ಪ್ರೀತಿ ಹಿಂದೆ ಗೆಳೆಯರ ಕನಸು

ವರ್ಷಗಳ ಆಸೆ ಫ‌ಲಿಸಿತು

Team Udayavani, Aug 30, 2019, 5:00 AM IST

f-29

ಸಿನಿಮಾ ಸೆಳೆತವೇ ಹಾಗೆ. ಒಂದೊಮ್ಮೆ ಸಿನಿಮಾ ಮಾಡುವ ಆಸೆ ಹುಟ್ಟುಕೊಂಡರೆ ಅದು ವರ್ಷಗಳು ಕಳೆದರೂ ಆ ಆಸೆ ಬತ್ತುವುದಿಲ್ಲ. ಅಂಥದ್ದೊಂದು ಆಸೆ ಇಟ್ಟುಕೊಂಡಿದ್ದ ಮಾಧ್ಯಮ ಗೆಳೆಯರು ಕೊನೆಗೂ ಒಂದು ಸಿನಿಮಾ ಮಾಡುವ ಮೂಲಕ ಆಸೆ ಈಡೇರಿಸಿಕೊಂಡಿದ್ದಾರೆ. ಹೌದು, ‘ಗೋರಿ’ ಮೂಲಕ ಮಾಧ್ಯಮ ಗೆಳೆಯರು ಕನಸು ನನಸಾಗಿಸಿಕೊಂಡಿದ್ದಾರೆ.

ಹಾವೇರಿಯ ಚಾನೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಗೆಳೆಯರಿಗೆ ಸಿನಿಮಾ ಮಾಡಬೇಕೆಂಬ ಆಸೆ ಹೆಚ್ಚಾಗಿತ್ತು. ಆದರೆ, ಸರಿಯಾದ ಬೆಂಬಲ ಇರಲಿಲ್ಲ. ಗಾಂಧಿನಗರದ ದಾರಿಯೂ ಸಿಕ್ಕಿರಲಿಲ್ಲ. ಬರೋಬ್ಬರಿ ಎಂಟು ವರ್ಷಗಳ ಬಳಿಕ ಕೊನೆಗೂ ಆ ಆಸೆ ಈಡೇರಿಸಿಕೊಂಡ ತೃಪ್ತ ಭಾವ ಅವರದು. ಇಷ್ಟಕ್ಕೂ ಇಲ್ಲೀಗ ಹೇಳಹೊರಟಿರುವ ವಿಷಯ, ಮಾಧ್ಯಮದಲ್ಲಿ ಕೆಲಸ ಮಾಡುತ್ತಿರುವ ಗೋಪಾಲಕೃಷ್ಣ, ಕಿರಣ್‌, ಜಗ್ಗಿನ್‌ ಮತ್ತಿತರ ಗೆಳೆಯರ ಬಗ್ಗೆ. ಹೌದು, ಇವರೆಲ್ಲರೂ ಹಾವೇರಿಯ ಸ್ಥಳೀಯ ಚಾನೆಲ್ನಲ್ಲಿ ಕೆಲಸ ಮಾಡುತ್ತಿದ್ದವರು. ಈಗ ‘ಗೋರಿ’ ಸಿನಿಮಾ ಮಾಡಿದ್ದಾರೆ. ಇತ್ತೀಚೆಗೆ ಆ ಬಗ್ಗೆ ಹೇಳಲೆಂದೇ ಪತ್ರಕರ್ತರ ಮುಂದೆ ಬಂದಿದ್ದರು.

ಮೊದಲು ಮಾತಿಗಿಳಿದದ್ದು ನಿರ್ದೇಶಕ ಗೋಪಾಲಕೃಷ್ಣ. ‘ಹೀರೋ ಆಗಬೇಕೆಂಬ ಕಿರಣ್‌ ಆಸೆ ಈಡೇರಿದೆ. ಇದು ಪ್ರೀತಿ ಮತ್ತು ಸ್ನೇಹದ ನಡುವಿನ ಕಥೆ. ಸತ್ತ ಮೇಲೆ ಪ್ರತಿ ಮನುಷ್ಯನ ಗೋರಿಗೆ ಅದರದ್ದೇ ಆದ ಜೀವನದ ಕಥೆ ಇರುತ್ತೆ. ಈ ಚಿತ್ರದಲ್ಲಿ ಆ ಗೋರಿಯ ಕಥೆಯನ್ನ ಮೂರು ಜನ ಹೇಳುತ್ತಾ ಹೋಗುತ್ತಾರೆ. ಯಾರ ಗೋರಿಯ ಕಥೆ ಹೇಳುತ್ತಾರೆ ಎಂಬುದು ಒನ್‌ಲೈನ್‌. ಜಾತಿ ಮತ್ತು ಧರ್ಮಕ್ಕಿಂತ ಮಿಗಿಲಾದದ್ದು ಸ್ನೇಹ ಮತ್ತು ಪ್ರೀತಿ. ಆ ಪ್ರೀತಿ, ಮತ್ತು ಸ್ನೇಹಕ್ಕಿಂತ ಮಿಗಿಲಾದದ್ದು ಮಾನವೀಯತೆ. ಆ ವಿಷಯವನ್ನೇ ಇಲ್ಲಿ ಸೂಕ್ಷ್ಮವಾಗಿ ಹೇಳಹೊರಟಿದ್ದೇನೆ’ ಎಂದರು ಗೋಪಾಲಕೃಷ್ಣ.

