ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟಿದೆ ಅವ್ಯವಹಾರ


Team Udayavani, Aug 27, 2019, 4:08 PM IST

sm-tdy-1

ಸಾಗರ: ಎಪಿಎಂಸಿ ಆವರಣದಲ್ಲಿ ಮ್ಯಾಮ್ಕೋಸ್‌ನ ನೂತನ ಕಟ್ಟಡವನ್ನು ಶಾಸಕ ಎಚ್.ಹಾಲಪ್ಪ ಲೋಕಾರ್ಪಣೆಗೊಳಿಸಿದರು.

ಸಾಗರ: ಸಹಕಾರ ಕ್ಷೇತ್ರದಲ್ಲಿಯೂ ವ್ಯಾಪಿಸುತ್ತಿರುವ ಅವ್ಯವಹಾರ ಹಾಗೂ ರಾಜಕೀಯ ಕುತಂತ್ರಗಳತ್ತ ಸಹಕಾರಿ ಧುರೀಣರು ಹೆಚ್ಚು ಎಚ್ಚರಿಕೆಯಿಂದ ಗಮನಿಸುವ ಕಾಲ ಬಂದಿದೆ ಎಂದು ಶಾಸಕ ಎಚ್.ಹಾಲಪ್ಪ ಪ್ರತಿಪಾದಿಸಿದರು.

ನಗರದ ಆರ್‌ಎಂಸಿ ರಸ್ತೆಯ ಎಪಿಎಂಸಿ ಆವರಣದಲ್ಲಿ ಮ್ಯಾಮ್ಕೋಸ್‌ನ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಅವರು ಷೇರುದಾರರ ಸಭೆ ಉದ್ಘಾಟಿಸಿ ಮಾತನಾಡಿ, ಸಾಗರದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಿ ದೊಡ್ಡ ಮಟ್ಟದಲ್ಲಿ ಸಹಕಾರ ಚಳುವಳಿಯನ್ನು ನಿರ್ವಹಿಸುತ್ತಿರುವ ದೊಡ್ಡ ಸಮುದಾಯದ ಮುಂದೆ ನನ್ನ ಚಿಂತನೆಯನ್ನು ಮಂಡಿಸುತ್ತಿದ್ದೇನೆ. ಸಹಕಾರ ಕ್ಷೇತ್ರದ ಉದ್ಯೋಗಾವಕಾಶಗಳಲ್ಲಿ ಕೆಲಸ ಗಿಟ್ಟಿಸಲು 10, 15, 23 ಲಕ್ಷ ರೂ. ಕೊಟ್ಟ ಉದಾಹರಣೆಗಳಿವೆ. ಮಾಡಿದ ಕೆಲಸಕ್ಕೆ ಸಂಬಳ ಸಿಗುತ್ತದೆ. ಆದರೆ ಈ ರೀತಿ ಕೆಲಸ ಪಡೆಯಲು ಹಾಕಿದ ದುಡ್ಡಿಗೆ ನೌಕರ ಅದೇ ಸಂಸ್ಥೆಯಲ್ಲಿ ಕದಿಯದೇ ಇರುತ್ತಾನೆಯೇ ಎಂದು ಪ್ರಶ್ನಿಸಿದರು.

