಮಿಕರ ಪಾಡೇನು ಎನ್ನುವ ಪ್ರಶ್ನೆ ಉದ್ಭವಿಸಿದೆ. ಸಂಬಂಧಿಸಿದ ಅಧಿಕಾರಿಗಳು ಕೂಲಿ ಹಣ ನೀಡಲು ಕೂಡಲೇ ಗಮನ ನೀಡಬೇಕಿದೆ.

 

•ಕೊಂಡ್ಲಹಳ್ಳಿ ರಾಮಚಂದ್ರಪ್ಪ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.