ಮಳೆಯಿಲ್ಲದೇ ಕಾರಂಜಾ ಖಾಲಿಖಾಲಿ

ಕುಡಿವ ನೀರಿಗೆ ಜನರು ತತ್ತರಿಸುವ ಸ್ಥಿತಿ•ಒಂದು ವಾರದಲ್ಲಿ ಮಳೆ ಸುರಿಯದಿದ್ದರೆ ಒಣಗಲಿವೆ ಬೆಳೆಗಳು

Team Udayavani, Aug 30, 2019, 10:42 AM IST

30-Agust-4

ಸಾಂದರ್ಭಿಕ ಚಿತ್ರ

ದುರ್ಯೋಧನ ಹೂಗಾರ
ಬೀದರ: ಬೀದರ, ಹುಮನಾಬಾದ, ಚಿಟಗುಪ್ಪ, ಹಳ್ಳಿಖೇಡ(ಬಿ), ಭಾಲ್ಕಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕುಡಿವ ನೀರು ಪೂರೈಸುತ್ತಿರುವ ಕಾರಂಜಾ ಜಲಾಶಯದಲ್ಲಿ ನೀರಿನ ಒಳ ಹರಿವು ಇಲ್ಲದೆ ಬರಡಾಗಿದೆ.

ಸದ್ಯ ಜಿಲ್ಲೆಯಲ್ಲಿ ಶೇ.63 ಮಳೆ ಸುರಿದರೂ ಕಾರಂಜಾ ಜಲಾಶಯಕ್ಕೆ 0.143 ಟಿಎಂಸಿ ನೀರು ಮಾತ್ರ ಒಳಹರಿವು ಬಂದಿದೆ. ಒಟ್ಟಾರೆ 1.262 ಟಿಎಂಸಿ ನೀರು ಸಂಗ್ರಹ ಇದೆ. ಆದರೆ, 0.375 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿಲ್ಲ. ಸದ್ಯ 0.887 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಮುಂದಿನ ಚಳಿಗಾಲದಲ್ಲಿ ಭೀಕರ ಬರಗಾಲ ಸ್ಥಿತಿ ನಿರ್ಮಾಣಗೊಂಡು ಕುಡಿಯುವ ನೀರಿಗೆ ಜನರು ತತ್ತರಿಸುವ ಸ್ಥಿತಿ ಬಂದೊದಗಲಿದೆ. ಇನ್ನೂ ಒಂದು ತಿಂಗಳ ಕಾಲ ಮಳೆಗಾಲ ಇದ್ದು, ಉತ್ತಮ ಮಳೆ ಸುರಿದರೆ ಮಾತ್ರ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪುತ್ತದೆ.

ಬೀದರ, ಭಾಲ್ಕಿ, ಹುಮನಾಬಾದ, ಚಿಟಗುಪ್ಪ, ಹಳ್ಳಿಖೇಡ, ಔರಾದ ಸೇರಿದಂತೆ ವಿವಿಧೆಡೆಗಳಲ್ಲಿ ನೀರಿನ ಆಭಾವ ಹೆಚ್ಚಾಗುತ್ತಿದ್ದು, ಆಯಾ ಭಾಗದಲ್ಲಿನ ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಈ ವರ್ಷ ಸರಾಸರಿ 572 ಮಿ.ಮೀ. ಮಳೆಯ ಪೈಕಿ 362 ಮಿ.ಮೀ ಮಳೆಯಾಗಿದೆ. ಸದ್ಯಕ್ಕೆ ಶೇ. 37 ಮಳೆ ಕೊರತೆ ಜಿಲ್ಲೆಗೆ ಕಾಡುತ್ತಿದೆ. ಶೇ.63 ಮಳೆಯಾಗಿದ್ದರೂ ಕೂಡ ಅಂತರ್ಜಲದಲ್ಲಿ ನೀರಿಲ್ಲ.

ಮುಂದಿನ ಒಂದು ವಾರದಲ್ಲಿ ಮಳೆ ಸುರಿಯದಿದ್ದರೆ ಬೆಳೆಗಳು ಒಣಗುವ ಹಂತ ಶುರುವಾಗುತ್ತದೆ. ಬೆಳೆಗಳಲ್ಲಿ ಕೀಟಬಾಧೆ ಕಂಡು ಬರುತ್ತಿದ್ದು, ರೈತರು ಕಿಟನಾಶಕಗಳು ಬಳಸುತ್ತಿದ್ದಾರೆ. ಸೆಪ್ಟೆಂಬರ್‌ ತಿಂಗಳಲ್ಲಿ 170 ಮಿ.ಮೀ ಮಳೆ ಆಗಬೇಕಿದ್ದು, ಸೂಕ್ತ ಮಳೆ ಆದರೆ ಮಾತ್ರ ರೈತರ ಬೆಳೆಗಳು ಉತ್ತಮವಾಗಿ ಬೆಳೆಯುತ್ತವೆ ಎನ್ನುತ್ತಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ವಿದ್ಯಾನಂದ ಹೇಳುತ್ತಾರೆ.

ಮಳೆಗಾಲ ಮುಗಿಯುತ್ತ ಬಂದರೂ ಸೂಕ್ತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ರೈತರು ಕೂಡ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿನ ಕೊಳವೆಬಾವಿಗಳು ಬೋರಲು ಬಿದ್ದಿವೆ.ಸದ್ಯದ ಸ್ಥಿತಿಯಲ್ಲಿ ಬೆಳೆಗಳು ಉತ್ತಮವಾಗಿದ್ದು, ಮಳೆ ಕೊರತೆ ಮುಂದುವರಿದರೆ ಬೆಳೆಗಳ ಸ್ಥಿತಿಕೂಡ ಹಾಳಾಗುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.

ಜಿಲ್ಲೆಯಲ್ಲಿ ಈವರೆಗೆ ಶೆ. 37 ಮಳೆ ಕೊರತೆ ಇದೆ. ಜಿಲ್ಲೆಯ ವಿವಿಧೆಡೆ ಹೆಸರು ಬೆಳೆಗಳ ಕಟಾವು ನಡೆಯುತ್ತಿದೆ. ಅಲ್ಲದೆ, ರೈತರಿಂದ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕನಿಷ್ಠ 7,050 ರೂ. ಬೆಲೆ ನಿಗದಿ ಮಾಡುವಂತೆ ಹಾಗೂ ಜಿಲ್ಲೆಯಲ್ಲಿ 30 ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
ಸಿ.ವಿದ್ಯಾನಂದ,
 ಕೃಷಿ ಇಲಾಖೆ ಜಂಟಿ ನಿರ್ದೇಶಕ

 

ಟಾಪ್ ನ್ಯೂಸ್

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.