ನಾಯಕ ಕಿರಣ್‌ ಮಾತನಾಡಿ, ‘ನಿಜಕ್ಕೂ ನಾನು ಅಂದುಕೊಂಡಿರಲಿಲ್ಲ. ನನ್ನ ಪ್ರಯತ್ನಕ್ಕೆ ಗೆಳೆಯರ ಇಷ್ಟೊಂದು ಸಹಕಾರ ಸಿಗುತ್ತೆ ಅಂತ. ಆಸೆ ಇಟ್ಟುಕೊಂಡೇ ಈ ಕ್ಷೇತ್ರಕ್ಕೆ ಬಂದವನು. ಇದು ನಿನ್ನೆ ಮೊನ್ನೆಯ ಕನಸಲ್ಲ. ಹಾವೇರಿಯ ಲೋಕಲ್ ಚಾನೆಲ್ನಲ್ಲಿ ಕೆಲಸ ಮಾಡುವಾಗ ಸಿನಿಮಾ ಪ್ರಯತ್ನ ಇತ್ತು. ನಾನು, ನಿರ್ದೇಶಕ ಗೋಪಾಲಕೃಷ್ಣ, ಗೀತೆ ಬರೆದ ಮಾಲತೇಶ್‌ ಜಗ್ಗಿನ್‌ ಎಲ್ಲರೂ ಒಟ್ಟಿಗೆ ಬೆಳೆದವರು. ಎಲ್ಲೋ ಒಂದು ಕಡೆ ವಿಶ್ವಾಸ ಇತ್ತು. ಆ ಕನಸು ಸಾಕಾರವಾಗಲು ಇಷ್ಟು ವರ್ಷವಾಯ್ತು. ನಿರ್ದೇಶಕ ಗೆಳೆಯ ನನಗಾಗಿ ಎರಡು ವರ್ಷದ ಹಿಂದೆ ಒಳ್ಳೆಯ ಕೆಲಸ ಬಿಟ್ಟು, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಿತ್ರ ಮಾಡಿದ್ದಾರೆ.ಚಿತ್ರಕ್ಕೆ ಇನ್ನು ಫೈಟ್ ಮತ್ತು ಒಂದು ಹಾಡು ಬಾಕಿ ಇದೆ’ ಎಂದರು ಕಿರಣ್‌.

ಚಿತ್ರಕ್ಕೆ ವಿನು ಮನಸು ಸಂಗೀತ ನೀಡಿದ್ದು, ನಾಲ್ಕು ಹಾಡುಗಳನ್ನು ಕೊಟ್ಟಿದ್ದಾರೆ. ಚಿತ್ರಕ್ಕೆ ಮೊದಲ ಸಲ ಎರಡು ಹಾಡು ಬರೆದಿರುವ ಪತ್ರಕರ್ತ ಮಾಲತೇಶ್‌ ಜಗ್ಗಿನ್‌, ‘ನನಗಿದು ಮೊದಲ ಅನುಭವ. ಇಲ್ಲಿ ಭಾವನೆಗಳ ನೋಟವಿದೆ. ಕಥೆಗೆ ಪೂರಕವಾದ ಹಾಡು ರಚಿಸಿದ್ದೇನೆ’ ಎಂದ ಜಗ್ಗಿನ್‌, ಕೆ.ಕಲ್ಯಾಣ್‌, ಶಿವುಬೇರಗಿ ಸಾಹಿತ್ಯವಿದೆ ಎಂದರು. ನಾಯಕಿ ಸ್ಮಿತಾ ಪಾತ್ರ ಕುರಿತು ಹೇಳಿಕೊಂಡರು. ಶ್ರೇಯಾ ಅಂಜಶ್ರೀ, ಪ್ರಕಾಶ್‌, ನಿವೃತ್ತ ಶಿಕ್ಷಕ ಎಚ್.ಡಿ.ಜಗ್ಗಿನ್‌, ಛಾಯಾಗ್ರಾಹಕ ಮಂಜುನಾಥ್‌ ಹೆಗಡೆ ಮಾತನಾಡಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.