ಹಬ್ಬದ ಪ್ರಯಾಣ ಬಲು ದುಬಾರಿ

•ದುಪ್ಪಟ್ಟು ದರದಿಂದ ಜನ ಹೈರಾಣ •ಗಣಪತಿ ಹಬ್ಬಕ್ಕೆ ಗಗನಕ್ಕೇರಿದ ಖಾಸಗಿ ಬಸ್‌ ದರ

Team Udayavani, Aug 30, 2019, 11:06 AM IST

Udayavani Kannada Newspaper

ಬೆಳಗಾವಿ: ಊರು ಬಿಟ್ಟು ರಾಜಧಾನಿಯಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಜನರಿಗೆ ಹಬ್ಬಗಳು ಬಂದರೆ ಖಾಸಗಿ ಸಾರಿಗೆ ಸಂಸ್ಥೆಗಳು ನೀಡುವ ಶಾಕ್‌ ತಡೆದುಕೊಳ್ಳಲು ಆಗುವುದಿಲ್ಲ. ಹಬ್ಬಗಳು ಸಮೀಪಿಸುತ್ತಿದ್ದಂತೆ ಬಸ್‌ ದರ ವಿಪರೀತ ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಬೀಳುವುದಂತೂ ಗ್ಯಾರಂಟಿ.

ಉತ್ತರ ಕರ್ನಾಟಕದ ಬಹುತೇಕ ಯುವಕ, ಯುವತಿಯರು ರಾಜಧಾನಿ ಬೆಂಗಳೂರಿನಲ್ಲಿ ದುಡಿಯಲು ಹೋಗಿದ್ದಾರೆ. ವರ್ಷಕ್ಕೆ ಮೂರ್‍ನಾಲ್ಕು ಹಬ್ಬಗಳಿದ್ದಾಗ ಊರಿಗೆ ಬರಲು ಹಾತೊರೆಯುತ್ತಿರುತ್ತಾರೆ. ಆದರೆ ಸಾರಿಗೆ ಸಂಸ್ಥೆಗಳು ಬಸ್‌ ದರ ದಿಢೀರ್‌ ಹೆಚ್ಚಳ ಮಾಡುವ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿವೆ. ಸಾಮಾನ್ಯ ದಿನಗಳಿಗಿಂತಲೂ ನಾಲ್ಕೈದು ಪಟ್ಟು ಹೆಚ್ಚು ಹಣ ನೀಡಿ ಊರಿಗೆ ಬರಬೇಕಾದ ಅನಿವಾರ್ಯತೆ ಈಗ ಉದ್ಭವವಾಗಿದೆ.ಹಬ್ಬ ಕಹಿ: ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಗದಗ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಜನರು ಬೆಂಗಳೂರು, ಮೈಸೂರು, ಮಂಗಳೂರು, ತುಮಕೂರು ಮಹಾನಗರಗಳಲ್ಲಿ ದುಡಿಯುತ್ತಿದ್ದಾರೆ. ಗಣೇಶೋತ್ಸವ, ದೀಪಾವಳಿ, ದಸರಾ ಹಬ್ಬಗಳಿಗೆ ರಜೆ ಪಡೆದು ಊರಿಗೆ ಬರುತ್ತಿರುತ್ತಾರೆ. ರೈಲ್ವೆ ಹಾಗೂ ಸರ್ಕಾರಿ ಸಾರಿಗೆ ಬಸ್‌ಗಳು ಸೀಟ್ ಫುಲ್ ಆದಾಗ ಅನಿವಾರ್ಯವಾಗಿ ಖಾಸಗಿ ಸಾರಿಗೆಗಳನ್ನು ಅವಲಂಬಿಸಿದಾಗ ಬಸ್‌ ದರ 2-3 ಸಾವಿರ ರೂ. ಮುಟ್ಟಿರುತ್ತದೆ. ಸದ್ಯ ಗಣಪತಿ ಹಬ್ಬಕ್ಕಾಗಿ ಲಕ್ಷಾಂತರ ಜನರು ಬೆಂಗಳೂರಿನಿಂದ ತಮ್ಮ ಊರಿಗೆ ಬರುತ್ತಿರುತ್ತಾರೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳುವ ಖಾಸಗಿ ಬಸ್‌ನವರು ಹಬ್ಬದ 2-3 ತಿಂಗಳ ಮುಂಚೆಯೇ ಹೆಚ್ಚು ದರ ನಿಗದಿ ಪಡಿಸುತ್ತಾರೆ. ಆನ್‌ಲೈನ್‌ನಲ್ಲಿ ಬಸ್‌ ಸೀಟ್ ಕಾಯ್ದಿರಿಸಲು ಎರಡು ತಿಂಗಳ ಮುಂಚೆ ಮಾಡಿದರೂ 2 ಸಾವಿರ ದರ ನಿಗದಿ ಪಡಿಸಿರುತ್ತಾರೆ. ಇದರಿಂದ ಜನರು ಈ ದರ ಮಾಫಿಯಾದಿಂದ ರೋಸಿ ಹೋಗಿದ್ದಾರೆ.

ರೈಲು ಸಂಚಾರ ಅನುಕೂಲ: ಈ ಬಸ್‌ ದರ ಹಾವಳಿಯಿಂದ ತಪ್ಪಿಸಲು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಕಳೆದ ಎರಡು ತಿಂಗಳಿಂದ ಬೆಳಗಾವಿ-ಬೆಂಗಳೂರು ನೂತನ ಎಕ್ಸಪ್ರಸ್‌ ರೈಲು ಆರಂಭಿಸಿದ್ದು, ಇದು ನಿತ್ಯ ಸಂಚರಿಸುತ್ತಿದೆ. ಇದರಿಂದಾಗಿ ಎಷ್ಟೋ ಜನರಿಗೆ ಅನುಕೂಲಕರವಾಗಿದೆ. ರಾಣಿ ಚನ್ನಮ್ಮ ಎಕ್ಸಪ್ರಸ್‌ ಹಾಗೂ ಹೊಸ ರೈಲು ಸಂಚಾರದಿಂದ ಹೆಚ್ಚಿನ ಸಂಖ್ಯೆಯ ಜನರು ಈ 2 ರೈಲುಗಳ ಮೇಲೆ ಅವಲಂಬನೆಯಾಗಿದ್ದಾರೆ. ಸರ್ಕಾರಿ ಬಸ್‌ ಹಾಗೂ ರೈಲುಗಳು ಭರ್ತಿ ಆಗಿದ್ದರಿಂದ ಜನರು ಖಾಸಗಿ ಬಸ್‌ಗಳಲ್ಲಿ ಬರುತ್ತಾರೆ. ಆದರೆ ಎಸಿ, ನಾನ್‌ ಎಸಿಗಳ ದರ ನೋಡಿದರೆ ತಲೆ ತಿರುಗಿ ಬೀಳುವುದು ಖಚಿತ. ಆದ್ದರಿಂದ ಖಾಸಗಿ ಬಸ್‌ ದರಗಳಿಗೆ ಕಡಿವಾಣ ಹಾಕಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುತ್ತಾರೆ ಪ್ರಯಾಣಿಕರು.

 

•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.