ಕತ್ತಲ ಬದುಕಿನಲ್ಲಿ ತ್ರಿಕೋನ ಪ್ರೇಮ

ಭಾಗ್ಯರಾಜ ಮಹೇಶ್‌ ಮತ್ತೆ ಹೀರೋ...

Team Udayavani, Aug 30, 2019, 5:58 AM IST

f-26

ಸುಮಾರು ನಾಲ್ಕು ವರ್ಷಗಳ ಹಿಂದೆ ‘ಭಾಗ್ಯರಾಜ್‌’ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದ ನಟ ಲೂಸ್‌ಮಾದ ಯೋಗಿ ಸೋದರ ಮಹೇಶ್‌ ಈಗ ‘ತಮಸ್‌’ ಎನ್ನುವ ಮತ್ತೂಂದು ಚಿತ್ರದ ಮೂಲಕ ನಾಯಕನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕೆಲ ತಿಂಗಳಿನಿಂದ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿದ್ದ ‘ತಮಸ್‌’ ಚಿತ್ರತಂಡ, ಇತ್ತೀಚೆಗೆ ಚಿತ್ರದ ಮುಹೂರ್ತವನ್ನು ಆಚರಿಸಿಕೊಂಡು ಚಿತ್ರೀಕರಣಕ್ಕೆ ಹೊರಟಿದೆ.

ಅಂದಹಾಗೆ, ‘ತಮಸ್‌’ ಚಿತ್ರದಲ್ಲಿ ನಾಯಕ ನಟ ಮಹೇಶ್‌ ಅಂಧ ಯುವಕನಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ‘ಅನಾಥ ಆಶ್ರಮದಲ್ಲಿ ಬೆಳೆದ ಹುಡುಗ ಹೇಗೆ ಸ್ವಾವಲಂಭಿಯಾಗಿ ತನ್ನ ಬದುಕನ್ನು ಕಟ್ಟಿಕೊಳ್ಳುತ್ತಾನೆ ಅನ್ನೋದು ನನ್ನ ಪಾತ್ರ. ಇದರ ಜೊತೆಗೆ ನವಿರಾದ ಲವ್‌ಸ್ಟೋರಿಯೊಂದು ಚಿತ್ರದಲ್ಲಿ ಬರುತ್ತದೆ. ಮೊದಲ ಬಾರಿಗೆ ಅಂಧ ಯುವಕನಾಗಿ ಕಾಣಿಸಿಕೊಳ್ಳುತ್ತಿರುವುದರಿಂದ, ಪಾತ್ರಕ್ಕೆ ಒಂದಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪಾತ್ರದ ಬಗ್ಗೆ ವಿವರಣೆ ಕೊಡುತ್ತಾರೆ ಮಹೇಶ್‌.

ಇನ್ನು ‘ತಮಸ್‌’ ಚಿತ್ರ ವಿಜಯ ಲಕ್ಷಿ ್ಮೕ ಮಂಜುನಾಥ ರೆಡ್ಡಿ ಅವರ ‘ಕತ್ತಲು’ ಕಾದಂಬರಿ ಆಧಾರಿತವಾಗಿದ್ದು, ಈ ಹಿಂದೆ ‘ತಾಂಡವ’, ‘ರಾಮಸೇತು’ ಚಿತ್ರಗಳನ್ನು ನಿರ್ದೇಶಿಸಿದ್ದ, ಸ್ವಾತಿ ಅಂಬರೀಶ್‌ ಈ ಚಿತ್ರದ ನಿರ್ಮಾಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಸ್ವಾತಿ ಅಂಬರೀಶ್‌, ‘ತಮಸ್‌ ಅಂದ್ರೆ ಸಂಸ್ಕೃತದಲ್ಲಿ ಕತ್ತಲು ಎಂಬ ಅರ್ಥವಿದೆ. ಚಿತ್ರದಲ್ಲಿ ಕೂಡ ಕಥಾ ನಾಯಕ ಅಂಧನಾಗಿರುತ್ತಾನೆ. ಆತನ ಬದುಕಿನಲ್ಲಿ ಏನೇನು ನಡೆಯುತ್ತದೆ ಅನ್ನೋದೇ ಚಿತ್ರದ ಒಂದು ಎಳೆ. ಜೊತೆಗೆ ಚಿತ್ರದಲ್ಲಿ ತ್ರಿಕೋನ ಪ್ರೇಮಕಥೆ ಇದೆ. ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಚಿತ್ರದ ಕಥೆ ನಡೆಯುತ್ತದೆ. ಮುಂದಿನ ವರ್ಷದ ಸಂಕ್ರಾಂತಿ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಚನೆ ಇದೆ’ ಎಂದು ವಿವರಣೆ ಕೊಡುತ್ತಾರೆ.

ಉಳಿದಂತೆ ‘ತಮಸ್‌’ ಚಿತ್ರದಲ್ಲಿ ಅಮೃತಾ ಗೌಡ, ರವಿಕುಮಾರ್‌, ಟೆನ್ನಿಸ್‌ ಕೃಷ್ಣ, ಸೋನಂ ರೈ, ಅಶ್ವಿ‌ನಿಗೌಡ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು, ಅನಂತ ಆರ್ಯನ್‌ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಪವನ್‌ ಕುಮಾರ್‌ ಛಾಯಾಗ್ರಹಣವಿದೆ. ಚಿಕ್ಕಬಳ್ಳಾಪುರ, ದೇವನಹಳ್ಳಿ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್‌ಗೆ ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಒಟ್ಟಾರೆ ‘ತಮಸ್‌’ ಮೂಲಕ ಮತ್ತೆ ರೀ-ಎಂಟ್ರಿ ಕೊಡುತ್ತಿರುವ ಮಹೇಶ್‌, ಈ ಬಾರಿಯಾದರೂ ಗೆಲುವಿನ ನಗೆ ಬೀರುತ್ತಾರಾ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.