ಪಾಕಿಸ್ಥಾನದ ಪರಮಾಣು ಗುಮ್ಮನಿಗೆ ನಾವು ಹೆದರುವುದಿಲ್ಲ: ಲೆಫ್ಟಿನೆಂಟ್ ಜನರಲ್ ನರಾವಣೆ


Team Udayavani, Aug 28, 2019, 8:27 AM IST

Naravane-18-8

ಕೊಲ್ಕೊತ್ತಾ: ಇತ್ತೀಚಿನ ದಿನಗಳಲ್ಲಿ ಭಾರತದ ನೆರೆ ರಾಷ್ಟ್ರ ಪಾಕಿಸ್ಥಾನ ಪದೇ ಪದೇ ಪರಮಾಣು ಅಸ್ತ್ರ ಗುಮ್ಮನನ್ನು ಭಾರತದ ವಿರುದ್ಧ ಛೂ ಬಿಡುತ್ತಿರುವುದು ಏಷ್ಯಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕಳವಳವನ್ನು ಉಂಟು ಮಾಡಿದೆ. ಆದರ ಭಾರತ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸದೇ ಜಾಗತಿಕ ಮಟ್ಟದಲ್ಲಿ ಪಾಕಿಸ್ಥಾನವನ್ನು ಕಟ್ಟಿಹಾಕುವ ತನ್ನ ರಾಜತಾಂತ್ರಿಕ ಕಾರ್ಯವನ್ನು ಮುಂದುವರೆಸಿದೆ.

ಈ ನಡುವೆ ಭಾರತೀಯ ಸೇನೆಯ ಪೂರ್ವ ವಿಭಾಗದ ಲೆಫ್ಟಿನೆಂಟ್ ಜನರಲ್ ಎಂ.ಎಂ. ನರಾವಣೆ ಅವರು ಪಾಕಿಸ್ಥಾನದ ಪರಮಾಣು ಅಸ್ತ್ರದ ಗುಮ್ಮನಿಗೆ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೆಳಿದ್ದಾರೆ. ಕೊಲ್ಕೊತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಅವರು ಈ ಮಾತುಗಳನ್ನು ಹೆಳಿದ್ದಾರೆ.

ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ತಮ್ಮ ದೇಶವನ್ನು ಉದ್ದೇಶಿಸಿ ಮಾಡಿದ ಇತ್ತೀಚಿನ ಭಾಷಣದಲ್ಲಿ ಪರಮಾಣು ಬಾಂಬ್ ದಾಳಿ ವಿಚಾರವನ್ನು ಪ್ರಸ್ತಾಪಿಸಿದ್ದರು. ‘ಭಾರತ ಮತ್ತು ಪಾಕಿಸ್ತಾನ ದೇಶಗಳ ಬಳಿ ಪರಮಾಣು ಅಸ್ತ್ರವಿದೆ. ಒಂದುವೇಳೆ ಈ ಎರಡು ದೇಶಗಳ ನಡುವೆ ಯುದ್ಧ ಸಂಭವಿಸಿದರೆ ಅದರ ಪರಿಣಾಮ ಏಷ್ಯಾ ಖಂಡದ ಮೇಲೆಲ್ಲಾ ಆಗುತ್ತದೆ’ ಎಂದು ಇಮ್ರಾನ್ ಖಾನ್ ಅವರು ಭಾರತವೂ ಸೇರಿದಂತೆ ವಿಶ್ವದ ರಾಷ್ಟ್ರಗಳಿಗೆ ತಮ್ಮಲ್ಲಿರುವ ಪರಮಾಣು ಅಸ್ತ್ರದ ಗುಮ್ಮನನ್ನು ಛೂ ಬಿಟ್ಟಿದ್ದರು.

‘ನಾವು ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಸಿದ್ಧವಾಗಿದ್ದೇವೆ ಮತ್ತು ನಾವೇನೇ ಮಾಡಿದರೂ ಸಹ ಅದು ದೀರ್ಘಕಾಲೀನ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡೇ ಯೋಜನೆ ರೂಪಿಸಿರುತ್ತೇವೆ’ ಎಂದು ಲೆಫ್ಟಿನೆಂಟ್ ಜನರಲ್ ನರಾವಣೆ ಅವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಭಿಪ್ರಾಯಪಟ್ಟರು. ‘ನಮ್ಮದು ಈಗ 1962ರಲ್ಲಿ ಇದ್ದ ಸೇನೆಯಲ್ಲ. ಇತಿಹಾಸ ಪುನರಾವರ್ತನೆ ಮಾಡಬೇಡಿ ಎಂದು ಚೀನಾ ನಮಗೆ ಕಿವಿ ಮಾತು ಹೇಳುವುದಾದರೆ, ನಾವೂ ಕೂಡ ಅವರಿಗೆ ಅದನ್ನೇ ಹೇಳಬಯಸುತ್ತೇವೆ’ ಎಂದು ಪಾಕಿಸ್ತಾನದ ಪರಮಾಪ್ತ ಚೀನಾ ದೇಶಕ್ಕೂ ಸಹ ಲೆಫ್ಟಿನೆಂಟ್ ಜನರಲ್ ಅವರು ಎಚ್ಚರಿಕೆ ನೀಡುವ ಮಾತುಗಳನ್ನಾಡಿದ್ದಾರೆ.

1962ರ ಚೀನಾ ಯುದ್ಧದಲ್ಲಿ ಉಂಟಾಗಿದ್ದು ಸೇನೆಯ ಸೋಲಲ್ಲ ಅದು ರಾಜತಾಂತ್ರಿಕ ವೈಫಲ್ಯ. ಆ ಹೋರಾಟದಲ್ಲಿ ನಮ್ಮ ಸೇನೆಯ ಎಲ್ಲಾ ವಿಭಾಗಗಳೂ ತಮಗೆ ವಹಿಸಿದ್ದ ಕೆಲಸವನ್ನು ಅಚ್ಚುಕಟ್ಟಾಗಿಯೇ ನಿರ್ಬಹಿಸಿದ್ದವು. ಆ ಬಳಿಕದ ದಿನಗಳಲ್ಲಿ ನಮ್ಮ ವೈಫಲ್ಯವನ್ನು ಗುರುತಿಸಿಕೊಂಡು ಅದನ್ನು ಸರಿಪಡಿಸಿಕೊಳ್ಳುವ ಗಂಭೀರ ಪ್ರಯತ್ನಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಡೋಕ್ಲಾಂ ವಿಚಾರದಲ್ಲಿ ಚೀನಾ ಇನ್ನೂ ಸಹ ಸಿದ್ಧತೆಯ ಕೊರತೆಯಲ್ಲಿದೆ. ಒಂದುವೇಳೆ ಇದೀಗ ಯುದ್ಧ ಸಂಭವಿಸಿದರೂ ಅದನ್ನು ಸಮರ್ಥವಾಗಿ ಎದುರಿಸಲು ಭಾರತೀಯ ಸೇನೆ ಸರ್ವ ಸನ್ನದ್ದವಾಗಿದೆ. ಇದರ ಕುರಿತಾಗಿ ಯಾರೂ ಗಾಬರಿಪಡುವ ಅಗತ್ಯವೇ ಇಲ್ಲ ಎಂದು ಲೆಫ್ಟಿನೆಂಟ್ ಜನರಲ್ ಅವರು ಹೇಳಿದರು.

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

kejriwal-2

Kejriwal ಅರ್ಜಿ ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.