ಪ್ರಧಾನಿ ಮೋದಿಯನ್ನು ಹೊಗಳಿದ್ದೇಕೆ?ವಿವರಣೆ ಕೊಡಿ-ಶಶಿ ತರೂರ್ ಗೆ ಕಾಂಗ್ರೆಸ್ ನೋಟಿಸ್!
Team Udayavani, Aug 27, 2019, 5:00 PM IST
ತಿರುವನಂತಪುರಂ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೇರಳ ಕಾಂಗ್ರೆಸ್ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಕ್ರಮದ ಬಗ್ಗೆ ನಂತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದೆ.
ನರೇಂದ್ರ ಮೋದಿ ಅವರನ್ನು ಯಾವ ಕಾರಣಕ್ಕೆ ಹೊಗಳಿದ್ದು ಎಂಬ ಬಗ್ಗೆ ನಾವು ಶಶಿ ತರೂರ್ ಬಳಿ ವಿವರಣೆ ಕೇಳಿದ್ದೇವೆ. ಅವರು ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಾಪ್ಪಲೈ ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉತ್ತಮ ಕೆಲಸ ಮಾಡಿದಾಗ ನಾವು ಹೊಗಳಬೇಕು. ಪದೇ, ಪದೇ ಎಲ್ಲಾ ವಿಚಾರದಲ್ಲಿಯೂ ಟೀಕಿಸುವುದು ಸರಿಯಲ್ಲ ಎಂದು ಶಶಿ ತರೂರ್ ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ತರೂರ್ ಹೇಳಿಕೆಯಿಂದ ಕೇರಳ ಕಾಂಗ್ರೆಸ್ ಅಸಮಾಧಾನಗೊಂಡಿದೆ.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್, ಅಭಿಷೇಕ್ ಮನು ಸಿಂಘ್ವಿ ಕೂಡಾ ಪ್ರಧಾನಿ ನರೇಂದ್ರ ಮೋದಿಯನ್ನು ಪದೇ, ಪದೇ ಟೀಕಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿಕೆ ನೀಡಿದ್ದರು. ಬಳಿಕ ಟ್ವೀಟ್ ಮಾಡಿದ್ದ ಶಶಿ ತರೂರ್, ನಾನು ಆರು ವರ್ಷಗಳ ಹಿಂದೆಯೇ ಹೇಳಿದ್ದೆ…ಆದರೆ ನಿಮಗೆ ಈಗ ಮನವರಿಕೆಯಾಗಿದೆ. ಒಳ್ಳೆಯ ಕೆಲಸ ಮಾಡಿದಾಗ ನಾವು ಮೋದಿಯನ್ನು ಹೊಗಳಬೇಕು. ತಪ್ಪು ಮಾಡಿದಾಗ ಟೀಕಿಸಬೇಕು. ಈ ನಿಟ್ಟಿನಲ್ಲಿ ಬಂದ ಹೇಳಿಕೆಯನ್ನು ತಾನು ಸ್ವಾಗತಿಸುವುದಾಗಿ ಉಲ್ಲೇಖಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!