ಸಹಕಾರ ಕ್ಷೇತ್ರ ಸಂಪೂರ್ಣವಾಗಿ ರಾಜಕೀಯದ ಮೇಲಾಟಗಳ ಜಾಗವಾಗಿದೆ. ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ತಡೆಯಲು ಮಾಡುವ ಕುತಂತ್ರಗಳು, ಮತದಾರ ಅರ್ಹತೆ ಕಸಿದುಕೊಳ್ಳುವ ಹುನ್ನಾರಗಳು ರಾಜಕೀಯದವರನ್ನು ಬೆರಗಾಗಿಸುವಷ್ಟು ವ್ಯಾಪಕವಾಗಿವೆ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭಗೊಂಡ ಮ್ಯಾಮ್ಕೋಸ್‌ ಬೆಳೆಗಾರರ ಹಿತ ಕಾಯುವ ಕೆಲಸವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಅಡಕೆಗೆ ಸಮಸ್ಯೆ ಬಂದಾಗಲೆಲ್ಲಾ ಮ್ಯಾಮ್ಕೋಸ್‌ ಬೆಳೆಗಾರರ ರಕ್ಷಣೆಗೆ ನಿಂತಿದೆ. ಸಂದರ್ಭಾನುಸಾರ ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಡಕೆ ಬೆಳೆಗೆ ನ್ಯಾಯ ದೊರಕಿಸಿ ಕೊಡುವ ಕೆಲಸವನ್ನು ಮಾಡಿಕೊಂಡು ಬಂದಿದೆ. ಇಂದು ಶುಂಠಿಗೆ ಉತ್ತಮ ಬೆಲೆ ಬರಲು ಮಳೆ, ಕೊಳೆ ಕಾರಣವಲ್ಲ. ಮ್ಯಾಮ್ಕೋಸ್‌ ಒಳಗೊಂಡಂತೆ ನಿಯೋಗ ಕೇಂದ್ರ ಸರ್ಕಾರವನ್ನು ಭೇಟಿ ಮಾಡಿದಾಗ ಚೀನ ದೇಶದಿಂದ ಶುಂಠಿ ಆಮದು ಆಗುತ್ತಿರುವುದನ್ನು ತಡೆಯುವಂತೆ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ಮನವಿ ಪುರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಶುಂಠಿಗೆ ಉತ್ತಮ ಬೆಲೆ ಬಂದಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮ್ಯಾಮ್ಕೋಸ್‌ ಉಪಾಧ್ಯಕ್ಷ ವೈ.ಎಸ್‌.ಸುಬ್ರಹ್ಮಣ್ಯ, ಮ್ಯಾಮ್ಕೋಸ್‌ಗೆ ನೂತನ ಕಟ್ಟಡ ಬೇಕು ಎನ್ನುವ ಬೆಳೆಗಾರರ ಕನಸು ನನಸಾಗಿದೆ. ಮ್ಯಾಮ್ಕೋಸ್‌ ಷೇರುದಾರರ ಹಿತ ಕಾಯುವ ಜತೆಗೆ ಸಮಸ್ತ ಅಡಿಕೆ ಬೆಳೆಗಾರರ ಏಳ್ಗೆಗಾಗಿ ನಿರಂತರ ಪ್ರಯತ್ನ ನಡೆಸಿಕೊಂಡು ಬರುತ್ತಿದೆ. ಅಡಿಕೆ ಬೆಳೆಗಾರರು ಮನೆ ಬಾಗಿಲಿನಲ್ಲಿ ಅಡಿಕೆ ಮಾರಾಟ ಮಾಡುವುದನ್ನು ಬಿಟ್ಟು, ಎಪಿಎಂಸಿಗೆ ಬಂದು ಅಡಿಕೆ ವ್ಯವಹಾರ ನಡೆಸಬೇಕು ಎಂದರು.

ಈಗಾಗಲೆ ಅಡಿಕೆ ಹಾನಿಕಾರಕ ಎನ್ನುವ ಅಂಶವನ್ನು ತೆಗೆದು ಹಾಕುವಂತೆ ಮ್ಯಾಮ್ಕೋಸ್‌ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಪ್ರಧಾನಿಗಳಿಗೆ ಸಹ ಅಡಿಕೆ ಔಷಧಿಯ ವಸ್ತುವಾಗಿದ್ದು, ಹಾನಿಕಾರಕ ಅಲ್ಲ ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದೆ. ಕೇಂದ್ರಕ್ಕೆ ನಿಯೋಗ ಹೋಗುವಾಗ ರಾಜ್ಯ ಸರ್ಕಾರ ಮತ್ತು ರಾಜ್ಯದ ಸಂಸದರು ಮ್ಯಾಮ್ಕೋಸ್‌ಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಶೀಘ್ರದಲ್ಲಿಯೇ ಅಡಿಕೆಗೆ ಬಂದಿರುವ ಕಳಂಕ ತೊಲಗಿಸಲು ಮ್ಯಾಮ್ಕೋಸ್‌ ಎಲ್ಲ ರೀತಿಯ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ರವಿಕುಮಾರ್‌ ಎಚ್.ಎಂ., ಸಂಸ್ಥೆ ನಿರ್ದೇಶಕರಾದ ವಿರೂಪಾಕ್ಷಪ್ಪ ಜೆ., ಶಶಿಧರ ಹರತಾಳು, ವೆಂಕಪ್ಪಗೌಡ, ಮಾರ್ತಾಂಡ ಎಚ್.ಬಿ., ನರೇಂದ್ರ, ದೇವಾನಂದ ತರಿಕೆರೆ, ನಾಗೇಶ್‌ರಾವ್‌, ಚಂದ್ರಶೇಖರ್‌, ಜಯಶ್ರೀ ತೀರ್ಥಹಳ್ಳಿ, ಮಹೇಶ್‌, ಸುರೇಶ್ಚಂದ್ರ ಶೃಂಗೇರಿ, ಭೀಮರಾವ್‌, ಬಡಿಯಣ್ಣ ಇನ್ನಿತರರು ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಮತ್ತು ರಾಜೇಶ್ವರಿ ಪ್ರಾರ್ಥಿಸಿದರು. ಅಶೋಕ ನಾಯ್ಕ ಸ್ವಾಗತಿಸಿದರು. ಸೋಮಶೇಖರ ಇರುವಕ್ಕಿ ವಂದಿಸಿದರು. ಬಿ.ಎಚ್.ರಾಘವೇಂದ್ರ ನಿರೂಪಿಸಿದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.