ಬಾಡಿಗೆ ನೀಡದ ಅಂಗಡಿ ಮಳಿಗೆಗೆ ಬೀಗ


Team Udayavani, Aug 28, 2019, 1:30 PM IST

rn-tdy-1

ರಾಮನಗರದಲ್ಲಿ ಮಾಜಿ ಪಿಎಂ ದೇವೇಗೌಡ ವಾಣಿಜ್ಯ ಸಂಕೀರ್ಣದಲ್ಲಿ ಬಾಡಿಗೆ ಕರಾರು ಮಾಡಿಕೊಳ್ಳದ ಮಳಿಗೆಗಳಿಗೆ ತಾಲೂಕು ಪಂಚಾಯ್ತಿ ಅಧಿಕಾರಿಗಳು ಬೀಗ ಜಡಿದರು.

ರಾಮನಗರ: ತಾಲೂಕು ಪಂಚಾಯ್ತಿಗೆ ಸೇರಿದ ಮಾಜಿ ಪಿಎಂ ದೇವೇಗೌಡ ವಾಣಿಜ್ಯ ಸಂಕೀರ್ಣದಲ್ಲಿ ಬಾಡಿಗೆ ಕಟ್ಟದ, ಬಾಡಿಗೆ ಕರಾರು ಮಾಡಿಕೊಳ್ಳದ ಅಂಗಡಿ ಮಳಿಗೆಗಳ ಮಾಲೀಕರಿಗೆ ತಾಲೂಕು ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳ ತಂಡ ದಾಳಿ ನಡೆಸಿ ಕೆಲವು ಮಳಿಗೆಗಳಿಗೆ ಬೀಗ ಜಡಿದು, ಕೆಲವು ಅಂಗಡಿ ಮಾಲೀಕರಿಗೆ ಅಂತಿಮ ನೋಟಿಸ್‌ ಜಾರಿ ಮಾಡಿದರು.

ಏಳು ದಿನಗಳ ಒಳಗೆ ಸಕಾರಣ ನೀಡಿ, ಕಾನೂನು ಪ್ರಕಾರ ಬಾಡಿಗೆ ಒಪ್ಪಂದ ಮಾಡಿಕೊಳ್ಳುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದಿದ್ದರೆ, ಅಂತಹ ಅಂಗಡಿಯನ್ನು ಪುನಃ ಹರಾಜು ಪ್ರಕ್ರಿಯೆಗೆ ಒಳಪಡಿಸುವುದಾಗಿ ಅಧ್ಯಕ್ಷರು ಹಾಗೂ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಮೂಲ ಸೌಕರ್ಯ ಕಲ್ಪಿಸಿದ್ದೆವು: ಈ ವೇಳೆ ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ನಗರದ ಖಾಸಗಿ ಬಸ್‌ ನಿಲ್ದಾಣದ ಬಳಿ 84 ಮಳಿಗೆಗಳಿರುವ ವಾಣಿಜ್ಯ ಸಂಕೀರ್ಣವನ್ನು ತಾಲೂಕು ಪಂಚಾಯ್ತಿ 9 ವರ್ಷಗಳ ಹಿಂದೆ ನಿರ್ಮಿಸಿದೆ. ಹರಾಜು ಪ್ರಕ್ರಿಯೆಲ್ಲಿ ಅಂಗಡಿಗಳನ್ನು ಪಡೆದುಕೊಂಡ ಮಾಲೀಕರು, ಮೂಲ ಸೌಕರ್ಯಗಳನ್ನು ಕಲ್ಪಿಸದ ಹೊರತು ತಾವು ಬಾಡಿಗೆ ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಕಳೆದ ವರ್ಷ ತಾಲೂಕು ಪಂಚಾಯ್ತಿ ನಿಧಿಯಲ್ಲಿ ಸುಮಾರು 90 ಲಕ್ಷ ರೂ. ವೆಚ್ಚ ಮಾಡಿ ಶೌಚಾಲಯ, ಮಳೆ ನೀರು, ಚರಂಡಿ ಹೀಗೆ ಹಲವಾರು ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಟ್ಟಿದ್ದೆವು ಎಂದು ತಿಳಿಸಿದರು.

ನೋಟಿಸ್‌ ಜಾರಿ ಮಾಡಿದರು ಸ್ಪಂದಿಸಿಲ್ಲ: ಸೌಲಭ್ಯ ಕಲ್ಪಿಸಿದರು ಸಹ ಅಂಗಡಿ ಮಾಲೀಕರು ಬಾಡಿಗೆ ಪಾವತಿ ಮಾಡುತ್ತಿರಲಿಲ್ಲ. ಬಾಡಿಗೆ ಪಾವತಿಸುವಂತೆ ಮತ್ತು ಕರಾರು ಮಾಡಿಕೊಳ್ಳುವಂತೆ ಪದೇ ಪದೆ ಮಾಡಿಕೊಂಡ ಮನವಿ ಮತ್ತು ನೋಟಿಸ್‌ ಜಾರಿ ಮಾಡಿದರು ಸ್ಪಂದಿಸಿರಲಿಲ್ಲ. ಹೀಗಾಗಿ ಒಂದು ವಾರದ ಮುಂಚೆ ಮತ್ತೆ ನೋಟಿಸ್‌ ಜಾರಿ ಮಾಡಿದ್ದಾಗಿ, ಅದಕ್ಕೂ ಯಾರು ಜಗ್ಗದ ಕಾರಣ ಸ್ಥಳಕ್ಕೆ ಭೇಟಿ ಕೊಟ್ಟಿರುವುದಾಗಿ ತಿಳಿಸಿದರು.

