ಸಂಶಯಾಸ್ಪದ ನಕಲಿ ಕೃಷಿ ಪರಿಕರ ವಶಕ್ಕೆ

ಜಾಗೃತಿ ಕೋಶದಿಂದ ಜಿಲ್ಲೆಯಲ್ಲಿ ಮೂರು ದಿನ ಪರಿಶೀಲನೆ •ಜೈವಿಕ ಮಾದರಿ ಹೆಸರಲ್ಲೂ ನಕಲಿ ಮಾರಾಟ ಪತ್ತೆ: ಅನೂಪ್‌

Team Udayavani, Aug 30, 2019, 3:02 PM IST

30-Agust-23

ರಾಯಚೂರು: ಕೃಷಿ ಇಲಾಖೆ ಕಚೇರಿಯಲ್ಲಿ ಬೆಂಗಳೂರಿನ ಕೃಷಿ ಇಲಾಖೆ ಜಾಗೃತ ಕೋಶದ ಅಪರ ನಿರ್ದೇಶಕ ಅನೂಪ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಯಚೂರು: ಕೃಷಿಗೆ ಬಳಸುವ ರಾಸಾಯನಿಕ, ಕ್ರಿಮಿನಾಶಕಗಳಲ್ಲಿ ನಕಲಿ ಕಂಪನಿಗಳ ಹಾವಳಿ ಕಂಡುಬಂದಿದ್ದು, ಈ ವಿಚಾರವಾಗಿ ನಡೆಸಿದ ದಾಳಿಯಲ್ಲಿ ಕಂಡುಬಂದ ಸಂಶಯಾಸ್ಪದ 10 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬೆಂಗಳೂರಿನ ಕೃಷಿ ಇಲಾಖೆಯ ಜಾಗೃತ ಕೋಶದ ಅಪರ ನಿರ್ದೇಶಕ ಅನೂಪ್‌ ತಿಳಿಸಿದರು.

ನಗರದ ಕೃಷಿ ಇಲಾಖೆ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಚಟುವಟಿಕೆಗಳು ಬಿರುಸುಗೊಂಡಿದ್ದು, ಕೃಷಿ ಪರಿಕರಗಳ ಗುಣ ನಿಯಂತ್ರಣ ಪರೀಕ್ಷಿಸಲು ಕೃಷಿ ಪರಿಕರ ಮಳಿಗೆಳಿಗೆ ಹಠಾತ್‌ ದಾಳಿ ನಡೆಸಲಾಯಿತು. ಈ ವೇಳೆ ಅನಧಿಕೃತ ಕಂಪನಿಗಳ ಕ್ರಿಮಿನಾಶಕಗಳು ಕಂಡು ಬಂದರೆ, ಕೆಲವೊಂದು ಜೈವಿಕ ಮಾದರಿ ಹೆಸರಿನಲ್ಲಿ ಮಾರಾಟ ಮಾಡುತ್ತಿರುವ ಅಂಶ ಪತ್ತೆಯಾಗಿದೆ. ಆದರೆ, ಜೈವಿಕ ಮಾದರಿ ಹೆಸರಿನಲ್ಲೂ ನಕಲಿ ಕ್ರಿಮಿನಾಶಕ ಮಾರುವ ಸಂಶಯ ಬಂದಿದೆ. ಅಂಥ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಸೇರಿದಂತೆ ವಿವಿಧ ಕೃಷಿ ಪರಿಕರಗಳನ್ನು ಇಲಾಖೆಯಿಂದ ಪರವಾನಗಿ ಪಡೆದ ಉತ್ಪಾದಕರಿಂದಲೇ ಖರೀದಿಸಬೇಕು. ಪರವಾನಗಿ ಇಲ್ಲದ ಮಳಿಗೆಗಳಲ್ಲಿ ರೈತರು ಖರೀದಿಸಲೇಬಾರದು ಎಂದು ಜಾಗೃತಿ ಮೂಡಿಸಲಾಗಿದೆ ಎಂದರು.

