ಪ್ರತಿಭಟನಾಕಾರರಿಂದ ಬ್ಯಾಂಕ್‌ ವ್ಯವಹಾರಕ್ಕೆ ತಡೆ


Team Udayavani, Aug 28, 2019, 11:47 AM IST

uk-tdy-1

ಕುಮಟಾ: ಸೊಸೈಟಿ ಅಧ್ಯಕ್ಷರಿಂದ ಪ್ರತಿಭಟನಾಕಾರರು ಲಿಖೀತವಾಗಿ ಬರೆಸಿಕೊಂಡರು.

ಕುಮಟಾ: ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘದ ಗ್ರಾಹಕರು ಮತ್ತು ಆ ಭಾಗದ ರೈತರು ಮಂಗಳವಾರ ಬೆಳಗ್ಗೆ ಪುನಃ ಕೆಡಿಸಿಸಿ ಬ್ಯಾಂಕ್‌ ಕುಮಟಾ ಶಾಖೆಗೆ ಮುತ್ತಿಗೆ ಹಾಕಿ ತಮಗಾದ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ, ಕೆಲ ಗಂಟೆ ಬ್ಯಾಂಕ್‌ ವ್ಯವಹಾರಕ್ಕೆ ತಡೆಯೊಡ್ಡಿ, ಯಾವುದೇ ಬ್ಯಾಂಕ್‌ ವ್ಯವಹಾರ ನಡೆಸದಂತೆ ಪಟ್ಟು ಹಿಡಿದ ಘಟನೆ ನಡೆಯಿತು.

ಬ್ಯಾಂಕಿಗೆ ಪ್ರತಿದಿನವೂ ಬೆಳಗ್ಗೆ ಆಗಮಿಸಿ ರಾತ್ರಿ 9ರವರೆಗೂ ಪ್ರತಿಭಟನೆ ನಡೆಸುತ್ತೇವೆ. ಸಿಕ್ಕಸಿಕ್ಕವರಿಗೆ ನ‌ಮ್ಮ ಕಷ್ಟ ಹೇಳಿಕೊಳ್ಳುತ್ತೇವೆ. ಆಗಾಗ ವಿವಿಧ ಹಂತದ ಜನಪ್ರತಿನಿಧಿಗಳೂ ಬರುತ್ತಾರೆ. ಅವರೂ ಸಹ ನಮ್ಮ ಕಷ್ಟವನ್ನು ಆಲಿಸುತ್ತಾರೆ. ಆದರೆ ಪರಿಹಾರವಂತೂ ಎಳ್ಳಷ್ಟೂ ದೊರೆತಿಲ್ಲ. ನಮಗಾದ ಅನ್ಯಾಯಕ್ಕೆ ಪರಿಹಾರ ದೊರೆಯುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ. ನಾವು ಶಾಂತ ರೀತಿಯಿಂದ ಪ್ರತಿಭಟಿಸುತ್ತಿದ್ದೇವೆ ಎಂದರೆ ಮುಗ್ಧರೆಂದು ಭಾವಿಸಬೇಡಿ. ತಾಳ್ಮೆ ಕಳೆದುಕೊಂಡರೆ ಎಂತಹ ಹೋರಾಟಕ್ಕೂ ಸಿದ್ಧ ಎಂದು ಎಚ್ಚರಿಸಿದರು.

ಬಳಿಕ ಎಂದಿನಂತೆಯೇ ಬ್ಯಾಂಕಿನ ಮುಂಭಾಗದಲ್ಲೇ ಕುಳಿತು ಪ್ರತಿಭಟಿಸಿದ ನೂರಕ್ಕೂ ಅಧಿಕ ರೈತರು, ಬ್ಯಾಂಕಿನ ಎಆರ್‌ಒ ಅಥವಾ ಎಂಡಿ ಬರವವರೆಗೂ ವ್ಯವಹಾರ ನಡೆಸಲು ಬಿಡುವುದಿಲ್ಲ. ಅದೇರೀತಿ ಸೊಸೈಟಿ ಕಾರ್ಯದರ್ಶಿ ಲಕ್ಷ್ಮಣ ಪಟಗಾರ ಸ್ಥಳಕ್ಕೆ ಬರಬೇಕು. ನಮಗಾದ ಅನ್ಯಾಯಕ್ಕೆ ಪರಿಹಾರ ಒದಗಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಮಧ್ಯಾಹ್ನದ ಊಟವನ್ನೂ ತ್ಯಜಿಸಿ ಪಟ್ಟುಹಿಡಿದರು. ಜಿ.ಪಂ ಸದಸ್ಯ ಗಜಾನನ ಪೈ ಹಾಗೂ ಸಾಮಾಜಿಕ ಕಾರ್ಯಕರ್ತೆ ತಾರಾ ಗೌಡ ಸ್ಥಳಕ್ಕಾಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಮಧ್ಯಾಹ್ನದ ನಂತರ ಕೆಡಿಸಿಸಿ ಬ್ಯಾಂಕ್‌ ಎಆರ್‌ಒ ಎನ್‌.ಎನ್‌. ಹೆಗಡೆ ಬ್ಯಾಂಕಿಗೆ ಆಗಮಿಸಿದರು. ಈ ವೇಳೆ ರೈತರು ತಮಗಾದ ಅನ್ಯಾಯದ ಕುರಿತು ಎಳೆಎಳೆಯಾಗಿ ಅಳಲನ್ನು ತೋಡಿಕೊಂಡರಲ್ಲದೇ, ಮೇಲಕಾರಿಗಳು ಕಾನೂನಾತ್ಮಕವಾಗಿ ತನಿಖೆಯನ್ನು ಕೈಗೊಳ್ಳಬೇಕು. ರೈತರನ್ನು ವಂಚಿಸಿದವರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಅದೇರೀತಿ ಪಾಸ್‌ಬುಕ್‌ ಹಾಗೂ ಇನ್ನಿತರ ದಾಖಲಾತಿಗಳ ಸಮೇತ ತಮಗಾದ ಅನ್ಯಾಯದ ಕುರಿತು ವಿವರಿಸಿದರು.

