ಹಳೆ ಚಾಳಿ ಬಿಡಬೇಕು, ಇಲ್ಲ ಅಂದ್ರೆ ಕಷ್ಟವಾಗುತ್ತೆ


Team Udayavani, Aug 28, 2019, 3:54 PM IST

28-Agust-36

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ರೌಡಿಶೀಟರ್‌ಗಳ ವಿಚಾರಣೆ ನಡೆಸಿದರು.

ದಾವಣಗೆರೆ: ಏನ್‌ ನಿನ್‌ ಹೆಸರು, ಹಳೆ ಚಾಳಿ ಬಿಟ್ಟಿದ್ದೀಯಾ ಹೆಂಗೆ, ಈಗ ಏನ್‌ ಮಾಡ್ತಿದಿಯಾ, ಹಳೆ ಚಾಳಿ ಬಿಡಬೇಕು, ಇಲ್ಲ ಅಂದ್ರೆ ನಿಂಗೆ ಕಷ್ಟವಾಗುತ್ತೆ. ಇಲ್ಲಿ ಸುಮ್ನೆ ಇರೋಂಗೆ ಇದ್ದು, ಹೋದ ಮೇಲೆ ಏನಾದ್ರೂ ಬಾಲ ಬಿಚ್ಚಿದ್ರೆ ಬೇರೆನೇ ಅಸ್ತ್ರ ಬಳಸಬೇಕಾಗುತ್ತೆ…

ಇದು ಮಂಗಳವಾರ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ನಡೆದ ರೌಡಿಶೀಟರ್‌ಗಳ ಪೆರೇಡ್‌ನ‌ಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಕೆಲವರಿಗೆ ನೀಡಿದ ಖಡಕ್‌ ವಾರ್ನಿಂಗ್‌.

ಹಳೆ ಚಟುವಟಿಕೆ ಬಿಟ್ಟು ಮರ್ಯಾದೆಯಿಂದ ಇರಬೇಕು. ಮತ್ತೆ ಏನಾದರೂ ಹಳೆ ಚಟುವಟಿಕೆ ಮಾಡಿದ್ದು ಗೊತ್ತಾದರೆ ಸಾಕು. ಇಲಾಖೆ ಏನು ಮಾಡಬೇಕೋ ಅದನ್ನು ಖಂಡಿತವಾಗಿಯೂ ಮಾಡುತ್ತದೆ ಎಂದು ಕೆಲವರಿಗೆ ನೇರವಾಗಿಯೇ ಎಚ್ಚರಿಕೆ ನೀಡಿದರು.

ಪೆರೇಡ್‌ನ‌ಲ್ಲಿ ವಿದ್ಯಾರ್ಥಿಯೊಬ್ಬ ಇರುವುದನ್ನ ಕಂಡು, ಏನು ಕೇಸ್‌ ಇದೆ. ಯಾಕೆ ಗಲಾಟೆ ಮಾಡಿದ್ದೆ. ರೌಡಿ ಶೀಟರ್‌ ಪಟ್ಟಿಯಲ್ಲಿ ಇದ್ದರೆ ಮುಂದೆ ಎಲ್ಲದಕ್ಕೂ ತೊಂದರೆ ಆಗುತ್ತದೆ. ಗೊತ್ತಾಯ್ತಾ. ಎಲ್ಲಾ ಬಿಟ್ಟು ಒಳ್ಳೆಯವನಾಗಿ ಇರಬೇಕು ಎಂದು ಸಲಹೆ ನೀಡಿದರು.

ಕೆಲವರು ನಮ್ಮ ಮೇಲೆ ಹಳೆಯ ಕೇಸ್‌ ಇವೆ. ಈಗ ಎಲ್ಲವನ್ನೂ ಬಿಟ್ಟು ಕೆಲಸ ಮಾಡಿಕೊಂಡು ಇದೀವಿ. ಯಾವ ಗಲಾಟೆಗೂ ಹೋಗೋದಿಲ್ಲ ಎಂದರು. ಇಲ್ಲಿ ಬಹಳ ಸೈಲೆಂಟ್ ಆಗಿ ಇದ್ದು, ಹೋದ ಮೇಲೆ ಮತ್ತೆ ಅದೇ ಹಳೆಯ ಕೆಲಸ ಮಾಡಬಾರದು ಎಂದು ಎಚ್ಚರಿಸಿದರು.