ಸುಮಾರು 54 ರಸಗೊಬ್ಬರ ಹಾಗೂ ಪೀಡೆನಾಶಕ ಮಾರಾಟ ಮಳಿಗೆಗಳಿಗೆ ಪರಿವೀಕ್ಷಕರು ಭೇಟಿ ನೀಡಿದ್ದರು. ಪರವಾನಗಿ ಪಡೆಯದೇ ಮಾರುತ್ತಿದ್ದ 86 ಜೈವಿಕ ಪೀಡೆನಾಶಕಗಳು, ಸಸ್ಯ ಸಂವರ್ಧಕಗಳು ಪತ್ತೆಯಾಗಿದ್ದು ಒಟ್ಟು 1576.45 ಲೀಟರ್‌ ದಾಸ್ತಾನು ಮಾಡಿದ್ದ ವಿವಿಧ ಕೃಷಿ ಪರಿಕರಗಳ ಮಾರಾಟಕ್ಕೆ ತಡೆಯಾಜ್ಞೆ ನೀಡಲಾಗಿದೆ ಎಂದು ತಿಳಿಸಿದರು.

ವಿವಿಧ ಕೃಷಿ ಪರಿಕರಗಳ ಉತ್ಪಾದಕ ಸಂಸ್ಥೆಯ ಪ್ರತಿನಿಧಿಗಳ ಪರವಾನಗಿ ಪಡೆದಿರುವ ಕುರಿತು ಖಾತರಿಪಡಿಸಿಕೊಂಡು ನಂತರ ಪರಿಕರಗಳನ್ನು ಸರಬರಾಜು ಮಾಡಬೇಕಿದೆ. ರೈತರು ಕೂಡ ಯಾವುದೇ ಕೃಷಿ ಪರಿಕರ ಖರೀದಿಸುವಾಗ ಜಾಗೃತರಾಗಿರಬೇಕು. ಪರವಾನಗಿ ಹೊಂದಿದವರ ಬಳಿ ಮಾತ್ರ ಖರೀದಿಸಬೇಕು. ಹಣ ಪಾವತಿಸಿದ ರಶೀದಿ ಪಡೆದು ತೆಗೆದಿಡಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ| ಚೇತನಾ ಪಾಟೀಲ ಮಾತನಾಡಿ, ಬಿಟಿ ಹತ್ತಿಗೆ ಕಾಯಿಕೊರಕ ರೋಗ ಬರುವ ಕಾರಣ ರೈತರು ಅದರ ಜತೆಗೆ ಬಲೆ ಬೆಳೆ ಕೂಡ ಬೆಳೆಯಬೇಕು ಎಂದು ತಿಳಿಸಲಾಗಿದೆ. ಆದರೆ, ಸಾಕಷ್ಟು ರೈತರು ಅದನ್ನು ಬೆಳೆಯದ ಕಾರಣ ರೋಗ ಮತ್ತೆ ಹರಡುತ್ತದೆ. 90 ದಿನ ಆದ ಕೂಡಲೇ ಬಿಟಿ ಹತ್ತಿಯಲ್ಲಿರುವ ಶಕ್ತಿ ಕುಗ್ಗಲಿದೆ. ಇದರಿಂದ ಕಾಯಿಲೆ ಸುಲಭವಾಗಿ ಹರಡಲಿದೆ. ಅದಲ್ಲದೇ, ಗುಲಾಬಿ ಕಾಯಿಕೊರಕ ರೋಗ ಭೂಮಿಯಲ್ಲಿ ಸೇರಿದ ಕನಿಷ್ಠ ಮೂರು ವರ್ಷವಾದರೂ ಅದು ನಿರ್ನಾಮವಾಗುವುದಿಲ್ಲ. ಈ ಎಲ್ಲ ಕಾರಣದಿಂದ ರೈತರು ಎಚ್ಚರಿಕೆ ವಹಿಸಲೇಬೇಕು ಎಂದರು. ಜಾಗೃತಿ ಕೋಶದ ಜಂಟಿ ನಿರ್ದೇಶಕ ಶಿವನಗೌಡ ಇದ್ದರು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.