ಬೇಕಾಬಿಟ್ಟಿ ಕಾಮಗಾರಿಗೆ ಸಿಡಿಮಿಡಿ

ಅಧಿಕಾರಿಗಳು-ಗುತ್ತಿಗೆದಾರರರಿಗೆ ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ ತರಾಟೆ

Team Udayavani, Aug 28, 2019, 3:20 PM IST

28-Agust-34

ರಾಯಚೂರು: ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಕಲಬುರಗಿ ವಿಭಾಗೀಯ ಆಯುಕ್ತ ಸುಭೋದ್‌ ಯಾದವ್‌ ರನ್‌ ಟ್ರ್ಯಾಕ್‌ ಪರಿಶೀಲಿಸಿದರು.

ರಾಯಚೂರು: ಜಿಲ್ಲಾ ಕ್ರೀಡಾಂಗಣ ಕಾಮಗಾರಿಯನ್ನು ಬೇಕಾಬಿಟ್ಟಿ ಮಾಡಿರುವ ಜತೆಗೆ ನಿಗದಿತ ಅವಧಿ ಮುಗಿದರೂ ಕಾಮಗಾರಿ ಪೂರ್ಣಗೊಳ್ಳದ್ದಕ್ಕೆ ಅಧಿಕಾರಿಗಳು, ಗುತ್ತಿಗೆದಾರರನ್ನು ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್‌ ಮಂಗಳವಾರ ತರಾಟೆಗೆ ತೆಗೆದುಕೊಂಡರು.

ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ ಅವರು, ಎಲ್ಲ ಕಡೆ ಸಿಂಥೆಟಿಕ್‌ ಟ್ರ್ಯಾಕ್‌ಗಳನ್ನು ನಿರ್ಮಿಸುತ್ತಿದ್ದರೆ. ನೀವಿನ್ನು ಹಳೇ ಕಾಲದಲ್ಲೇ ಬೂದಿ ಬಳಸಿ ನಿರ್ಮಿಸಿದ್ದೀರಿ. ಇದನ್ನು ಮಾಡಿದ ಗುತ್ತಿಗೆದಾರರಿಗೆ ಹಣ ಪಾವತಿಸದಂತೆ ಸೂಚಿಸಿದರು.

ಕಾಲಾವಧಿ ಮುಗಿದರೂ ಇನ್ನೂ ಕೆಲಸ ಮುಗಿದಿಲ್ಲ ಎಂದರೆ ಏನರ್ಥ. ನಿಮಗೆ ದುಡ್ಡಿನ ಕೊರತೆ ಇದ್ದರೆ ಹೇಳಬೇಕು. ನಮ್ಮಲ್ಲೂ ಹಣವಿಲ್ಲವಾದರೆ ಸರ್ಕಾರಕ್ಕೆ ಪತ್ರ ಬರೆದು ಹಣ ತರಬಹುದು. ಆದರೆ, ಈ ರೀತಿ ಬೇಕಾಬಿಟ್ಟಿ ಕೆಲಸ ಯಾಕೆ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.

ಕ್ರೀಡಾಂಗಣದ ನಿರ್ಮಾಣದ ಕಾರ್ಯ ಸಂಪೂರ್ಣ ಅವೈಜ್ಞಾನಿಕವಾಗಿದೆ. ಎರಡು ದಿನದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರರ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಎಚ್ಕೆಆರ್‌ಡಿಬಿ ಅನುದಾನದಡಿ ಕಾಮಗಾರಿ ಕೈಗೊಂಡಿದ್ದು, ಮನಸೋಇಚ್ಛೆ ಕೆಲಸ ಮಾಡಿರುವುದಕ್ಕೆ ಕಾಮಗಾರಿ ಹಳಿ ತಪ್ಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

13 ಎಕರೆ ಪ್ರದೇಶದಲ್ಲಿ 10 ಎಕರೆ ಪ್ರದೇಶ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸುಪರ್ದಿಯಲ್ಲಿದೆ. ಉಳಿದ 3 ಎಕರೆಯಲ್ಲಿ ಎರಡು ಎಕರೆ ಪೊಲೀಸ್‌ ಇಲಾಖೆ ವ್ಯಾಪ್ತಿಯಲ್ಲಿದ್ದು, ಇನ್ನುಳಿದ ಒಂದು ಎಕರೆ ಪ್ರದೇಶ ಒತ್ತುವರಿಯಾಗುತ್ತಿದೆ ಎಂಬ ಮಾಹಿತಿ ಇದೆ. ಅದನ್ನು ಸರ್ವೇ ಮಾಡಲಾಗುವುದು ಎಂದರು.

ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಗೆ ಮಳೆ ನೀರು ಬರುವಂತೆ ಮಾಡಲಾಗಿದೆ. ಕೆಳಗೆ ಕುಳಿತ ಪ್ರೇಕ್ಷಕರಿಗೆ ಮಳೆ ನೀರು ಬೀಳುವಂತೆ ಮಾಡಲಾಗಿದೆ. ಶೆಡ್‌ನ‌ ಶೀಟ್ ಹಿಂದಕ್ಕೆ ಹಾಕಬೇಕು ಎಂದರು. ಬಳಿಕ ಶಟಲ್ ಕೋರ್ಟ್‌ ಮತ್ತು ಕಬಡ್ಡಿ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿ ತ್ವರಿತಗತಿಯಲ್ಲಿ ಕೆಲಸ ಮಾಡಿ ಎಂದು ಸೂಚಿಸಿದರು.

ಈ ವೇಳೆ ಬ್ಯಾಡ್ಮಿಂಟನ್‌ ಸಂಘಟನೆ ಸದಸ್ಯರು ಕ್ರೀಡಾಂಗಣದ ಅವ್ಯವಸ್ಥೆ ಬಗ್ಗೆ ಸಾಕಷ್ಟು ದೂರು ನೀಡಿದರು. ಕ್ರೀಡಾಂಗಣ ಪಕ್ಕದ ರೈಲ್ವೆ ಟ್ರ್ಯಾಕ್‌ ಬದಿಯಲ್ಲಿನ ಜಾಗ ಖಾಲಿಯಿದ್ದು, ಅದರ ಮಾಲೀಕರ ವಿವರ ಪಡೆಯಿರಿ. ಸ್ಥಳದ ಮಾಲೀಕರಿಗೆ ದಾಖಲೆ ಸಲ್ಲಿಸಲು ತಿಳಿಸಲು ಸೂಚಿಸಿ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.

ಟಾಪ್ ನ್ಯೂಸ್

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.