16 ವರ್ಷದ ಹಿಂದೆ ಹೋಳಿ ಟೈಮಲ್ಲಿ ಹೆಣ್ಣು ಮಕ್ಕಳ ಮೇಲೆ ಬಣ್ಣ ಹಾಕಿರೋ ಕೇಸ್‌ ಇದೆ. ನಮ್‌ ತಾಯಾಣೆ ಅವತ್ತಿನಿಂದ ಯಾರ ತಂಟೆಗೂ ಹೋಗಿಲ್ಲ, ಹಳೆಯ ಕೇಸ್‌ ಕ್ಲೋಸ್‌ ಮಾಡಿಸಿ ಸರ್‌ ಎಂದು ಒಬ್ಟಾತ ಕೇಳಿಕೊಂಡಾಗ ನೋಡೋಣ ಎಂದು ಹೇಳಿದರು.

ವಯೋವೃದ್ಧರೊಬ್ಬರು ಸಹ ರೌಡಿ ಪೆರೇಡ್‌ನ‌ಲ್ಲಿ ಇರುವುದನ್ನ ಕಂಡು, ವಯಸ್ಸಾಗಿದೆ. ಇನ್‌ ಮೇಲಾದ್ರೂ ಚೆನ್ನಾಗಿ ಇರೋದು ಕಲೀಬೇಕು. ಗೊತ್ತಾಯ್ತ ಎಂದು ತಿಳಿಸಿದ ಜಿಲ್ಲಾ ರಕ್ಷಣಾಧಿಕಾರಿ ಸಂಬಂಧಿತ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡರು.

ಗಾಂಧಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್‌ನೊಬ್ಬನ ಮೊಬೈಲ್ ಪಡೆದುಕೊಂಡು ಪರಿಶೀಲನೆ ನಡೆಸಿದರು. ಯಾವ ಯಾವ ಆ್ಯಪ್‌ ಹಾಕೊಂಡಿದಿಯಾ ಎಂದು ಪ್ರಶ್ನಿಸಿದರು.

ಜೂಜಾಟದ ಪ್ರಕರಣ ಒಳಗೊಂಡಂತೆ ಇತರೆ ಕೇಸ್‌ ಹೊಂದಿರುವನಿಗೆ ಇನ್ನೂ ಜೂಜು ಆಡ್ತಿದಿಯಾ, ಇಲ್ಲ ಬಿಟ್ಟಿದಿಯಾ. ಎಲ್ಲನೂ ಬಿಡಬೇಕು ಎಂದರು.

ದಾವಣಗೆರೆಯಲ್ಲಿ ನಡೆದ ಕೊಲೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಪೆರೇಡ್‌ನ‌ಲ್ಲಿ ಇದ್ದರು. ಇನ್ನು ಮೇಲೆ ಸುಮ್ಮನೆ, ಮರ್ಯಾದೆಯಿಂದ ಇರಬೇಕು. ಇಲ್ಲ ಎಂದರೆ ನಿಮಗೆ ಕಷ್ಟ. ಮತ್ತೆ ಒಳಕ್ಕೆ ಕಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಪೆರೇಡ್‌ ನಂತರ ಪುನಃ ಕಚೇರಿಗೆ ಕರೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಎಂ. ರಾಜೀವ್‌, ಗ್ರಾಮಾಂತರ ಉಪ ವಿಭಾಗ ಉಪಾಧೀಕ್ಷಕ ಮಂಜುನಾಥ್‌ ಕೆ. ಗಂಗಲ್, ಡಿಸಿಐಬಿ ಇನ್ಸ್‌ಪೆಕ್ಟರ್‌ ಲಕ್ಷ್ಮಣ್‌ನಾಯ್ಕ, ವಿವಿಧ ಠಾಣಾ ಪಿಎಸ್‌ಐಗಳಿದ್ದರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.