ನಂತರ ಎಆರ್‌ಒ ಎನ್‌.ಎನ್‌.ಹೆಗಡೆ ಮಾತನಾಡಿ, ಬರಗದ್ದೆ ಸೊಸೈಟಿಗೆ ಆಡಳಿತ ಮಂಡಳಿಯಿದೆ. ಆಡಳಿತ ಮಂಡಳಿಗೆ ತನಿಖೆ ನಡೆಸಲು ಸಂಪೂರ್ಣ ಅಧಿಕಾರವನ್ನು ನೀಡಿದ್ದೇವೆ. ಕಮೀಟಿಯವರು ತನಿಖೆಗೆ ಸಹಕಾರ ನೀಡಬೇಕು ಮತ್ತು ಸೊಸೈಟಿ ಕಾರ್ಯದರ್ಶಿ ಲಕ್ಷ್ಮಣ ಪಟಗಾರ ಅವರನ್ನು ಸ್ಥಳಕ್ಕೆ ಕರೆಸಬೇಕು. ಇದ್ಯಾವುದೂ ಸಾಧ್ಯವಿಲ್ಲವೆಂದಾದರೆ ಆಡಳಿತ ಕಮೀಟಿಯವರೆಲ್ಲರೂ ರಾಜೀನಾಮೆ ನೀಡಿ. ಅಷ್ಟಾದರೆ, ನಾವೇ ಬ್ಯಾಂಕಿನ ವತಿಯಿಂದ ತನಿಖೆಯನ್ನು ನಡೆಸುತ್ತೇವೆ ಎಂದು ಆದೇಶಿಸಿದರು. ಬಳಿಕ ಒಂದು ಗಂಟೆ ಎಆರ್‌ಒ, ಬ್ಯಾಂಕ್‌ ಸಿಬ್ಬಂದಿ, ಸೊಸೈಟಿ ಆಡಳಿತ ಕಮಿಟಿ ಮತ್ತು ರೈತರ ಸಮ್ಮುಖದಲ್ಲಿ ಸಭೆ ನಡೆಯಿತು.

ಸಭೆಯ ನಿರ್ಣಯದ ಪ್ರಕಾರ ಸೊಸೈಟಿ ಅಧ್ಯಕ್ಷ ಮಾದೇವ ಲಿಂಗು ಗೌಡ, ಬರಗದ್ದೆ ಸೊಸೈಟಿ ಆಡಳಿತ ಮಂಡಳಿಯವರು ಇಲಾಖಾ ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಕಾರ್ಯದರ್ಶಿಯನ್ನು ಸೊಸೈಟಿಗೆ ಆ.29 ರಂದು ಕರೆಸುತ್ತೇವೆ. ಅಂದು ಸಹಕಾರಿ ಇಲಾಖೆ ತನಿಖಾಧಿಖಾರಿಗಳು ಆಗಮಿಸಿ ತನಿಖೆ ನಡೆಸಬಹುದಾಗಿದೆ. ಆಡಳಿತ ಕಮೀಟಿ ಜೊತೆಯಲ್ಲಿ ಮುಖ್ಯ ಕಾರ್ಯನಿರ್ವಾಹಕರೂ ಸಹಕಾರ ನೀಡುವಂತೆ ಅವರಿಗೆ ತಿಳಿಸಲಾಗುವುದು ಎಂದು ಲಿಖೀತವಾಗಿ ಬರೆದುಕೊಟ್ಟರು.

ಮುಖಂಡರಾದ ಜಿ.ಐ. ಹೆಗಡೆ, ವೀಣಾ ನಾಯಕ ತಲಗೇರಿ, ಪಿಎಸ್‌ಐ ಇ.ಸಿ. ಸಂಪತ್‌, ರೈತರಾದ ಎನ್‌.ಎಸ್‌. ಹೆಗಡೆ, ಎಸ್‌.ಪಿ. ಭಟ್ಟ, ಸುಬ್ರಾಯ ಭಟ್ಟ, ಗಣಪತಿ ಹೆಗಡೆ, ನಾರಾಯಣ ಮಡಿವಾಳ, ಗಣಪತಿ ಭಟ್ಟ, ಶಂಕರ ಗೌಡ, ಬೀರಾ ಗೌಡ, ಎಂ.ಆರ್‌. ಹೆಗಡೆ, ನಾಗೇಶ ಮಡಿವಾಳ ಹಾಗೂ ನೂರಾರು ರೈತರು ಹಾಜರಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಬಿಗಿ ಬಂದೋಬಸ್ತ್ ಹಮ್ಮಿಕೊಂಡಿದ್ದರು.

ಟಾಪ್ ನ್ಯೂಸ್

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.