ವಾಣಿಜ್ಯ ಸಂಕೀರ್ಣದ ಮಳಿಗೆಗಳಿಂದ ಪಂಚಾಯ್ತಿಗೆ ಸುಮಾರು 18 ಲಕ್ಷ ರೂ. ಮುಂಗಡ ಹಣ ಬಾಕಿ ಬರಬೇಕಾಗಿದೆ. ಬಾಡಿಗೆ ಒಪ್ಪಂದ ಮಾಡಿಕೊಂಡವರು ಸಹ ಬಾಡಿಗೆ ಬಾಕಿ ಉಳಿಸಿಕೊಂಡ್ದಿದಾರೆ. ಇಂತಹ ಮಳಿಗೆಗಳಿಂದ ಸುಮಾರು 8 ಲಕ್ಷ ರೂ. ಬರಬೇಕಾಗಿದೆ. ಅಂತಹವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಪ್ಪಂದವನ್ನೇ ಮಾಡಿಕೊಳ್ಳದ ಮಳಿಗೆಗಳಿಗೆ ಬೀಗ ಜಡಿಯಲಾಗಿದೆ ಎಂದು ತಿಳಿಸಿದರು.

ಸಬ್‌ ಲೀಸ್‌ ಕೊಟ್ಟು ಸಂಪಾದನೆ!: ಕೆಲವು ಮಾಲೀಕರು ತಮ್ಮ ಅಂಗಡಿಗಳನ್ನು ಬೇರೊಬ್ಬರಿಗೆ ಬಾಡಿಗೆಗೆ (ಸಬ್‌ ಲೀಸ್‌) ಕೊಟ್ಟಿರುವ ಬಗ್ಗೆ ದೂರುಗಳಿವೆ. ತಾಲೂಕು ಪಂಚಾಯ್ತಿಗೆ ಮಾಸಿಕವಾಗಿ ಪಾವತಿಸಬೇಕಾದ 1800 ರೂ. ಮಾಸಿಕ ಬಾಡಿಗೆಗಿಂತ ಹಲವಾರು ಪಟ್ಟು ಹೆಚ್ಚಿನ ಮೊತ್ತಕ್ಕೆ ಬಾಡಿಗೆಗೆ ಕೊಟ್ಟಿದ್ದಾರೆ. ಆದರೂ ಬಾಡಿಗೆ ಕೊಟ್ಟಿಲ್ಲ. ಇಂತಹ ಪ್ರಕರಣಗಳ ಬಗ್ಗೆ ಸದ್ಯದಲ್ಲೇ ನಡೆಯುವ ಪಂಚಾಯ್ತಿಯ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ಸ್ವಚ್ಛತೆ ಮರೀಚಿಕೆ: ಬಾಡಿಗೆ, ಮುಂಗಡ ಕೇಳಿದ ಅಧಿಕಾರಿಗಳು ಮತ್ತು ತಾಪಂ ಸದಸ್ಯರ ವಿರುದ್ಧ ಕೆಲವು ಮಾಲೀಕರು ವಾಗ್ವಾದಕ್ಕಿಳಿದರು. ಕೆಲವರು ಮಾಲೀಕರು ತಾವು ಬಾಡಿಗೆ ಕರಾರಿಗೆ ಸಹಿ ಮಾಡಿಕೊಟ್ಟಿರುವುದಾಗಿ, ಆದರೆ ತಾಪಂ ಅಧಿಕಾರಿಗಳೇ ನಿರ್ಲಕ್ಷ್ಯವಸಿದ್ದರಿಂದ ಬಾಡಿಗೆ ಪಾವತಿಸಿಲ್ಲ ಎಂದು ಆರೋಪಿಸಿದರು. ಈ ವಿಚಾರ ತಿಳಿದ ಅಧ್ಯಕ್ಷರು ಅಧಿಕಾರಿಗಳನ್ನು ಸಹ ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ವಾಣಿಜ್ಯ ಸಂಕೀರ್ಣದಲ್ಲಿ ಸ್ವಚ್ಛತೆ ಇಲ್ಲ. ಸಂಕಿರ್ಣದ ಹಿಂಭಾಗದಲ್ಲಿರುವ ಮಳಿಗೆಗಳ ಬಳಿ ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಿದೆ. ಸಂಕೀರ್ಣದಲ್ಲಿ ನಿರ್ವಹಣೆಯೇ ಇಲ್ಲ ಎಂದು ಮಾಲೀಕರು ಏರು ದನಿಯಲ್ಲೇ ದೂರಿದರು. ಸಂಕೀರ್ಣ ನಿರ್ಮಿಸುವ ವೇಳೆ ತಾವು 4ರಿಂದ 5 ಲಕ್ಷ ರೂ. ಮುಂಗಡ ಪಾವತಿಸಿರುವುದಾಗಿ ಆ ಹಣದ ಬಗ್ಗೆ ಕೆಲವು ಮಾಲೀಕರು ಪ್ರಶ್ನಿಸಿದರು.

ಈ ವೇಳೆ ಇಒ ಬಾಬು, ಸಾಯಿ ಸಮಿತಿ ಅಧ್ಯಕ್ಷ ಪ್ರಕಾಶ್‌, ತಾಪಂ ಮಾಜಿ ಅಧ್ಯಕ್ಷ ಡಿ.ಎಂ.ಮಹದೇವಯ್ಯ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.