ನರೇಗಲ್ಲನಲ್ಲಿ ‘ಕಡಬಡ’ ಸೋಗು ನೃತ್ಯ

•ಒಂದು ತಂಡದಲ್ಲಿ 20-40 ವೇಷಧಾರಿಗಳು •ಶ್ರಾವಣಮಾಸ ಮಂಗಳವಾರ-ಶುಕ್ರವಾರ ಮಾತ್ರ ಆಟ

Team Udayavani, Aug 28, 2019, 11:08 AM IST

gadaga-tdy-2

ನರೇಗಲ್ಲ: ಪಟ್ಟಣದ ಕಟ್ಟಿ ಬಸವೇಶ್ವರ ಓಣಿ ಜನರಿಂದ ಮಂಗಳವಾರ ಸಂಜೆ ಕಡಬಡ ಸೋಗಿನ ಮೆರವಣಿಗೆ ಜರುಗಿತು.

ನರೇಗಲ್ಲ: ಜಿಲ್ಲೆಯಲ್ಲಿ ಎಲ್ಲೂ ಕಾಣದ ಸಾಂಪ್ರದಾಯಿಕ ಜನಪದ ಶೈಲಿಯ ಆಟ ‘ಕಡಬಡ’ ಸೋಗು ಪಟ್ಟಣದಲ್ಲಿ ಚಾಲ್ತಿಯಲ್ಲಿದೆ.

ಪ್ರತಿವರ್ಷ ಶ್ರಾವಣ ಮಾಸದಲ್ಲಿ ಪಟ್ಟಣದ ವಿವಿಧ ಓಣಿಗಳಲ್ಲಿ ಮಾತ್ರ ಆಡುವ ವಿಶೇಷ ನೃತ್ಯವನ್ನು ಪ್ರದರ್ಶಿಸಲು ಕಲಾವಿದರು ತುದಿಗಾಲ ಮೇಲೆ ನಿಂತಿರುತ್ತಾರೆ. ಶ್ರಾವಣ ಮಾಸದ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಈ ಆಟ ಆಡಲಾಗುತ್ತಿದ್ದು, ಇಲ್ಲಿನ ಯುವಕರು ಮತ್ತು ಹಿರಿಯರು ನೂರಾರು ವರ್ಷಗಳಿಂದಲೂ ಈ ಆಟ ಆಡುತ್ತ ನಮ್ಮ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಶ್ರಾವಣ ಮಾಸವೆಂದರೆ ಅನೇಕ ಸಾಂಕ್ರಾಮಿಕ ಮತ್ತಿತರ ರೋಗಗಳಿಂದ ಜನರು ಬಳಲುವ ಸಾಧ್ಯತೆ ಹೆಚ್ಚು. ಬಿತ್ತನೆ ಮುಗಿಸಿದ ರೈತರು ವರುಣನ ಕೃಪೆಗಾಗಿ ಕಾದು ಕುಳಿತಿರುವ ಮಾಸವೂ ಹೌದು. ಮಳೆ ಚೆನ್ನಾಗಿ ಆಗಲಿ, ಬರುವ ಎಲ್ಲ ರೋಗಗಳು ದೂರವಾಗಲಿ ಮತ್ತು ಜನತೆಗೆ ಈ ಸಮಯದಲ್ಲಿ ಮನರಂಜನೆ ನೀಡಬೇಕೆನ್ನುವ ದೃಷ್ಟಿಯಿಂದಲೂ ಈ ಕಡಬಡ ಸೋಗನ್ನು ಆಡಲಾಗುತ್ತಿದೆ.

ಆಟ ನೋಡುವುದೇ ಸೊಗಸು: ಕಡಬಡ ಸೋಗಿನ ಒಂದು ತಂಡದಲ್ಲಿ 20ರಿಂದ 40 ವೇಷಧಾರಿಗಳಿರುತ್ತಾರೆ. ದೇವಿ, ಬ್ರಹ್ಮ, ವಿಷ್ಣು, ಮಹೇಶ್ವರ, ದೇವೇಂದ್ರ, ರಂಭೆ, ಊರ್ವಶಿ, ಮೇನಕೆ, ರಾಕ್ಷಸರು (ಕಡಬಡ), ಯಮಧರ್ಮ, ಹನುಮಂತ ಹೀಗೆ ಹತ್ತು ಹಲವು ಪೌರಾಣಿಕ ಪಾತ್ರಗಳ ವೇಷಧಾರಿಗಳು ಇರುತ್ತಾರೆ. ವಾಹನ ಮುಂದೆ ದೇವಿ ಕುಣಿತವಿದ್ದರೆ ಆಕೆಯನ್ನು ಕಾಡಲು ರಾಕ್ಷಸರು ಕಾಯುತ್ತಿರುತ್ತಾರೆ. ದೇವಿ ಅವರನ್ನು ಸಂಹರಿಸಲು ಬಂದಾಗ ಆಡುವ ಆಟ ನೋಡುವುದೇ ಒಂದು ಸೊಗಸು. ನರೇಗಲ್ಲನ ಈಟಿಯವರ ಓಣಿ, ಗುಡಿ ಓಣಿ, ಪಾಯಪ್ಪಗೌಡ್ರ ಓಣಿ, ಕಟ್ಟಿ ಬಸವೇಶ್ವರ ಓಣಿ, ಹಿರೇಮಠದ ಓಣಿ, ಹಲಗೇರಿ ಓಣಿ, ಅಂಬೇಡ್ಕರ್‌ ಓಣಿ ಸೇರಿದಂತೆ ವಿವಿಧ ಓಣಿಯ ಜನರು ಶ್ರಾವಣ ಮಾಸದಲ್ಲಿ ಈ ‘ಕಡಬಡ’ ಸೋಗನ್ನು ಆಡುತ್ತಾರೆ. ಸೋಗಿನ ಪಾತ್ರ ಧರಿಸಲು ಯುವಕರು ನಾ ಮುಂದು ತಾ ಮುಂದು ಎಂದು ಧಾವಿಸುತ್ತಾರೆ. ಈ ಸೋಗಿನ ಸೊಗಸು, ವೇಷಧಾರಿಗಳ ಉತ್ಸಾಹ, ಬಣ್ಣ ಬಳಿಯವವರ ಕಲೆ ಕುರಿತು ವರ್ಣಿಸಲು ಅಸಾಧ್ಯ. ಮತ್ತೂಬ್ಬರಿಂದ ಕಥೆಯ ರೂಪದಲ್ಲಿ ಕೇಳಿದರೆ ಇದರ ಸ್ವಾರಸ್ಯ ತಿಳಿಯುವುದಿಲ್ಲ. ಇದನ್ನು ಕಣ್ಣಾರೆ ಕಂಡಾಗ ಮಾತ್ರ ಅದರಲ್ಲಿನ ನವರಸಗಳು ಅರ್ಥವಾಗುತ್ತದೆ.

 

•ಸಿಕಂದರ ಆರಿ

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.