ನೆರೆ: ಶಾಲಾ ಮಕ್ಕಳ 15 ಲಕ್ಷ ಪುಸ್ತಕ ನಾಶ


Team Udayavani, Aug 29, 2019, 5:12 AM IST

school

ಬೆಂಗಳೂರು: ಪ್ರವಾಹ ಮತ್ತು ಭಾರೀ ಮಳೆಯಿಂದ ಜನಸಾಮಾನ್ಯರ ಬದುಕಷ್ಟೇ ಬೀದಿಗೆ ಬಂದಿಲ್ಲ, ಶಾಲಾ ಮಕ್ಕಳ ಭವಿಷ್ಯಕ್ಕೂ ಮಾರಕವಾಗಿದೆ. ರಾಜ್ಯದ 17 ಜಿಲ್ಲೆಗಳ ಸಾವಿರಾರು ಶಾಲೆಗಳು ಮಳೆಯಿಂದ ಹಾನಿ ಗೊಳಗಾಗಿದ್ದು, ವಿದ್ಯಾರ್ಥಿಗಳ 15 ಲಕ್ಷಕ್ಕೂ ಹೆಚ್ಚು ಪುಸ್ತಕಗಳೂ ನಾಶವಾಗಿವೆ.

ಆದರೆ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲು ಹೊಸದಾಗಿ ಮುದ್ರಣ ಕೆಲಸವನ್ನು ಇನ್ನೂ ಶುರು ಮಾಡಿಲ್ಲ!

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಯಾದಗಿರಿ, ಕೊಪ್ಪಳ, ರಾಯಚೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ ಸೇರಿ 17 ಜಿಲ್ಲೆಗಳಲ್ಲಿ ಪ್ರವಾಹ ಬಾಧಿಸಿದೆ. ಇದರಿಂದಾಗಿ ಶಾಲಾ ಮಕ್ಕಳು ಪಠ್ಯ ಪುಸ್ತಕಗಳ ಜತೆಗೆ ಬ್ಯಾಗ್‌, ಇನ್ನಿತರ ಪರಿಕರಗಳನ್ನೂ ಕಳೆದುಕೊಂಡಿದ್ದಾರೆ.

ಆರಂಭವಾಗದ ಮುದ್ರಣ
ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ ಇದುವರೆಗೆ 11ರಿಂದ 12 ಲಕ್ಷ ಪುಸ್ತಕ ಮುದ್ರಣಕ್ಕೆ ಬೇಡಿಕೆ ಬಂದಿದೆ. ಎಲ್ಲ ಜಿಲ್ಲೆಗಳಿಂದ ಸೂಕ್ತ ಸಂಖ್ಯೆಯ ಬೇಡಿಕೆ ಬಂದ ಬಳಿಕವಷ್ಟೇ ಮುದ್ರಣಕ್ಕೆ ಸೂಚನೆ ನೀಡಲಾಗುತ್ತದೆ. ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ (ಎಸ್‌ಎಟಿಎಸ್‌) ಮೂಲಕ ಬೇಡಿಕೆ ಪಡೆಯದೆ ಆಫ್ಲೈನ್‌ ಮೂಲಕ ಪಡೆಯುತ್ತಿರುವುದರಿಂದ ಟೆಂಡರ್‌ ಪ್ರಕ್ರಿಯೆ ಇಲ್ಲದೆ ಈ ಹಿಂದೆ ಪುಸ್ತಕ ಮುದ್ರಿಸಿಕೊಟ್ಟಿರುವ ಮುದ್ರಕರಿಗೆ ಇದನ್ನು ವಹಿಸಲು ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.

ಹಳೇ ಪುಸ್ತಕ ಹಂಚಿಕೆ
ಮುದ್ರಣ ಪ್ರಕ್ರಿಯೆ ಶುರುವಾಗದೇ ಇರುವುದ ರಿಂದ ಬೇರೆ ಬೇರೆ ವರ್ಷಗಳಲ್ಲಿ ಜಿಲ್ಲಾ ಕೇಂದ್ರದಲ್ಲಿ ಉಳಿಕೆಯಾಗಿರುವ ಪುಸ್ತಕಗಳನ್ನು ಹಂಚಿಕೆ ಮಾಡಲು ಕ್ರಮ ತೆಗೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಬೇರೆ ಜಿಲ್ಲೆಗಳಿಂದ 3 ಲಕ್ಷ ಪುಸ್ತಕ
ಜಿಲ್ಲಾ ಉಪನಿರ್ದೇಶಕರು ಆಯಾ ಜಿಲ್ಲೆಗಳಲ್ಲಿ ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರಿಂದ ನಾಶವಾಗಿರುವ ಪಠ್ಯಪುಸ್ತಕದ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಸೇರಿ 15 ಲಕ್ಷಕ್ಕೂ ಅಧಿಕ ಪುಸ ¤ಕಗಳು ನಾಶವಾಗಿರುವ ಮಾಹಿತಿ ಜಿಲ್ಲಾ ಉಪ ನಿರ್ದೇಶಕರ ಮೂಲಕ ಇಲಾಖೆಗೆ ಲಭ್ಯವಾಗಿದೆ. ಅದರಲ್ಲಿ ಸುಮಾರು 3 ಲಕ್ಷದಷ್ಟು ಪುಸ್ತಕಗಳನ್ನು ಬೇರೆ ಜಿಲ್ಲೆಗಳಿಂದ ವ್ಯವಸ್ಥೆ ಮಾಡಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸದ್ಯ ಬಂದಿರುವ ಮಾಹಿತಿ ಪ್ರಕಾರ ಸುಮಾರು 11ರಿಂದ 12 ಲಕ್ಷ ಪುಸ್ತಕ ಮುದ್ರಿಸಬೇಕಾಗು ತ್ತದೆ. ಈಗಾಗಲೇ ಮುದ್ರಿಸಿ ನೀಡಿ ರುವ ಮುದ್ರಕರ ಮೂಲಕವೇ ಈ ಪುಸ್ತಕಗಳನ್ನು ಮುದ್ರಿ ಸಲು ಮನವಿ ಮಾಡ ಲಿದ್ದೇವೆ.
– ಕೆ.ಜಿ. ರಂಗಯ್ಯ, ಉಪನಿರ್ದೇಶಕ, ಕರ್ನಾಟಕ ಪಠ್ಯಪುಸ್ತಕ ಸಂಘ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.